ರಾಜ್ಯ

ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ನಾಳೆ ದೋಸ್ತಿ ನಾಯಕರಿಂದ ಪ್ರತಿಭಟನೆ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕು ಎಂದು ಆಗ್ರಹಿಸಿ ನಾಳೆ ಬಿಜೆಪಿ-ಜೆಡಿಎಸ್‌ ನಾಯಕರು ಬೀದಿಗಿಳಿದು ಪ್ರತಿಭಟನೆ ನಡೆಸಲಿದ್ದಾರೆ.

ನಾಳೆ ಬೆಳಿಗ್ಗೆ 11.30ಕ್ಕೆ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ಮಾಡುವುದಾಗಿ ವಿಪಕ್ಷ ನಾಯಕ ಆರ್.ಅಶೋಕ್‌ ತಿಳಿಸಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದು, ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಆದರೆ ಇದ್ಯಾವುದಕ್ಕೂ ತಲೆಕೆಡಿಸಿಕೊಳ್ಳದ ಸಿದ್ದರಾಮಯ್ಯ ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ಇದರಿಂದ ರೊಚ್ಚಿಗೆದ್ದಿರುವ ಮೈತ್ರಿ ನಾಯಕರು ನಾಳೆ ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ. ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು ಎಂದು ಪಟ್ಟು ಹಿಡಿದಿರುವ ಮೈತ್ರಿ ನಾಯಕರು ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲಲ್ಲ ಎಂದು ಕಿಡಿಕಾರಿದ್ದಾರೆ.

ಈ ಬಗ್ಗೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್‌ ಅವರು, ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಕಾಂಗ್ರೆಸ್‌ ಸ್ವಾಗತ ಮಾಡಬೇಕಿತ್ತು. ಅದನ್ನು ಬಿಟ್ಟು ರಾಜ್ಯಪಾಲರ ವಿರುದ್ಧವೇ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಆದ್ದರಿಂದ ನಾಳೆ ನಾವೆಲ್ಲಾ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತೇವೆ. ಜೆಡಿಎಸ್‌ ಶಾಸಕರನ್ನು ಕಳುಹಿಸುವಂತೆ ಕುಮಾರಸ್ವಾಮಿ ಜೊತೆ ಮಾತಾಡಿದ್ದೇನೆ ಎಂದು ಹೇಳಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ ಹೆಜ್ಜೆ : ಪೋಸ್ಟರ್ ಬಿಡುಗಡೆ ಮಾಡಿದ ಗೃಹ ಸಚಿವ

ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…

39 mins ago

ರಂಗನತಿಟ್ಟು ಬಳಿ NH-275 ಹೆದ್ದಾರಿ : ವನ್ಯಜೀವಿ ಸುರಕ್ಷತೆಗೆ ನಿರ್ದೇಶನ

ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…

46 mins ago

ಕಿಡಿಗೇಡಿಗಳಿಂದ ಬೆಂಕಿ : ಐದಾರು ಎಕರೆ ಭೂ ಪ್ರದೇಶಕ್ಕೆ ಹಾನಿ

ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…

1 hour ago

ಮೈಸೂರು ಮೃಗಾಲಯದ ಜೀಬ್ರಾ ʼಪ್ರಾಚಿʼ ಸಾವು

ಮೈಸೂರು : ಶ್ರೀ  ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…

2 hours ago

ಭಾರತ-ಯುಎಸ್ ವ್ಯಾಪಾರ ಒಪ್ಪಂದ ಅಧಿಕೃತ ; ಶೇ.18ಕ್ಕೆ ಸುಂಕ ಇಳಿಕೆ

ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…

2 hours ago

ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ : ಯತೀಂದ್ರ ಸಿದ್ದರಾಮಯ್ಯ

ಬೀದರ್ : ಹೈಕಮಾಂಡ್ ಅಂದರೆ ಹೈಕಮಾಂಡೇ, ಅವರ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ. ನಾನು ಅದನ್ನೇ ಶುಕ್ರವಾರ ಹೇಳಿದ್ದು, ಹೈಕಮಾಂಡ್ ಸದ್ಯಕ್ಕೆ…

3 hours ago