Mysore
22
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

ನಾಳೆ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪತಿ ಮುರ್ಮು ಭೇಟಿ

drupadi murmu

ತುಮಕೂರು: ನಾಳೆ(ಏಪ್ರಿಲ್.‌1ರಂದು) ತ್ರಿವಿಧ ದಾಸೋಹಿ, ಶತಾಯುಷಿ ಸಿದ್ಧಗಂಗಾ ಮಠದ ಶಿವೈಕ್ಯ ಶಿವಕುಮಾರ ಸ್ವಾಮೀಜಿಗಳ 119ನೇ ಜನ್ಮದಿನೋತ್ಸವ ಅದ್ಧೂರಿಯಾಗಿ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ನಾಳೆ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಭೇಟಿ ನೀಡಲಿದ್ದಾರೆ.

ನಾಳೆ ಬೆಳಿಗ್ಗೆ 10.30ಕ್ಕೆ ಸಿದ್ಧಗಂಗಾ ಮಠಕ್ಕೆ ಮುರ್ಮು ಆಗಮಿಸಲಿದ್ದಾರೆ. ಆರಂಭದಲ್ಲಿ ಶಿವಕುಮಾರ ಶ್ರೀಗಳ ಗದ್ದುಗೆಗೆ ಆರತಿ ಪೂಜೆ ಮಾಡಲಿದ್ದಾರೆ. ಬಳಿಕ ಶ್ರೀಮಠದ ವಿದ್ಯಾರ್ಥಿಗಳನ್ನು ನೋಡಿ ಮಾತನಾಡಲಿದ್ದಾರೆ. ಬಳಿಕ ಉದ್ದಾನಶ್ರೀ ವೇದಿಕೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

 

Tags:
error: Content is protected !!