ರಾಜ್ಯ

ಇಂದು ಅಂಬರೀಶ್‌ ಜನ್ಮದಿನ; ಅಂಬಿ ನೆನೆದು ಭಾವುಕರಾದ ಸುಮಲತಾ

ಮೈಸೂರು: ಮಂಡ್ಯದ ಗಂಡು, ರೆಬಲ್‌ ಸ್ಟಾರ್‌ ಅಂಬರೀಶ್‌ ಅವರ 72 ನೇ ಜನ್ಮದಿನವಿಂದು, ಅಂಬಿ ಅವರ ಹುಟ್ಟುಹಬ್ಬಕ್ಕೆ ನಟ ದರ್ಶನ್‌ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಕನ್ವರ್‌ಲಾಲ್‌ ಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.

ಅಂಬಿ ಅಭಿಮಾನಿಗಳು ಇಂದು ಸಂಭ್ರಮ, ಸಡಗರದಿಂದಲೇ ಆಚರಿಸಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ಸುಮಲತಾ ಅಂಬರೀಶ್‌ ಅವರು ಅಂಬಿ ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇಂದು(ಮೇ.೨೯) ಬೆಳಿಗ್ಗೆಯೇ ಅಂಬಿ ಸಮಾಧಿ ಬಳಿ ಪತ್ನಿ ಸುಮಲತಾ ಅಂಬರೀಶ್‌, ಪುತ್ರ ಅಭಿಷೇಕ್‌ ಅಂಬರೀಶ್‌, ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಆಗಮಿಸಿ, ಪೂಜೆ ಮಾಡಿ, ನಮನ ಸಲ್ಲಿಸಿದರು. ಕುಟುಂಬಸ್ಥರು ಪೂಜೆ ಸಲ್ಲಿಸಿದ ಬಳಿಕ ಅಭಿಮಾನಿಗಳು ಸಹ ತಮ್ಮ ನೆಚ್ಚಿನ ನಟನ ಸಮಾಧಿ ಬಳಿ ಆಗಮಿಸಿ ಸ್ಮರಿಸಿದರು.

ಪತಿ ಅಂಬರೀಶ್‌ ನೆನೆದು ಪತ್ನಿ ಸುಮಲತಾ ಭಾವುಕ ಪೋಸ್ಟ್‌ ಹಂಚಿಕೊಂಡಿದ್ದಾರೆ. ʻನಿಮ್ಮನ್ನು ನೆನಪಿಸಿಕೊಂಡಾಗಲೆಲ್ಲಾ ತುಟಿ ಅಂಚಲ್ಲಿ ಮಂದಹಾಸ ಮೂಡುತ್ತಿದೆ. ನಿಮ್ಮನ್ನ ಕಳೆದುಕೊಂಡ ನೋವು ನಮ್ಮಲ್ಲಿ ಸದಾ ಇರುತ್ತದೆ. ಪ್ರತಿ ದಿನ, ಪ್ರತಿ ಕ್ಷಣ ಎಂದೆಂದಿಗೂ ನೀವು ನಮ್ಮ ಜೀವನದ ಒಂದು ಭಾಗ. ನೀವು ಬದುಕನ್ನು ಮೀರಿದವರು. ನೀವೇ ನಮ್ಮ ಜೀವನ. ಸ್ವರ್ಗದಲ್ಲಿ ನಿಮಗೆ ಜನ್ಮದಿನದ ಶುಭಾಶಯಗಳುʼ ಎಂದು ಸಾಮಾಜಿಕ ಜಾಲತಾಣ ಎಕ್ಸ್‌ ನಲ್ಲಿ ಸುಮಲತಾ ಅಂಬರೀಶ್‌ ಬರೆದುಕೊಂಡಿದ್ದಾರೆ.

ಕನ್ನಡ ಚಿತ್ರರಂಗದ ಕನ್ವರ್‌ಲಾಲ್‌ ಅಂಬಿ ೨೦೧೮ ನವೆಂಬರ್‌ ೨೪ ರಂದು ಹೃದಯಾಘಾತದಿಂದ ನಿಧನರಾದರು.‌  ಅಂಬರೀಶ್ ಚಿತ್ರರಂಗದಲ್ಲಿಷ್ಟೆ ಅಲ್ಲದೇ ರಾಜಕೀಯದಲ್ಲೂ ಸಕ್ರಿಯವಾಗಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಲ್ಲಯ್ಯನಪುರದಲ್ಲಿ ನಿರಂತರವಾಗಿ ಕಾಡಾನೆಗಳ ಹಾವಳಿ

ಲಕ್ಷಾಂತರ ರೂ. ಫಸಲು ನಾಶವಾಗುತ್ತಿದೆ ಎಂದು ರೈತರ ಅಳಲು; ಸೂಕ್ತ ಕ್ರಮಕ್ಕೆ ಅರಣ್ಯ ಇಲಾಖೆಗೆ ಆಗ್ರಹ ಹನೂರು: ತಾಲ್ಲೂಕಿನ ಕಾವೇರಿ…

19 mins ago

ಸಣ್ಣ ಕಾಲುವೆಗಳನ್ನು ಮುಚ್ಚಿ ಒತ್ತುವರಿ: ಆರೋಪ

ಹನೂರು: ಉಡುತೊರೆ ಹಳ್ಳ ಜಲಾಶಯದಿಂದ ರೈತರ ಜಮೀನುಗಳಿಗೆ ನೀರು ಹರಿಸಲು ನಿರ್ಮಾಣ ಮಾಡಿದ್ದ ಸಣ್ಣ ಸಣ್ಣ ಕಾಲುವೆಗಳನ್ನು ಮುಚ್ಚಿ ಜಮೀನು…

24 mins ago

‘ಲಾ-ನಿನಾ’ ಚಳಿ: ಜನರ ಆರೋಗ್ಯದ ಮೇಲೆ ದುಷ್ಪರಿಣಾಮ

ಗಿರೀಶ್ ಹುಣಸೂರು ಜ್ವರ, ಶೀತ, ಕೆಮ್ಮು ಕಾಯಿಲೆಗಳ ಭೀತಿ; ಆಸ್ಪತ್ರೆಗಳಿಗೆ ಎಡತಾಕುವ ಪರಿಸ್ಥಿತಿ ಮೈಸೂರು: ರಾಜ್ಯದಲ್ಲಿ ತಾಪಮಾನ ಕುಸಿತದಿಂದಾಗಿ ಚಳಿಯ…

28 mins ago

ಶಾಮನೂರು ಶಿವಶಂಕರಪ್ಪ-ಕಪಿಲಾ ತೀರದ ನಡುವೆ ಇತ್ತು ಅವಿನಾಭಾವ ಸಂಬಂಧ!

ಎಸ್.ಎಸ್.ಭಟ್ ನಂಜನಗೂಡು: ಭಾನುವಾರ ನಿಧನರಾದ ಆಧುನಿಕ ದಾವಣಗೆರೆಯ ನಿರ್ಮಾತೃ ಶಾಮನೂರು ಶಿವಶಂಕರಪ್ಪ ಅವರಿಗೂ ಹಾಗೂ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ…

34 mins ago

ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸದೇ ಹೋದರೆ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…

12 hours ago