ಬೆಂಗಳೂರು: ನಾಳೆ ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದು, ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಮಾರತ್ತಹಳ್ಳಿಯಲ್ಲಿ ವಿಶ್ವೇಶತೀರ್ಥ ಸ್ಮಾರಕ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಮಿತ್ ಶಾ ಭಾಗಿಯಾಗಲಿದ್ದು, ಇದೇ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯಾಧ್ಯಕ್ಷ ವಿಜಯೇಂದ್ರ, ಮಾಜಿ ಸಚಿವ ಅರವಿಂದ ಲಿಂಬಾವಳಿ ಕೂಡ ಭಾಗಿಯಾಗಲಿದ್ದಾರೆ. ಕಾರ್ಯಕ್ರಮದಲ್ಲಿ ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಉಪಸ್ಥಿತರಿರಲಿದ್ದಾರೆ.
ಇನ್ನು ಕಳೆದ ಕೆಲ ದಿನಗಳಿಂದ ರಾಜ್ಯ ಬಿಜೆಪಿಯಲ್ಲಿ ಬಣ ರಾಜಕೀಯ ಜೋರಾಗಿರುವ ಹಿನ್ನೆಲೆಯಲ್ಲಿ ನಾಳೆ ಮಾಜಿ ಸಚಿವ ಶ್ರೀರಾಮುಲು ಅವರು ಅಮಿತ್ ಶಾರನ್ನು ಭೇಟಿಯಾಗಲು ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ.
ಇದರ ಜೊತೆಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಹ ಅಮಿತ್ ಶಾರನ್ನು ಭೇಟಿಯಾಗಲು ಪ್ಲಾನ್ ಮಾಡಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವಂತೆ ಮನವಿ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಭಾಗ್ಯಜ್ಯೋತಿ ಹಿರೇಮಠ, ಗುಡಗೇರಿ, ಕಥೆಗಾರ್ತಿ ಮತ್ತು ಕವಯಿತ್ರಿ ಉತ್ತರ ಕರ್ನಾಟಕದ ಬಯಲು ಸೀಮೆಯಲ್ಲಿ ಚೈತ್ರದ ಬಿಸಿಲು ಅಪ್ಪಳಿಸುತ್ತಿದ್ದಂತೆಯೇ ಗಾಳಿಯಲ್ಲಿ ಒಣಗಿದ…
ಜೇನುಕುರುಬರ ಡೋಬಿ, ಮಾವುತ ಮತ್ತು ಗಾಯಕ ದುಬಾರೆ ಆನೆ ಶಿಬಿರ ಬಡತನವಿದ್ದರೂ ಎಲ್ಲರೂ ಒಟ್ಟಾಗಿ ಹಬ್ಬ ಆಚರಿಸುವ ಉಗಾದಿ ಸುಖ…
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…