ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ನಿವೇಶನ ಹಂಚಿಕೆ ಅಕ್ರಮ ಆರೋಪ ಮತ್ತು ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಮೇಲೆ ಫೋಕ್ಸೋ ಕೇಸ್ ಸಂಬಂಧ ತನಿಖೆ ನಡೆಯುತ್ತಿದ್ದು, ಇದೀಗ ನಾಳೆ ಇಬ್ಬರಿಗೂ ಬಿಗ್ ಡೇ ಆಗಿರಲಿದೆ.
ಈ ಎರಡೂ ಪ್ರಕರಣಗಳ ತೀರ್ಪು ನಾಳೆ ಹೈಕೋರ್ಟ್ನಲ್ಲಿ ಪ್ರಕಟವಾಗಲಿದ್ದು, ಸಿದ್ದರಾಮಯ್ಯ ಹಾಗೂ ಯಡಿಯೂರಪ್ಪರ ಎದೆಯಲ್ಲಿ ಢವ ಢವ ಶುರುವಾಗಿದೆ.
ಸಿಎಂ ಸಿದ್ದರಾಮಯ್ಯ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪ್ರಕರಣಗಳ ತೀರ್ಪು ನಾಳೆ ಧಾರವಾಡ ಹೈಕೋರ್ಟ್ ಪೀಠದಲ್ಲಿ ಪ್ರಕಟವಾಗಲಿದೆ. ಈ ಮಧ್ಯೆ ಸಿದ್ದರಾಮಯ್ಯ ಅವರ ವಿರುದ್ಧದ ಮುಡಾ ನಿವೇಶನ ಹಂಚಿಕೆ ಅಕ್ರಮ ಆರೋಪ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಕೂಡಾ ನಾಳೆಯೇ ನಡೆಯಲಿದೆ.
ಈ ಹಿನ್ನೆಲೆಯಲ್ಲಿ ನಾಳಿನ ತೀರ್ಪಿನತ್ತ ಎಲ್ಲರ ಚಿತ್ತ ನೆಟ್ಟಿದ್ದು, ತೀರ್ಪು ಯಾರ ಪರ ಬರಲಿದೆ ಎಂಬುದೇ ಯಕ್ಷ ಪ್ರಶ್ನೆಯಾಗಿದೆ.
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…
ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…