Tirupati Thimmappa temple
ತಿರುಪತಿ: ಹಿಂದೂಗಳ ಪವಿತ್ರ ಧಾರ್ಮಿಕ ಕ್ಷೇತ್ರವಾದ ತಿರುಪತಿ- ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನಕ್ಕೆ ಒಂದೇ ದಿನ ಹುಂಡಿಗೆ ದಾಖಲೆಯ 5.3 ಕೋಟಿ ಸಂಗ್ರಹವಾಗಿದೆ.
ದೇವಸ್ಥಾನಕ್ಕೆ ಯಾತ್ರಾರ್ಥಿಗಳ ಆಗಮನ ತುಸು ಕಡಿಮೆಯಾಗಿದ್ದರೂ ಈ ಸಂಗ್ರಹಣೆಯು ಕಳೆದ ವರ್ಷದಲ್ಲಿ ದೇವಾಲಯವು ಸ್ವೀಕರಿಸಿದ ಅತಿ ಹೆಚ್ಚು ಏಕದಿನದ ಹುಂಡಿಯಾಗಿದೆ.
ತಿರುಮಲ ದೇವಸ್ಥಾನದಲ್ಲಿ 78,730 ಯಾತ್ರಿಕರು ಪೂಜೆ ಸಲ್ಲಿಸಿದ್ದಾರೆ. ಇದು ಸಾಮಾನ್ಯವಾಗಿ ಹಬ್ಬ ಹರಿದಿನಗಳು ಮತ್ತು ಬೇಸಿಗೆ ಕಾಲದಲ್ಲಿ ದಾಖಲಾಗುವ ಒಂದು ಲಕ್ಷ ಮತ್ತು ಅದಕ್ಕಿಂತ ಹೆಚ್ಚಿನ ಯಾತ್ರಾರ್ಥಿಗಳ ಸಂಖ್ಯೆಗಿಂತ ಕಡಿಮೆಯಾಗಿದೆ. ಸಾಮಾನ್ಯ ಜನದಟ್ಟಣೆಯ ಹೊರತಾಗಿಯೂ, ವಿಶ್ವದ ಅತ್ಯಂತ ಶ್ರೀಮಂತ ಹಿಂದೂ ದೇವಾಲಯದ ಹುಂಡಿಗೆ 5.3 ಕೋಟಿ ರೂ. ಕಾಣಿಕೆ ಹರಿದುಬಂದಿದೆ. ಇದು ಇದುವರೆಗಿನ ವರ್ಷದ ಅತ್ಯಧಿಕ ಕಾಣಿಕೆಯಾಗಿದೆ.
2023ರ ಜನವರಿ.2ರಂದು ಒಂದೇ ದಿನದಲ್ಲಿ ಅತಿ ಹೆಚ್ಚು ಹುಂಡಿ ಕಾಣಿಕೆ ಸಂಗ್ರಹವಾಗಿತ್ತು. ಆ ದಿನ ದೇವಾಲಯಕ್ಕೆ 7.68 ಕೋಟಿ ರೂ. ಒಂದೇ ದಿನದಲ್ಲಿ ಹರಿದುಬಂದಿತ್ತು. ಹಿಂದೆಯೂ 6 ಕೋಟಿಗೂ ಹೆಚ್ಚು ಕಾಣಿಕೆ ಸಂಗ್ರಹವಾಗಿರುವ ನಿದರ್ಶನ ಇದೆ.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…