ರಾಜ್ಯ

ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ನಾಳೆ ದೋಸ್ತಿ ನಾಯಕರಿಂದ ಪ್ರತಿಭಟನೆ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕು ಎಂದು ಆಗ್ರಹಿಸಿ ನಾಳೆ ಬಿಜೆಪಿ-ಜೆಡಿಎಸ್‌ ನಾಯಕರು ಬೀದಿಗಿಳಿದು ಪ್ರತಿಭಟನೆ ನಡೆಸಲಿದ್ದಾರೆ.

ನಾಳೆ ಬೆಳಿಗ್ಗೆ 11.30ಕ್ಕೆ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ಮಾಡುವುದಾಗಿ ವಿಪಕ್ಷ ನಾಯಕ ಆರ್.ಅಶೋಕ್‌ ತಿಳಿಸಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದು, ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಆದರೆ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಸಿದ್ದರಾಮಯ್ಯ ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಇದರಿಂದ ರೊಚ್ಚಿಗೆದ್ದಿರುವ ಮೈತ್ರಿ ನಾಯಕರು ನಾಳೆ ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ. ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು ಎಂದು ಪಟ್ಟು ಹಿಡಿದಿರುವ ಮೈತ್ರಿ ನಾಯಕರು ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲಲ್ಲ ಎಂದು ಕಿಡಿಕಾರಿದ್ದಾರೆ.

ಈ ಬಗ್ಗೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್‌ ಅವರು, ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಕಾಂಗ್ರೆಸ್‌ ಸ್ವಾಗತ ಮಾಡಬೇಕಿತ್ತು. ಅದನ್ನು ಬಿಟ್ಟು ರಾಜ್ಯಪಾಲರ ವಿರುದ್ಧವೇ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಆದ್ದರಿಂದ ನಾಳೆ ನಾವೆಲ್ಲಾ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತೇವೆ. ಜೆಡಿಎಸ್‌ ಶಾಸಕರನ್ನು ಕಳುಹಿಸುವಂತೆ ಕುಮಾರಸ್ವಾಮಿ ಜೊತೆ ಮಾತಾಡಿದ್ದೇನೆ ಎಂದು ಹೇಳಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್‌ ಶವವಾಗಿ ಪತ್ತೆ

ಮಂಡ್ಯ: ಕಳೆದ ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಪ್ರಥಮ ದರ್ಜೆ ಗುತ್ತಿಗೆದಾರ ಕಾವೇರಿ ನದಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ…

8 mins ago

ಬಾಂಗ್ಲಾ ಮಾಜಿ ಸ್ಪೀಕರ್‌ ಶಿರಿನ್‌ ಶರ್ಮಿನ್‌ ಚೌಧರಿ ಬಂಧನ

ಢಾಕಾ: ಬಾಂಗ್ಲಾದೇಶದ ಮೊದಲ ಮಹಿಳಾ ಸ್ಫೀಕರ್‌ ಆಗಿದ್ದ ಶಿರಿನ್‌ ಶರ್ಮಿನ್‌ ಚೌಧರಿ ಅವರನ್ನು ಢಾಕಾ ಮೆಟ್ರೋಪಾಲಿಟನ್‌ ಪೊಲೀಸರ ಪತ್ತೇದಾರಿ ವಿಭಾಗವು…

23 mins ago

ಮುಡಾ ಪ್ರಕರಣದಲ್ಲಿ ಸಿಎಂ ಕುಟುಂಬಕ್ಕೆ ತಾತ್ಕಾಲಿಕ ರಿಲೀಫ್‌ ಅಷ್ಟೇ ಸಿಕ್ಕಿರೋದು: ಸ್ನೇಹಮಯಿ ಕೃಷ್ಣ

ಮೈಸೂರು: ಮೈಸೂರು ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬಕ್ಕೆ ತಾತ್ಕಾಲಿಕ ರಿಲೀಫ್‌ ಅಷ್ಟೇ ಸಿಕ್ಕಿರೋದು ಎಂದು ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ…

40 mins ago

ಸಿಎಂ ಕ್ಷೇತ್ರದಲ್ಲಿ ರೈತರ ವಿರೋಧದ ನಡುವೆಯೂ ನಿಮ್ಹಾನ್ಸ್‌ ನಿರ್ಮಾಣಕ್ಕೆ ಮುಂದಾದ ಮೈಸೂರು ಜಿಲ್ಲಾಡಳಿತ

ಮೈಸೂರು: ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ರೈತರ ವಿರೋಧದ ನಡುವೆಯೂ ನಿಮ್ಹಾನ್ಸ್‌ ಆಸ್ಪತ್ರೆ ನಿರ್ಮಾಣಕ್ಕೆ ಮೈಸೂರು ಜಿಲ್ಲಾಡಳಿತ ಮುಂದಾಗಿದೆ. ವರುಣ ಕ್ಷೇತ್ರದ…

1 hour ago

ಓದುಗರ ಪತ್ರ: ಹಗಲು ದರೋಡೆಯಲ್ಲದೆ ಇನ್ನೇನು?

ಪಶ್ಚಿಮ ಏಷ್ಯಾದಲ್ಲಿ ಅಮೆರಿಕ- ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸ್ವಲ್ಪ ಮಟ್ಟಿಗೆ ವಾಣಿಜ್ಯ ಸಿಲಿಂಡರ್ ಅಭಾವ…

2 hours ago

ಓದುಗರ ಪತ್ರ: ಯುದ್ಧದ ಪರಿಣಾಮದಿಂದ ಜೀವನ ಕಷ್ಟ..ಕಷ್ಟ…

ಇರಾನ್-ಅಮೆರಿಕ-ಇಸ್ರೇಲ್ ಯುದ್ಧವು ೩೭ನೇ ದಿನಕ್ಕೆ ಕಾಲಿಟ್ಟಿದೆ. ಇದರ ಪರಿಣಾಮ ಅಗತ್ಯ ವಸ್ತುಗಳ ಬೆಲೆ ಏರಿಕೆಗಳು ಕಣ್ಣೀರು ತರಿಸುತ್ತಿದೆ. ಎಲ್‌ಪಿಜಿ ಗ್ಯಾಸ್…

2 hours ago