ಬೆಂಗಳೂರು : ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳ ಮೇಲಿನ ಜಾಹೀರಾತುಗಳಲ್ಲಿ ತಂಬಾಕು ಉತ್ಪನ್ನಗಳ ಸೇವನೆಗೆ ಪ್ರಚೋದಿಸುವ ನೇರವಾದ ಅಥವಾ ಪರೋಕ್ಷವಾದ ಜಾಹೀರಾತುಗಳನ್ನು ಫೆ.15 ರೊಳಗೆ ತೆರವುಗೊಳಿಸಲು ಸೂಚನೆ ನೀಡಲಾಗಿದೆ.
ಸಾರಿಗೇತರ ಆದಾಯ ಹೆಚ್ಚಿಸಲು ಹಲವು ವರ್ಷಗಳಿಂದ ನಿಗಮದ ಬಸ್ಸುಗಳ ಮೇಲೆ ಜಾಹೀರಾತು ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಾರಿಗೆ ಸಚಿವರ ಸೂಚನೆಯಂತೆ ತಂಬಾಕು ಉತ್ಪನ್ನಗಳ ಜಾಹೀರಾತನ್ನು ತೆರವುಗೊಳಿಸಲಾಗುತ್ತಿದೆ ಎಂದು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಪಾಷ ತಿಳಿಸಿದ್ದಾರೆ.
ನಿಗಮದ ಬಸ್ಸುಗಳ ಮೇಲೆ ಅಡ್ವರ್ಟೈಸ್ಮೆಂಟ್ ಸ್ಟಾಂಡರ್ಡ್ ಕೌನ್ಸಿಲ್ ಆಫ್ ಇಂಡಿಯಾ ಕೋಡ್ ನಿಯಮಾವಳಿಗಳ ಅನ್ವಯ ಜಾಹೀರಾತುಗಳನ್ನು ಪ್ರದರ್ಶಿಸಲು ಅವಕಾಶವಿದೆ. ನಿಗಮದ ವಾಹನಗಳ ಮೇಲೆ ಪ್ರದರ್ಶಿತವಾಗುತ್ತಿರುವ ಜಾಹೀರಾತುಗಳ ಮೂಲಕ ನಿಗಮಕ್ಕೆ ಸಾರಿಗೇತರ ಆದಾಯ ಬರುತ್ತದೆ. ಬಸ್ಸುಗಳ ಮೇಲೆ ಪ್ರದರ್ಶಿತವಾಗುತ್ತಿರುವ ಜಾಹೀರಾತಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಲಿಖಿತ ಮನವಿ ಪಡೆದು ಕರಾರಿನ ನಿಯಮಾವಳಿಯಂತೆ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ.
ಕೆಲವು ವ್ಯಕ್ತಿಗಳು ಬಸ್ಸುಗಳ ಮೇಲಿರುವ ಜಾಹೀರಾತುಗಳನ್ನು ಅಕ್ರಮವಾಗಿ ತೆರವುಗೊಳಿಸುತ್ತಿರುವುದು ಕಾನೂನು ಬಾಹಿರವಾಗಿದೆ. ಅಂತಹ ವ್ಯಕ್ತಿಗಳ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿ ಎಫ್ಐಆರ್ ದಾಖಲಿಸಿ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳುವಂತೆ ನಿಗಮದ ಎಲ್ಲಾ ಹಿರಿಯ ವಿಭಾಗೀಯ ನಿಯಂತ್ರಣಾಽಕಾರಿಗಳಿಗೆ ನಿರ್ದೆಶನ ನೀಡಿದ್ದಾರೆ.
ಈ ಸಂಬಂಧ ಬಸ್ ನಿಲ್ದಾಣದ ಸಿಬ್ಬಂದಿಗಳು, ಚಾಲಕರು ಹಾಗೂ ಇತರೆ ಸಿಬ್ಬಂದಿಗಳಿಗೂ ಸೂಕ್ತ ತಿಳಿವಳಿಕೆ ನೀಡಲು ಅವರು ಸೂಚಿಸಿದ್ದಾರೆ.
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…