ಚೆನ್ನೈ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಡ್ಯಾಂಗಳು ಭರ್ತಿಯಾಗಿವೆ. ಪರಿಣಾಮ ಮಂಡ್ಯದ ಕೆಆರ್ಎಸ್ ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ಬಿಡುಗಡೆ ಮಾಡಿರುವ ಹಿನ್ನೆಲೆಯಲ್ಲಿ ತಮಿಳುನಾಡಿನ ಮೆಟ್ಟೂರು ಜಲಾಶಯ ಭರ್ತಿಯತ್ತ ಸಾಗಿದ್ದು, ನೀರು ಬಿಡುಗಡೆ ಮಾಡುವಂತೆ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿದೆ.
120 ಅಡಿ ಎತ್ತರದ ಮೆಟ್ಟೂರು ಅಣೆಕಟ್ಟಿನ ನೀರಿನ ಮಟ್ಟ 111 ಅಡಿಗೆ ಏರಿದ್ದು, ಅಣೆಕಟ್ಟೆ ತುಂಬಲು ಕೇವಲ 7 ಅಡಿ ಮಾತ್ರ ಬಾಕಿ ಇದೆ. ಆದ್ದರಿಂದ ತಕ್ಷಣವೇ ಜಲಾಶಯದಿಂದ ನೀರು ಬಿಡಲು ಸೂಚನೆ ನೀಡಲಾಗಿದೆ.
ಕೆಆರ್ಎಸ್ ಜಲಾಶಯದಿಂದ ಕಳೆದ 10 ದಿನಗಳಿಂದ ನೀರನ್ನು ಹೊರಬಿಡಲಾಗುತ್ತಿರುವ ಪರಿಣಾಮ ಮೆಟ್ಟೂರು ಜಲಾಶಯ ಭರ್ತಿಯಾಗಿದ್ದು, ತಮಿಳುನಾಡಿನ ರೈತರ ಮೊಗದಲ್ಲಿ ಇನ್ನಿಲ್ಲದ ಸಂತೋಷ ಮನೆಮಾಡಿದೆ.
ಇನ್ನು ಜುಲೈ.29ರ ವೇಳೆಗೆ ಕರ್ನಾಟಕದಿಂದ ತಮಿಳುನಾಡಿಗೆ ಒಟ್ಟು 70 ಟಿಎಂಸಿಯಷ್ಟು ನೀರು ಹರಿದಿದ್ದು, ಈ ಬಾರಿ ಕಾವೇರಿ ನೀರು ವಿವಾದ ಬಗೆಹರಿಯಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…