ಮೈಸೂರು: ಮಂಡ್ಯದ ಗಂಡು, ರೆಬಲ್ ಸ್ಟಾರ್ ಅಂಬರೀಶ್ ಅವರ 72 ನೇ ಜನ್ಮದಿನವಿಂದು, ಅಂಬಿ ಅವರ ಹುಟ್ಟುಹಬ್ಬಕ್ಕೆ ನಟ ದರ್ಶನ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಕನ್ವರ್ಲಾಲ್ ಗೆ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.
ಅಂಬಿ ಅಭಿಮಾನಿಗಳು ಇಂದು ಸಂಭ್ರಮ, ಸಡಗರದಿಂದಲೇ ಆಚರಿಸಿದ್ದಾರೆ. ಹುಟ್ಟುಹಬ್ಬದ ಪ್ರಯುಕ್ತ ಸುಮಲತಾ ಅಂಬರೀಶ್ ಅವರು ಅಂಬಿ ಸಮಾಧಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇಂದು(ಮೇ.೨೯) ಬೆಳಿಗ್ಗೆಯೇ ಅಂಬಿ ಸಮಾಧಿ ಬಳಿ ಪತ್ನಿ ಸುಮಲತಾ ಅಂಬರೀಶ್, ಪುತ್ರ ಅಭಿಷೇಕ್ ಅಂಬರೀಶ್, ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಆಗಮಿಸಿ, ಪೂಜೆ ಮಾಡಿ, ನಮನ ಸಲ್ಲಿಸಿದರು. ಕುಟುಂಬಸ್ಥರು ಪೂಜೆ ಸಲ್ಲಿಸಿದ ಬಳಿಕ ಅಭಿಮಾನಿಗಳು ಸಹ ತಮ್ಮ ನೆಚ್ಚಿನ ನಟನ ಸಮಾಧಿ ಬಳಿ ಆಗಮಿಸಿ ಸ್ಮರಿಸಿದರು.
ಪತಿ ಅಂಬರೀಶ್ ನೆನೆದು ಪತ್ನಿ ಸುಮಲತಾ ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ. ʻನಿಮ್ಮನ್ನು ನೆನಪಿಸಿಕೊಂಡಾಗಲೆಲ್ಲಾ ತುಟಿ ಅಂಚಲ್ಲಿ ಮಂದಹಾಸ ಮೂಡುತ್ತಿದೆ. ನಿಮ್ಮನ್ನ ಕಳೆದುಕೊಂಡ ನೋವು ನಮ್ಮಲ್ಲಿ ಸದಾ ಇರುತ್ತದೆ. ಪ್ರತಿ ದಿನ, ಪ್ರತಿ ಕ್ಷಣ ಎಂದೆಂದಿಗೂ ನೀವು ನಮ್ಮ ಜೀವನದ ಒಂದು ಭಾಗ. ನೀವು ಬದುಕನ್ನು ಮೀರಿದವರು. ನೀವೇ ನಮ್ಮ ಜೀವನ. ಸ್ವರ್ಗದಲ್ಲಿ ನಿಮಗೆ ಜನ್ಮದಿನದ ಶುಭಾಶಯಗಳುʼ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸುಮಲತಾ ಅಂಬರೀಶ್ ಬರೆದುಕೊಂಡಿದ್ದಾರೆ.
ಕನ್ನಡ ಚಿತ್ರರಂಗದ ಕನ್ವರ್ಲಾಲ್ ಅಂಬಿ ೨೦೧೮ ನವೆಂಬರ್ ೨೪ ರಂದು ಹೃದಯಾಘಾತದಿಂದ ನಿಧನರಾದರು. ಅಂಬರೀಶ್ ಚಿತ್ರರಂಗದಲ್ಲಿಷ್ಟೆ ಅಲ್ಲದೇ ರಾಜಕೀಯದಲ್ಲೂ ಸಕ್ರಿಯವಾಗಿದ್ದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…