Tirupati Thimmappa temple
ತಿರುಪತಿ: ಹಿಂದೂಗಳ ಪವಿತ್ರ ಧಾರ್ಮಿಕ ಕ್ಷೇತ್ರವಾದ ತಿರುಪತಿ- ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನಕ್ಕೆ ಒಂದೇ ದಿನ ಹುಂಡಿಗೆ ದಾಖಲೆಯ 5.3 ಕೋಟಿ ಸಂಗ್ರಹವಾಗಿದೆ.
ದೇವಸ್ಥಾನಕ್ಕೆ ಯಾತ್ರಾರ್ಥಿಗಳ ಆಗಮನ ತುಸು ಕಡಿಮೆಯಾಗಿದ್ದರೂ ಈ ಸಂಗ್ರಹಣೆಯು ಕಳೆದ ವರ್ಷದಲ್ಲಿ ದೇವಾಲಯವು ಸ್ವೀಕರಿಸಿದ ಅತಿ ಹೆಚ್ಚು ಏಕದಿನದ ಹುಂಡಿಯಾಗಿದೆ.
ತಿರುಮಲ ದೇವಸ್ಥಾನದಲ್ಲಿ 78,730 ಯಾತ್ರಿಕರು ಪೂಜೆ ಸಲ್ಲಿಸಿದ್ದಾರೆ. ಇದು ಸಾಮಾನ್ಯವಾಗಿ ಹಬ್ಬ ಹರಿದಿನಗಳು ಮತ್ತು ಬೇಸಿಗೆ ಕಾಲದಲ್ಲಿ ದಾಖಲಾಗುವ ಒಂದು ಲಕ್ಷ ಮತ್ತು ಅದಕ್ಕಿಂತ ಹೆಚ್ಚಿನ ಯಾತ್ರಾರ್ಥಿಗಳ ಸಂಖ್ಯೆಗಿಂತ ಕಡಿಮೆಯಾಗಿದೆ. ಸಾಮಾನ್ಯ ಜನದಟ್ಟಣೆಯ ಹೊರತಾಗಿಯೂ, ವಿಶ್ವದ ಅತ್ಯಂತ ಶ್ರೀಮಂತ ಹಿಂದೂ ದೇವಾಲಯದ ಹುಂಡಿಗೆ 5.3 ಕೋಟಿ ರೂ. ಕಾಣಿಕೆ ಹರಿದುಬಂದಿದೆ. ಇದು ಇದುವರೆಗಿನ ವರ್ಷದ ಅತ್ಯಧಿಕ ಕಾಣಿಕೆಯಾಗಿದೆ.
2023ರ ಜನವರಿ.2ರಂದು ಒಂದೇ ದಿನದಲ್ಲಿ ಅತಿ ಹೆಚ್ಚು ಹುಂಡಿ ಕಾಣಿಕೆ ಸಂಗ್ರಹವಾಗಿತ್ತು. ಆ ದಿನ ದೇವಾಲಯಕ್ಕೆ 7.68 ಕೋಟಿ ರೂ. ಒಂದೇ ದಿನದಲ್ಲಿ ಹರಿದುಬಂದಿತ್ತು. ಹಿಂದೆಯೂ 6 ಕೋಟಿಗೂ ಹೆಚ್ಚು ಕಾಣಿಕೆ ಸಂಗ್ರಹವಾಗಿರುವ ನಿದರ್ಶನ ಇದೆ.
ಲಖನೌ: ಉತ್ತರ ಪ್ರದೇಶದ ಅಲಿಗಂಜ್ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…
ಕೀನ್ಯಾ: ಕಾಂಗೋದಲ್ಲಿ ಎಬೋಲಾ ವೈರಸ್ನ ಅಟ್ಟಹಾಸ ಮುಂದುವರಿದಿದ್ದು, ದೇಶದಲ್ಲಿ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 1003ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ…
ಹಲಗೂರು: ಇಲ್ಲಿಗೆ ಸಮೀಪದ ಗಾಣಾಳು ಜಲಪಾತದಲ್ಲಿ ಈಜಲು ಇಳಿದಿದ್ದ ಯುವಕನೊಬ್ಬ ನೀರಿನಲ್ಲಿ ಸಿಲುಕಿ ಮೃತಪಟ್ಟಿರುವ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ.…
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…
ಲಂಡನ್: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ…