ಚೆನ್ನೈ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಡ್ಯಾಂಗಳು ಭರ್ತಿಯಾಗಿವೆ. ಪರಿಣಾಮ ಮಂಡ್ಯದ ಕೆಆರ್ಎಸ್ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ತಮಿಳುನಾಡಿನ ಮೆಟ್ಟೂರು ಜಲಾಶಯ ಭರ್ತಿಯತ್ತ ಸಾಗಿದ್ದು, ನೀರು ಬಿಡುಗಡೆ ಮಾಡುವಂತೆ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿದೆ.
120 ಅಡಿ ಎತ್ತರದ ಮೆಟ್ಟೂರು ಅಣೆಕಟ್ಟಿನ ನೀರಿನ ಮಟ್ಟ 111 ಅಡಿಗೆ ಏರಿದ್ದು, ಅಣೆಕಟ್ಟೆ ತುಂಬಲು ಕೇವಲ 7 ಅಡಿ ಮಾತ್ರ ಬಾಕಿ ಇದೆ. ಆದ್ದರಿಂದ ತಕ್ಷಣವೇ ಜಲಾಶಯದಿಂದ ನೀರು ಬಿಡಲು ಸೂಚನೆ ನೀಡಲಾಗಿದೆ.
ಕೆಆರ್ಎಸ್ ಜಲಾಶಯದಿಂದ ಕಳೆದ 10 ದಿನಗಳಿಂದ ನೀರನ್ನು ಹೊರಬಿಡಲಾಗುತ್ತಿರುವ ಪರಿಣಾಮ ಮೆಟ್ಟೂರು ಜಲಾಶಯ ಭರ್ತಿಯಾಗಿದ್ದು, ತಮಿಳುನಾಡಿನ ರೈತರ ಮೊಗದಲ್ಲಿ ಇನ್ನಿಲ್ಲದ ಸಂತೋಷ ಮನೆಮಾಡಿದೆ.
ಇನ್ನು ಜುಲೈ.29ರ ವೇಳೆಗೆ ಕರ್ನಾಟಕದಿಂದ ತಮಿಳುನಾಡಿಗೆ ಒಟ್ಟು 70 ಟಿಎಂಸಿಯಷ್ಟು ನೀರು ಹರಿದಿದ್ದು, ಈ ಬಾರಿ ಕಾವೇರಿ ನೀರು ವಿವಾದ ಬಗೆಹರಿಯಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಸೋಮವಾರಪೇಟೆ: ಇಲ್ಲಿನ ಹೋಂಸ್ಟೇ ಒಂದರಲ್ಲಿ ಇಂದು ಬೆಳಿಗ್ಗೆ ಸಂಭವಿಸಿದ ಗ್ಯಾಸ್ ಸೋರಿಕೆಯಿಂದ ಮೈಸೂರಿನ ಯುವತಿ ಮೃತಪಟ್ಟಿದ್ದಾಳೆ. ಮೈಸೂರಿನ ಯರಗನಹಳ್ಳಿಯ ಪಾಪಣ್ಣ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಎಂಟು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ…
ಕೊಳ್ಳೇಗಾಲ: ತಾಲ್ಲೂಕಿನ ಜಕ್ಕಳ್ಳಿ ಬಳಿ ಚಿರತೆ ನಾಯಿಯೊಂದನ್ನು ಕೊಂದು ತಿಂದುಹಾಕಿದ್ದು, ಗ್ರಾಮಸ್ಥರು, ಕೂಲಿ ಕಾರ್ಮಿಕರು ಭಯಭೀತರಾಗಿದ್ದಾರೆ. ವೀರಮಾದು ಅವರ ತೋಟದ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆ ಮತ್ತು ಜಾಗತಿಕ ಮಾರುಕಟ್ಟೆಯಲ್ಲಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದ್ದರೂ, ಭಾರತದಲ್ಲಿ ಗೃಹಬಳಕೆಯ ಎಲ್ಪಿಜಿ ಸಿಲಿಂಡರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮೇವು ಮೇಯುವ ವೇಳೆ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿದ್ದ ಹಸುವನ್ನು ಅಗ್ನಿಶಾಮಕ…
ವಾಷಿಂಗ್ಟನ್: ಭಾರತದ ಜನನ ಪ್ರಮಾಣ ಗಣನೀಯವಾಗಿ ಕುಸಿತವಾಗುತ್ತಿದೆ. ಭಾರತದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲು ಅಗತ್ಯವಿರುವ ಜನಸಂಖ್ಯೆಗಿಂತ ಸಂತಾನೋತ್ಪತ್ತಿಯ ದರ ಕಡಿಮೆಯಾಗಿದೆ ಎಂದು…