Tirupati Thimmappa temple
ತಿರುಪತಿ: ಹಿಂದೂಗಳ ಪವಿತ್ರ ಧಾರ್ಮಿಕ ಕ್ಷೇತ್ರವಾದ ತಿರುಪತಿ- ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನಕ್ಕೆ ಒಂದೇ ದಿನ ಹುಂಡಿಗೆ ದಾಖಲೆಯ 5.3 ಕೋಟಿ ಸಂಗ್ರಹವಾಗಿದೆ.
ದೇವಸ್ಥಾನಕ್ಕೆ ಯಾತ್ರಾರ್ಥಿಗಳ ಆಗಮನ ತುಸು ಕಡಿಮೆಯಾಗಿದ್ದರೂ ಈ ಸಂಗ್ರಹಣೆಯು ಕಳೆದ ವರ್ಷದಲ್ಲಿ ದೇವಾಲಯವು ಸ್ವೀಕರಿಸಿದ ಅತಿ ಹೆಚ್ಚು ಏಕದಿನದ ಹುಂಡಿಯಾಗಿದೆ.
ತಿರುಮಲ ದೇವಸ್ಥಾನದಲ್ಲಿ 78,730 ಯಾತ್ರಿಕರು ಪೂಜೆ ಸಲ್ಲಿಸಿದ್ದಾರೆ. ಇದು ಸಾಮಾನ್ಯವಾಗಿ ಹಬ್ಬ ಹರಿದಿನಗಳು ಮತ್ತು ಬೇಸಿಗೆ ಕಾಲದಲ್ಲಿ ದಾಖಲಾಗುವ ಒಂದು ಲಕ್ಷ ಮತ್ತು ಅದಕ್ಕಿಂತ ಹೆಚ್ಚಿನ ಯಾತ್ರಾರ್ಥಿಗಳ ಸಂಖ್ಯೆಗಿಂತ ಕಡಿಮೆಯಾಗಿದೆ. ಸಾಮಾನ್ಯ ಜನದಟ್ಟಣೆಯ ಹೊರತಾಗಿಯೂ, ವಿಶ್ವದ ಅತ್ಯಂತ ಶ್ರೀಮಂತ ಹಿಂದೂ ದೇವಾಲಯದ ಹುಂಡಿಗೆ 5.3 ಕೋಟಿ ರೂ. ಕಾಣಿಕೆ ಹರಿದುಬಂದಿದೆ. ಇದು ಇದುವರೆಗಿನ ವರ್ಷದ ಅತ್ಯಧಿಕ ಕಾಣಿಕೆಯಾಗಿದೆ.
2023ರ ಜನವರಿ.2ರಂದು ಒಂದೇ ದಿನದಲ್ಲಿ ಅತಿ ಹೆಚ್ಚು ಹುಂಡಿ ಕಾಣಿಕೆ ಸಂಗ್ರಹವಾಗಿತ್ತು. ಆ ದಿನ ದೇವಾಲಯಕ್ಕೆ 7.68 ಕೋಟಿ ರೂ. ಒಂದೇ ದಿನದಲ್ಲಿ ಹರಿದುಬಂದಿತ್ತು. ಹಿಂದೆಯೂ 6 ಕೋಟಿಗೂ ಹೆಚ್ಚು ಕಾಣಿಕೆ ಸಂಗ್ರಹವಾಗಿರುವ ನಿದರ್ಶನ ಇದೆ.
ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…
ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…
ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…
ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…
ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…