ಬೆಂಗಳೂರು : ದೇಶದ ಸಂವಿಧಾನವು (ಸಂವಿಧಾನ್ ದಿವಸ್) ಜಾರಿಗೆ ಬಂದು 75 ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರವು ಇಂದು ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳು ಹಾಗೂ ಶಾಲಾ-ಕಾಲೇಜುಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಆದೇಶ ಹೊರಡಿಸಿದೆ.
ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲೂ ಸಂವಿಧಾನದ ಮಹತ್ವವನ್ನು ತಿಳಿಸುವ ವಿಶೇಷ ಕಾರ್ಯಕ್ರಮಗಳ ಮೂಲಕ ಸಂವಿಧಾನ ದಿನಾಚರಣೆಯನ್ನು ಮಹತ್ವಪೂರ್ಣವಾಗಿ ಆಚರಿಸಲು ಆದೇಶ ನೀಡಿದೆ. ಕೇಂದ್ರ ಸರ್ಕಾರವು ಸಂವಿಧಾನ 75 ಎಂಬ ವಿಶೇಷ ಘೋಷವಾಕ್ಯದೊಂದಿಗೆ ದೇಶಾದ್ಯಂತ ವ್ಯಾಪಕ ಕಾರ್ಯಕ್ರಮಗಳನ್ನು ಆಯೋಜಿಸಿದೆ.
ಇದನ್ನು ಓದಿ: ರಾಜ್ಯದ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ನಾಳೆ ಸಂವಿಧಾನ ದಿನ ಆಚರಣೆ ಕಡ್ಡಾಯ
ಶಿಕ್ಷಣ ಇಲಾಖೆಯು ಪ್ರತಿ ಶಾಲೆ-ಕಾಲೇಜಿನಲ್ಲಿ ಸಂವಿಧಾನದ ಪ್ರತಿಯನ್ನು ಪ್ರದರ್ಶಿಸುವಂತೆ ಮತ್ತು ವಿದ್ಯಾರ್ಥಿಗಳಿಗೆ ಅದರ ಮಹತ್ವವನ್ನು ವಿವರಿಸುವಂತೆ ಸೂಚಿಸಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರ ಕನಸಿನ ಸಂವಿಧಾನವನ್ನು ಯುವ ಪೀಳಿಗೆಗೆ ಪರಿಚಯಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ ಶಾಲಾ-ಕಾಲೇಜುಗಳಲ್ಲಿ ಸಂವಿಧಾನದ ಪ್ರತಿಗಳನ್ನು ಹಿಡಿದುಕೊಂಡು ಸಂವಿಧಾನ ಜಾಗೃತಿ ಜಾಥಾ ನಡೆಸಬೇಕು ಎಂದು ತಾಕೀತು ಮಾಡಲಾಗಿದೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆಯುವ ರಾಜ್ಯಮಟ್ಟದ ಸಂವಿಧಾನ ದಿನಾಚರಣೆಯ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂವಿಧಾನದ ಪೀಠಿಕೆಯನ್ನು ಸಾರ್ವಜನಿಕವಾಗಿ ಓದುವ ಮೂಲಕ ಚಾಲನೆ ನೀಡಲಿದ್ದಾರೆ.
ಸಂವಿಧಾನ ಆಚರಣೆಯ ಮಹತ್ವ
೧೯೪೯ರ ನವೆಂಬರ್ ೨೬ರಂದು ಸಂವಿಧಾನ ಸಭೆಯು ಡಾ. ಬಿ.ಆರ್. ಅಂಬೇಡ್ಕರ್ ಅವರ ಅಧ್ಯಕ್ಷತೆಯಲ್ಲಿ ಸಂವಿಧಾನವನ್ನು ಅಂಗೀಕರಿಸಿತ್ತು. ೨ ವರ್ಷ, ೧೧ ತಿಂಗಳು, ೧೮ ದಿನಗಳ ಕಾಲ ನಡೆದ ಚರ್ಚೆಯ ನಂತರ ರೂಪಿತವಾದ ಈ ಸಂವಿಧಾನವು ಜಗತ್ತಿನ ಅತಿ ಉದ್ದದ ಲಿಖಿತ ಸಂವಿಧಾನವಾಗಿದೆ. ಸಮಾನತೆ, ಸ್ವಾತಂತ್ರ್ಯ, ನ್ಯಾಯ, ಸಾಮಾಜಿಕ ನ್ಯಾಯದ ಮೂಲಭೂತ ತತ್ವಗಳನ್ನು ಒಳಗೊಂಡಿರುವ ಸಂವಿಧಾನ ಭಾರತದ ಆತ್ಮವೇ ಆಗಿದೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…