ರಾಜ್ಯ

ಇಂದು ಅಂಬರೀಶ್‌ ಜನ್ಮದಿನ; ಅಂಬಿ ನೆನೆದು ಭಾವುಕರಾದ ಸುಮಲತಾ

ಮೈಸೂರು: ಮಂಡ್ಯದ ಗಂಡು, ರೆಬಲ್‌ ಸ್ಟಾರ್‌ ಅಂಬರೀಶ್‌ ಅವರ 72 ನೇ ಜನ್ಮದಿನವಿಂದು, ಅಂಬಿ ಅವರ ಹುಟ್ಟುಹಬ್ಬಕ್ಕೆ ನಟ ದರ್ಶನ್‌ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಕನ್ವರ್‌ಲಾಲ್‌ ಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.

ಅಂಬಿ ಅಭಿಮಾನಿಗಳು ಇಂದು ಸಂಭ್ರಮ, ಸಡಗರದಿಂದಲೇ ಆಚರಿಸಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ಸುಮಲತಾ ಅಂಬರೀಶ್‌ ಅವರು ಅಂಬಿ ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇಂದು(ಮೇ.೨೯) ಬೆಳಿಗ್ಗೆಯೇ ಅಂಬಿ ಸಮಾಧಿ ಬಳಿ ಪತ್ನಿ ಸುಮಲತಾ ಅಂಬರೀಶ್‌, ಪುತ್ರ ಅಭಿಷೇಕ್‌ ಅಂಬರೀಶ್‌, ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಆಗಮಿಸಿ, ಪೂಜೆ ಮಾಡಿ, ನಮನ ಸಲ್ಲಿಸಿದರು. ಕುಟುಂಬಸ್ಥರು ಪೂಜೆ ಸಲ್ಲಿಸಿದ ಬಳಿಕ ಅಭಿಮಾನಿಗಳು ಸಹ ತಮ್ಮ ನೆಚ್ಚಿನ ನಟನ ಸಮಾಧಿ ಬಳಿ ಆಗಮಿಸಿ ಸ್ಮರಿಸಿದರು.

ಪತಿ ಅಂಬರೀಶ್‌ ನೆನೆದು ಪತ್ನಿ ಸುಮಲತಾ ಭಾವುಕ ಪೋಸ್ಟ್‌ ಹಂಚಿಕೊಂಡಿದ್ದಾರೆ. ʻನಿಮ್ಮನ್ನು ನೆನಪಿಸಿಕೊಂಡಾಗಲೆಲ್ಲಾ ತುಟಿ ಅಂಚಲ್ಲಿ ಮಂದಹಾಸ ಮೂಡುತ್ತಿದೆ. ನಿಮ್ಮನ್ನ ಕಳೆದುಕೊಂಡ ನೋವು ನಮ್ಮಲ್ಲಿ ಸದಾ ಇರುತ್ತದೆ. ಪ್ರತಿ ದಿನ, ಪ್ರತಿ ಕ್ಷಣ ಎಂದೆಂದಿಗೂ ನೀವು ನಮ್ಮ ಜೀವನದ ಒಂದು ಭಾಗ. ನೀವು ಬದುಕನ್ನು ಮೀರಿದವರು. ನೀವೇ ನಮ್ಮ ಜೀವನ. ಸ್ವರ್ಗದಲ್ಲಿ ನಿಮಗೆ ಜನ್ಮದಿನದ ಶುಭಾಶಯಗಳುʼ ಎಂದು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಸುಮಲತಾ ಅಂಬರೀಶ್‌ ಬರೆದುಕೊಂಡಿದ್ದಾರೆ.

ಕನ್ನಡ ಚಿತ್ರರಂಗದ ಕನ್ವರ್‌ಲಾಲ್‌ ಅಂಬಿ ೨೦೧೮ ನವೆಂಬರ್‌ ೨೪ ರಂದು ಹೃದಯಾಘಾತದಿಂದ ನಿಧನರಾದರು.‌  ಅಂಬರೀಶ್ ಚಿತ್ರರಂಗದಲ್ಲಿಷ್ಟೆ ಅಲ್ಲದೇ ರಾಜಕೀಯದಲ್ಲೂ ಸಕ್ರಿಯವಾಗಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮ.ಬೆಟ್ಟದಲ್ಲಿ ಸ್ವಚ್ಛತಾ ನಡಿಗೆ : ಕಸ ಸಂಗ್ರಹಿಸಿದ ಕಾಲೇಜು ವಿದ್ಯಾರ್ಥಿಗಳು

ಹನೂರು : ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ಕೊಳ್ಳೇಗಾಲ ವಾಸವಿ ಪ್ರಥಮ ದರ್ಜೆ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳು…

53 seconds ago

ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್?

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್ ನೀಡುವ ಸಾಧ್ಯತೆ ಇದೆ. ಪ್ರತಿ ವರ್ಷದಂತೆ ಈ ವರ್ಷವೂ ಮೆಟ್ರೊ…

1 hour ago

ಕಾಂಗ್ರೆಸ್‌ ಹೈಕಮಾಂಡ್‌ಗೆ ಕರ್ನಾಟಕ ರಾಜ್ಯವೇ ಎಟಿಎಂ: ವಿಜಯೇಂದ್ರ ಆಕ್ರೋಶ

ಬೆಂಗಳೂರು: ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿರುವ ಕಾಂಗ್ರೆಸ್‌ ಸರ್ಕಾರದ ಮುಖ್ಯಮಂತ್ರಿಗಳು ಅಬಕಾರಿ ವಿಚಾರದಲ್ಲಿ ಗಟ್ಟಿ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂಬುದು ಬಿಜೆಪಿ ಹಾಗೂ ಜೆಡಿಎಸ್‌…

1 hour ago

ಫೆ.14ರಿಂದ 18ರವರೆಗೆ ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆ: ಸಿದ್ಧತೆ ಪರಿಶೀಲಿಸಿದ ಎಈ ರಘು

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ.14 ರಿಂದ 18ರವರೆಗೆ…

2 hours ago

ಅಂತರರಾಷ್ಟ್ರೀಯ ವಾಣಿಜ್ಯ ಮೇಳ 2026: ಉತ್ಪಾದನೋತ್ತರ ಕೃಷಿ ಕಾರ್ಯಕ್ರಮವನ್ನು ಯಶ್ವಸಿಗೊಳಿಸಿ: ಎನ್.ಚಲುವರಾಯಸ್ವಾಮಿ

ಬೆಂಗಳೂರು: ನಮ್ಮ ಸರ್ಕಾರವು 2017ರಲ್ಲಿ ಪ್ರಾರಂಭಿಸಿದ ಸಾವಯವ ಮತ್ತು ಸಿರಿಧಾನ್ಯ ಮೇಳವು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿರುವುದು ನಮ್ಮೆಲ್ಲರ ಹೆಮ್ಮೆ…

2 hours ago

ಕರ್ನಾಟಕದಲ್ಲಿ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ತಡೆ: ಕೇಂದ್ರ ಅರಣ್ಯ ಸಚಿವರ ಜೊತೆ ಎಚ್‌ಡಿಕೆ ಮಾತುಕತೆ

ನವದೆಹಲಿ: ಕರ್ನಾಟಕದಲ್ಲಿ ನಿರಂತರವಾಗಿ ನಡೆಯುತ್ತಿರುವ ಮಾನವ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತವಾಗಿ ತಡೆಯೊಡ್ಡಿ ಜನರ ಜೇವ ರಕ್ಷಣೆ ಮಾಡುವ ಬಗ್ಗೆ ಕೇಂದ್ರದ ಬೃಹತ್‌…

2 hours ago