ಚೆನ್ನೈ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಡ್ಯಾಂಗಳು ಭರ್ತಿಯಾಗಿವೆ. ಪರಿಣಾಮ ಮಂಡ್ಯದ ಕೆಆರ್ಎಸ್ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ತಮಿಳುನಾಡಿನ ಮೆಟ್ಟೂರು ಜಲಾಶಯ ಭರ್ತಿಯತ್ತ ಸಾಗಿದ್ದು, ನೀರು ಬಿಡುಗಡೆ ಮಾಡುವಂತೆ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿದೆ.
120 ಅಡಿ ಎತ್ತರದ ಮೆಟ್ಟೂರು ಅಣೆಕಟ್ಟಿನ ನೀರಿನ ಮಟ್ಟ 111 ಅಡಿಗೆ ಏರಿದ್ದು, ಅಣೆಕಟ್ಟೆ ತುಂಬಲು ಕೇವಲ 7 ಅಡಿ ಮಾತ್ರ ಬಾಕಿ ಇದೆ. ಆದ್ದರಿಂದ ತಕ್ಷಣವೇ ಜಲಾಶಯದಿಂದ ನೀರು ಬಿಡಲು ಸೂಚನೆ ನೀಡಲಾಗಿದೆ.
ಕೆಆರ್ಎಸ್ ಜಲಾಶಯದಿಂದ ಕಳೆದ 10 ದಿನಗಳಿಂದ ನೀರನ್ನು ಹೊರಬಿಡಲಾಗುತ್ತಿರುವ ಪರಿಣಾಮ ಮೆಟ್ಟೂರು ಜಲಾಶಯ ಭರ್ತಿಯಾಗಿದ್ದು, ತಮಿಳುನಾಡಿನ ರೈತರ ಮೊಗದಲ್ಲಿ ಇನ್ನಿಲ್ಲದ ಸಂತೋಷ ಮನೆಮಾಡಿದೆ.
ಇನ್ನು ಜುಲೈ.29ರ ವೇಳೆಗೆ ಕರ್ನಾಟಕದಿಂದ ತಮಿಳುನಾಡಿಗೆ ಒಟ್ಟು 70 ಟಿಎಂಸಿಯಷ್ಟು ನೀರು ಹರಿದಿದ್ದು, ಈ ಬಾರಿ ಕಾವೇರಿ ನೀರು ವಿವಾದ ಬಗೆಹರಿಯಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…
ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…
ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…