ರಾಜ್ಯ

ನಾಳೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ

ಬೆಂಗಳೂರು: ವಿದ್ಯಾರ್ಥಿ ಜೀವನದ 2ನೇ ಅತಿ ಮಹತ್ವದ ಘಟ್ಟ ಎನಿಸಿದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ರಾಜ್ಯಾದ್ಯಂತ ನಾಳೆ ಪ್ರಕಟವಾಗಲಿದೆ.

ಈ ಹಿಂದೆ ನಿಗದಿಯಾದಂತೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವು ಮಂಗಳವಾರ ಪ್ರಕಟವಾಗಬೇಕಿತ್ತು. ರಾಜ್ಯದಲ್ಲಿ ಎರಡು ವಿಧಾನಸಭಾ ಕ್ಷೆ?ತ್ರಗಳ ಉಪಚುನಾವಣೆಗೆ ಮತದಾನ ಬಾಕಿ ಇರುವ ಹಿನ್ನೆಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಫಲಿತಾಂಶವನ್ನು ತಡೆಹಿಡಿಯಲಾಗಿತ್ತು.

ಸಾಮಾನ್ಯವಾಗಿ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದ ವೇಳೆ ಅನುದಾನ ಬಿಡುಗಡೆ, ಫಲಿತಾಂಶ ಪ್ರಕಟ ಸೇರಿದಂತೆ ಮತ್ತಿತರ ಯಾವುದೇ ಯೋಜನೆಗಳ ಘೋಷಣೆಗೆ ಚುನಾವಣಾ ಆಯೋಗ ಅನುಮತಿಯನ್ನು ಪಡೆಯಬೇಕು.

ಇದೀಗ ಕರ್ನಾಟಕ ಪರೀಕ್ಷಾ ಮಂಡಳಿಯು ರಾಜ್ಯ ಚುನಾವಣಾ ಆಯೋಗದ ಅನುಮತಿಯನ್ನು ಪಡೆದುಕೊಂಡಿದೆ ಎಂದು ತಿಳಿದುಬಂದಿದೆ.

ನಾಳೆ ಬೆಳಗ್ಗೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧುಬಂಗಾರಪ್ಪ ಅವರು ಮಂಡಳಿಯ ಕಚೇರಿಯಲ್ಲಿ ಅಧಿಕೃತವಾಗಿ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನದ ನಂತರ ಮಂಡಳಿ ನಿಗದಿಪಡಿಸಿದ ವೆಬ್‍ಸೈಟ್‍ನಲ್ಲಿ ವಿದ್ಯಾರ್ಥಿಗಳು ಫಲಿತಾಂಶವನ್ನು ನೋಡಬಹುದು.

ಫಲಿತಾಂಶ ಆನ್ಲೈನ್ನಲ್ಲಿ ನೋಡುವುದು ಹೇಗೆ?
ಮೊದಲು ಅಧಿಕೃತ ವೆಬ್ಸೈಟ್ karresults.nic.in ಗೆ ಭೇಟಿ ನೀಡಿ
‘Karnataka 2nd PUC Result 2026’ ಲಿಂಕ್ ಮೇಲೆ ಕ್ಲಿಕ್ ಮಾಡಿ
ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ
‘Submit’ ಬಟನ್ ಒತ್ತಿದ ತಕ್ಷಣ ನಿಮ್ಮ ಪರೀಕ್ಷೆ ಅಂಕಪಟ್ಟಿ ಸಿಗಲಿದೆ.

 

ಆಂದೋಲನ ಡೆಸ್ಕ್

Recent Posts

ಆಷಾಢ ಶುಕ್ರವಾರ : ಪೂರ್ವಸಿದ್ದತೆ ಪರಿಶೀಲಿಸಿದ ಸಚಿವ ಯತೀಂದ್ರ

ಮೈಸೂರು : ಆಷಾಢ ಶುಕ್ರವಾರದ ಶ್ರೀ ಚಾಮುಂಡೇಶ್ವರಿ ಅಮ್ಮನವರ ವಿಶೇಷ ಪೂಜೆ ಪ್ರಯುಕ್ತ ಭಕ್ತರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮೂಲಸೌಕರ್ಯ…

12 hours ago

ಮಂಡ್ಯ ವಿವಿ ಅಭಿವೃದ್ಧಿಗೆ ಅನುಮಾನವೇ ಅಡ್ಡಿ

ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…

19 hours ago

ಕೊಡಗು ವಿಶ್ವವಿದ್ಯಾಲಯ ಬಗೆಹರಿಯದ ಕೊರಗು!

ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…

19 hours ago

ಚಾ.ನಗರ ವಿವಿಗೆ ಅತಿಥಿ ಅಧ್ಯಾಪಕರೇ ಆಧಾರ!

ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…

19 hours ago

ಮೈಸೂರು ವಿವಿಗೆ ಹಣಕಾಸು ಮುಗ್ಗಟ್ಟು

ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…

19 hours ago

ಓದುಗರ ಪತ್ರ: ಒಣಗಿದ ಮರ ತೆರವುಗೊಳಿಸಿ

ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…

22 hours ago