ಮೈಸೂರು: ಮಂಡ್ಯದ ಗಂಡು, ರೆಬಲ್ ಸ್ಟಾರ್ ಅಂಬರೀಶ್ ಅವರ 72 ನೇ ಜನ್ಮದಿನವಿಂದು, ಅಂಬಿ ಅವರ ಹುಟ್ಟುಹಬ್ಬಕ್ಕೆ ನಟ ದರ್ಶನ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಕನ್ವರ್ಲಾಲ್ ಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.
ಅಂಬಿ ಅಭಿಮಾನಿಗಳು ಇಂದು ಸಂಭ್ರಮ, ಸಡಗರದಿಂದಲೇ ಆಚರಿಸಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ಸುಮಲತಾ ಅಂಬರೀಶ್ ಅವರು ಅಂಬಿ ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇಂದು(ಮೇ.೨೯) ಬೆಳಿಗ್ಗೆಯೇ ಅಂಬಿ ಸಮಾಧಿ ಬಳಿ ಪತ್ನಿ ಸುಮಲತಾ ಅಂಬರೀಶ್, ಪುತ್ರ ಅಭಿಷೇಕ್ ಅಂಬರೀಶ್, ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಆಗಮಿಸಿ, ಪೂಜೆ ಮಾಡಿ, ನಮನ ಸಲ್ಲಿಸಿದರು. ಕುಟುಂಬಸ್ಥರು ಪೂಜೆ ಸಲ್ಲಿಸಿದ ಬಳಿಕ ಅಭಿಮಾನಿಗಳು ಸಹ ತಮ್ಮ ನೆಚ್ಚಿನ ನಟನ ಸಮಾಧಿ ಬಳಿ ಆಗಮಿಸಿ ಸ್ಮರಿಸಿದರು.
ಪತಿ ಅಂಬರೀಶ್ ನೆನೆದು ಪತ್ನಿ ಸುಮಲತಾ ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ. ʻನಿಮ್ಮನ್ನು ನೆನಪಿಸಿಕೊಂಡಾಗಲೆಲ್ಲಾ ತುಟಿ ಅಂಚಲ್ಲಿ ಮಂದಹಾಸ ಮೂಡುತ್ತಿದೆ. ನಿಮ್ಮನ್ನ ಕಳೆದುಕೊಂಡ ನೋವು ನಮ್ಮಲ್ಲಿ ಸದಾ ಇರುತ್ತದೆ. ಪ್ರತಿ ದಿನ, ಪ್ರತಿ ಕ್ಷಣ ಎಂದೆಂದಿಗೂ ನೀವು ನಮ್ಮ ಜೀವನದ ಒಂದು ಭಾಗ. ನೀವು ಬದುಕನ್ನು ಮೀರಿದವರು. ನೀವೇ ನಮ್ಮ ಜೀವನ. ಸ್ವರ್ಗದಲ್ಲಿ ನಿಮಗೆ ಜನ್ಮದಿನದ ಶುಭಾಶಯಗಳುʼ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸುಮಲತಾ ಅಂಬರೀಶ್ ಬರೆದುಕೊಂಡಿದ್ದಾರೆ.
ಕನ್ನಡ ಚಿತ್ರರಂಗದ ಕನ್ವರ್ಲಾಲ್ ಅಂಬಿ ೨೦೧೮ ನವೆಂಬರ್ ೨೪ ರಂದು ಹೃದಯಾಘಾತದಿಂದ ನಿಧನರಾದರು. ಅಂಬರೀಶ್ ಚಿತ್ರರಂಗದಲ್ಲಿಷ್ಟೆ ಅಲ್ಲದೇ ರಾಜಕೀಯದಲ್ಲೂ ಸಕ್ರಿಯವಾಗಿದ್ದರು.
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…
ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…