ಮಂಗಳೂರು : ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ೫ ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಮುಂಜಾಗ್ರತಾ ಕ್ರಮವಾಗಿ ಉತ್ತರ ಕನ್ನಡ ಜಿಲ್ಲೆಯ ೨ ತಾಲೂಕಿನ ಶಾಲಾ ಕಾಲೇಜಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ಹೊನ್ನಾವರ, ಕುಮಟಾ ಎರಡು ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಹೊರಡಿಸಿದ್ದಾರೆ. ಮಳೆಯ ಆರ್ಭಟ ಮುಂದುವರೆದಿದ್ದು, ಭಾರೀ ಮಳೆಗೆ ಶರಾವತಿ ಹಾಗೂ ಗುಂಡಬಾಳ ನದಿ ಉಕ್ಕಿಹರಿಯುತ್ತಿದೆ. ಇನ್ನು ಕಡತೋಕ ಗ್ರಾಮದಲ್ಲಿ ಪ್ರವಾಹಕ್ಕೆ ಸಿಲುಕಿದ್ದ ೨೦ಕ್ಕೂ ಹೆಚ್ಚು ಜನರನ್ನ NDRF ತಂಡ ರಕ್ಷಣೆ ಮಾಡಿದೆ.
ಇನ್ನು ಜಿಲ್ಲೆಯಾದ್ಯಂತ ೮ ಕಾಳಜಿ ಕೇಂದ್ರ ತೆರೆಯಲಾಗಿದ್ದು, ೩೧೩ ಜನರಿಗೆ ಆಶ್ರಯ ನೀಡಲಾಗಿದೆ. ಮಳೆಯಿಂದಾಗಿ ೨ ಮನೆಗಳು ತೀವ್ರ ಹಾನಿಯಾಗಿದ್ದು, ೧೩ ಮನೆಗಳಿಗೆ ಭಾಗಶಃ ಹಾನಿಯಾಗಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…