ರಾಜ್ಯ

ಮಳೆ ಕೊರತೆಯಿಂದ ತೊಗರಿ ಬೆಳೆ ಹಾನಿ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಿಷ್ಟು.!

ಬೆಂಗಳೂರು: ಕಳೆದ ಸಾಲಿನಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ತೊಗರಿ ಬೆಳೆ ಹಾನಿಯನ್ನು ಅಂದಾಜಿಸಲಾಗಿದ್ದು, ರಾಜ್ಯಾದ್ಯಂತ ತೊಗರಿ ಬೆಳೆದ 1.86 ಲಕ್ಷ ರೈತರಿಗೆ 91.93 ಕೋಟಿ ಮೊತ್ತದ ವಿಮಾ ಪರಿಹಾರ ಲೆಕ್ಕಾಚಾರ ಮಾಡಿ ಇತ್ಯರ್ಥಪಡಿಸಲಾಗುತ್ತಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ.

ವಿಧಾನಪರಿಷತ್ತಿನಲ್ಲಿಂದು ಮಾತನಾಡಿದ ಅವರು, ರಾಜ್ಯದ ಕಲ್ಬುರ್ಗಿ, ವಿಜಯಪುರ, ಬೆಳಗಾವಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ತೊಗರಿ ಮುಖ್ಯ ಬೆಳೆಯಾಗಿದ್ದು, ಸೆಪ್ಟೆಂಬರ್ ನಿಂದ ನವೆಂಬರ್ ವರೆಗೆ ವಾಡಿಕೆಗಿಂತ ಕಡಿಮೆ ಮಳೆಯಾಗಿ ತೇವಾಂಶ ಕುಸಿತದಿಂದ ಬೆಳೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ. ಇದಕ್ಕೆ ಕಳಪೆ ಬಿತ್ತನೆ ಬೀಜ ಕಾರಣವಲ್ಲ ಎಂಬುದನ್ನು ಪ್ರಯೋಗಾಲಯದ ಮೂಲಕ ಗುಣಮಟ್ಟ ಖಾತರಿ ಮೂಲಕ ಖಚಿತಪಡಿಸಿಕೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು.

ರಾಜ್ಯಾದ್ಯಂತ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 4.09 ಲಕ್ಷ ರೈತರು ತೊಗರಿ ಬೆಳೆಗೆ ವಿಮೆ ಮಾಡಿಸಿದ್ದಾರೆ. ಇದರ ಪೈಕಿ, ಕಲಬುರಗಿ ಜಿಲ್ಲೆಯಲ್ಲಿ 1.70 ಲಕ್ಷ ರೈತರು, ವಿಜಯಪುರ ಜಿಲ್ಲೆಯಲ್ಲಿ 1.08 ಲಕ್ಷ ರೈತರು, ಬೆಳಗಾವಿ ಜಿಲ್ಲೆಯಲ್ಲಿ 1213 ರೈತರು ಬೀದರ್ ಜಿಲ್ಲೆಯಲ್ಲಿ 82384 ರೈತರು ಮತ್ತು ಯಾದಗಿರಿ ಜಿಲ್ಲೆಯಲ್ಲಿ 6390 ರೈತರು, ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ನೋಂದಾಯಿಸಿದ್ದಾರೆ. ಸ್ಥಳೀಯ ವಿಕೋಪದಡಿ ರಾಜ್ಯಾದ್ಯಂತ ತೊಗರಿ ಬೆಳೆದ 1.86ಲಕ್ಷ ರೈತರಿಗೆ 91.93ಕೋಟಿ ಮೊತ್ತದ ವಿಮಾ ಪರಿಹಾರ ಲೆಕ್ಕಾಚಾರ ಮಾಡಿ ಇತ್ಯರ್ಥಪಡಿಸಲಾಗುತ್ತಿದೆ ಎಂದು ವಿವರಿಸಿದರು.

ಕಲಬುರಗಿ ಜಿಲ್ಲೆಯ 1.69ಲಕ್ಷ ರೈತರಿಗೆ ರೂ.70.47 ಕೋಟಿ ವಿಮಾ ಪರಿಹಾರವನ್ನು ಇತ್ಯರ್ಥಪಡಿಸಲಾಗಿದೆ. ಇದಲ್ಲದೇ, ರಾಜ್ಯದಲ್ಲಿ ಕೊಯ್ಲೋತ್ತರ ಬೆಳೆ ನಷ್ಟಕ್ಕಾಗಿ 2.74 ಕೋಟಿ ವಿಮೆ ಪರಿಹಾರ ಇತ್ಯರ್ಥಪಡಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಈ ಪೈಕಿ, ಕಲಬುರಗಿ ಜಿಲ್ಲೆಯ 2.54 ಕೋಟಿ ಒಳಗೊಂಡಿರುತ್ತದೆ ಎಂದು ಉತ್ತರ ನೀಡಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

5 hours ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

5 hours ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

6 hours ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

6 hours ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

6 hours ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

6 hours ago