ಮಂಗಳೂರು : ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ೫ ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಮುಂಜಾಗ್ರತಾ ಕ್ರಮವಾಗಿ ಉತ್ತರ ಕನ್ನಡ ಜಿಲ್ಲೆಯ ೨ ತಾಲೂಕಿನ ಶಾಲಾ ಕಾಲೇಜಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ಹೊನ್ನಾವರ, ಕುಮಟಾ ಎರಡು ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಹೊರಡಿಸಿದ್ದಾರೆ. ಮಳೆಯ ಆರ್ಭಟ ಮುಂದುವರೆದಿದ್ದು, ಭಾರೀ ಮಳೆಗೆ ಶರಾವತಿ ಹಾಗೂ ಗುಂಡಬಾಳ ನದಿ ಉಕ್ಕಿಹರಿಯುತ್ತಿದೆ. ಇನ್ನು ಕಡತೋಕ ಗ್ರಾಮದಲ್ಲಿ ಪ್ರವಾಹಕ್ಕೆ ಸಿಲುಕಿದ್ದ ೨೦ಕ್ಕೂ ಹೆಚ್ಚು ಜನರನ್ನ NDRF ತಂಡ ರಕ್ಷಣೆ ಮಾಡಿದೆ.
ಇನ್ನು ಜಿಲ್ಲೆಯಾದ್ಯಂತ ೮ ಕಾಳಜಿ ಕೇಂದ್ರ ತೆರೆಯಲಾಗಿದ್ದು, ೩೧೩ ಜನರಿಗೆ ಆಶ್ರಯ ನೀಡಲಾಗಿದೆ. ಮಳೆಯಿಂದಾಗಿ ೨ ಮನೆಗಳು ತೀವ್ರ ಹಾನಿಯಾಗಿದ್ದು, ೧೩ ಮನೆಗಳಿಗೆ ಭಾಗಶಃ ಹಾನಿಯಾಗಿದೆ.
ಮಂಗಳೂರು : ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ನಡುವೆ ರಷ್ಯಾದಿಂದ 96 ಸಾವಿರ ಮೆಟ್ರಿಕ್ ಟನ್ ಕಚ್ಚಾತೈಲ…
ವಿಶ್ವಸಂಸ್ಥೆ : ಇರಾನ್ ವೈರಿಗಳು ಹಾಗೂ ಅವರೊಂದಿಗೆ ನಂಟು ಹೊಂದಿರುವ ರಾಷ್ಟ್ರಗಳಿಗೆ ಮಾತ್ರ ಹೊರ್ಮುಜ್ ಜಲಸಂಧಿ ಮುಚ್ಚಲಾಗಿದೆ ಎಂದು ವಿಶ್ವಸಂಸ್ಥೆಯ…
ಹನೂರು : ವಿಧಾನಸಭಾ ಕ್ಷೇತ್ರದ ಪ್ರಮುಖ ಜಲಾಶಯಗಳ ಪೈಕಿ ರಾಮನ ಗುಡ್ಡ ಜಲಾಶಯಕ್ಕೆ ಕಳೆದ ಎರಡು ತಿಂಗಳ ಹಿಂದೆ ಕಾವೇರಿ…
ಕೈರೋ: ತಾಂತ್ರಿಕ ದೋಷದಿಂದಾಗಿ ಕತಾರ್ ಹೆಲಿಕಾಪ್ಟರ್ ಅಪಘಾತವಾಗಿ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಸಚಿವಾಲಯ ಹೇಳಿದೆ. ಕತಾರ್ನ ಪ್ರಾದೇಶಿಕ ನೀರಿನಲ್ಲಿ…
ಬೆಂಗಳೂರು: ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ನಿವಾರಿಸಲು ತಮ್ಮ ಸರ್ಕಾರ ಕ್ರಮ ಕೈಗೊಂಡಿದ್ದು, 6ನೇ ಹಂತದ ಕಾವೇರಿ ನೀರು…
ವಾಷಿಂಗ್ಟನ್: ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಾಬಾ ಖಮೇನಿ ಎಲ್ಲಿದ್ದಾರೆ? ಬದುಕಿದ್ದಾರಾ? ಎಂದು ಅಮೇರಿಕಾ ಪ್ರಶ್ನೆ ಮಾಡಿದೆ.…