ರಾಜ್ಯ

ತಿರುಪತಿ ಲಡ್ಡು ಪ್ರಕರಣ: ತಿರುಮಲ ದೇಗುಲದಲ್ಲಿ ನೆರವೇರಿದ ಶಾಂತಿ ಹೋಮ

ಹೈದರಾಬಾದ್‌: ತಿರುಪತಿ ದೇಗುಲದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆಯಾಗಿರುವ ಪ್ರಕರಣದ ಹಿನ್ನೆಲೆಯಲ್ಲಿ ದೇವಾಲಯ ಶುದ್ಧೀಕರಣದ ಕುರಿತು ಸಂಪ್ರೋಕ್ಷಣ ಕಾರ್ಯ ಭಾಗವಾಗಿ ಇಂದು ಶಾಂತಿ ಹೋಮವನ್ನು ತಿರುಪತಿ ತಿರುಮಲ ದೇವಸ್ಥಾನ ಏರ್ಪಡಿಸಿತ್ತು.

ಇಂದು ಆಂಧ್ರದ ತಿರುಪತಿ ದೇವಾಲಯದಲ್ಲಿ ಸಂಪ್ರೋಕ್ಷಣ ಶಾಂತಿ ಹೋಮವನ್ನು ಹಮ್ಮಿಕೊಳ್ಳಲಾಗಿತ್ತು. ಹೋಮದಲ್ಲಿ ತಿರುಪತಿ ತಿರುಮಲ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಶಾಮಲಾರಾವ್‌, ಆಡಳಿತ ಮಂಡಳಿಯ ಅಧಿಕಾರಿಗಳು ಹಾಗೂ ಅನೇಕ ಅರ್ಚಕರು ಭಾಗವಹಿಸಿದ್ದರು.

ದೇವಸ್ಥಾನದಲ್ಲಿ ನಾಲ್ಕು ಗಂಟೆಗಳ ಕಾಲ ಶಾಂತಿ ಹೋಮ ಪಂಚಗವ್ಯ ಪ್ರೊಕ್ಷಣೆ ಶುದ್ದೀಕರಣ ಕಾರ್ಯ ನಡೆಸಲಾಗಿದೆ ಎಂದು ದೇವಾಲಯದ ಮೂಲಗಳಿಂದ ತಿಳಿದುಬಂದಿದೆ.

ಆ ಆಚರಣೆಗಳಿಂದ ಕೆಟ್ಟದ್ದನ್ನು ನಿವಾರಿಸುತ್ತದೆ. ಸಾರ್ವಜನಿಕರ ಯೋಗಕ್ಷೇಮದ ಜೊತೆಗೆ ಲಡ್ಡುವಿನ ಪಾವಿತ್ರ್ಯತೆಯನ್ನು ಪುನರ್‌ ಸ್ಥಾಪಿಸುತ್ತದೆ ಎಂದು ಟಿಟಿಡಿ ತಿಳಿಸಿದೆ.

 

 

ಆಂದೋಲನ ಡೆಸ್ಕ್

Recent Posts

ಸೇವೆ, ಶಿಕ್ಷಣ, ಸಂಸ್ಕಾರದ ಸಂಗಮವಾಗಿದ್ದ ರಾಜೇಂದ್ರ ಶ್ರೀ

ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…

35 mins ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…

39 mins ago

ಗಾಂಧಿವಾದಕ್ಕೆ ಮರುಳಾಗಿದ್ದ ಮೈಸೂರಿನ ಯಶೋಧರಾ ದಾಸಪ್ಪ

ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…

46 mins ago

ಅಸತ್ಯ ಎಂಬುದು ಕೆಟ್ಟ ವ್ರಣದ ಹಾಗೆ

ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…

53 mins ago

ಮಳೆ ಕೊರತೆ; ಸಂಕಷ್ಟದಲ್ಲಿ ಅವಳಿ ತಾಲ್ಲೂಕುಗಳ ರೈತರು

ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…

58 mins ago