ರಾಜ್ಯ

ನಾಳೆಯಿಂದ ವಿಧಾನಮಂಡಲ ಬಜೆಟ್‌ ಅಧಿವೇಶನ

ಬೆಂಗಳೂರು: ನಾಳೆಯಿಂದ ವಿಧಾನಮಂಡಲ ಬಜೆಟ್‌ ಅಧಿವೇಶನ ಆರಂಭಗೊಳ್ಳಲಿದ್ದು, ಮಾರ್ಚ್.‌21ರ ತನಕ ನಡೆಯಲಿದೆ.

ನಾಳೆ ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್‌ ಅವರು, ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಶನಿವಾರ ಹಾಗೂ ಭಾನುವಾರ ಹೊರತುಪಡಿಸಿ 14 ದಿನ ಬಜೆಟ್‌ ಅಧಿವೇಶನ ಕಲಾಪಗಳು ನಡೆಯಲಿವೆ. ಮಾರ್ಚ್.‌4ರಿಂದ 6ರವರೆಗೆ ರಾಜ್ಯಪಾಲರ ಭಾಷಣದ ಮೇಲೆ ಸುದೀರ್ಘ ಚರ್ಚೆ ನಡೆಯಲಿದೆ.

ಮಾರ್ಚ್.‌7ರಂದು ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್‌ ಮಂಡನೆ ಮಾಡಲಿದ್ದು, ಬಜೆಟ್‌ ಮೇಲೆ ಜನರು ಹಲವು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಶಾಸಕರು ಹಾಗೂ ಸಚಿವರು ಕೂಡ ತಮ್ಮ ತಮ್ಮ ಕ್ಷೇತ್ರಗಳಿಗೆ ಅನುದಾನ ನೀಡುವಂತೆ ಆಗಾಗ್ಗೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುತ್ತಲೇ ಇದ್ದಾರೆ.

ಈ ಹಿನ್ನೆಲೆಯಲ್ಲಿ ಎಲ್ಲರ ಚಿತ್ತ ರಾಜ್ಯ ಬಜೆಟ್‌ನತ್ತ ನೆಟ್ಟಿದ್ದು, ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ರಾಜ್ಯದ ಜನರಿಗೆ ಏನೆಲ್ಲಾ ಗಿಫ್ಟ್‌ ನೀಡಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

1 hour ago

ನಾಳೆ ಧುರಂಧರ್-2 ಬಿಡುಗಡೆ : ಎಲ್ಲಾ ದಾಖಲೆ ಮುರಿಯುವ ನಿರೀಕ್ಷೆ

ಮುಂಬೈ : ಆದಿತ್ಯ ಧರ್‌ ನಿರ್ದೇಶನದ, ರಣವೀರ್‌ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.‌19) ಬಿಡುಗಡೆಯಾಗಲಿದೆ. ಕಳೆದ ವರ್ಷ…

2 hours ago

ದಳಪತಿ ವಿಜಯ್‌ಗೆ ಮುಖ್ಯಮಂತ್ರಿ ಸ್ಥಾನದ ಆಫರ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳಿರುವಾಗ, ನಟ-ರಾಜಕಾರಣಿ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ…

2 hours ago

ನ್ಯಾಟೋ ದೇಶಗಳಿಗೆ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕದ ಬೆಂಬಲಕ್ಕೆ ನಿಲ್ಲಬೇಕಿದ್ದ ನ್ಯಾಟೋ ದೇಶಗಳು ಈಗ ಹಿಂದೆ ಸರಿದಿರುವುದು ಟ್ರಂಪ್ ಆಡಳಿತಕ್ಕೆ ದೊಡ್ಡ ಹಿನ್ನಡೆಯಾಗಿದೆ. ಪಶ್ಚಿಮ…

2 hours ago

ಪ್ರಜ್ವಲ್‌ ಅಶ್ಲೀಲ ವಿಡಿಯೊ ಹಂಚಿಕೆ ಪ್ರಕರಣ ; 39 ಆರೋಪಿಗಳ ವಿರುದ್ಧ ಚಾರ್ಚ್‌ಶೀಟ್‌

ಬೆಂಗಳೂರು : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳನ್ನು ಪೆನ್‌ಡ್ರೈವ್ ಮೂಲಕ ಹಂಚಿಕೆ ಮಾಡಿದ ಪ್ರಕರಣದಲ್ಲಿ…

3 hours ago

ರೀಲ್ಸ್ ಹುಚ್ಚಾಟ, ಕೊರಿಯರ್ ಆಫೀಸಿಗೆ ಅಪ್ಪನನ್ನೇ ಪಾರ್ಸೆಲ್ ತಂದ ಮಂದಿ!

ಬೆಂಗಳೂರು : ಏನೋ ಮಾಡಲು ಹೋಗಿ ಇನ್ನೆನೋ ಆಗಿ ಪೇಚಿಗೆ ಸಿಲುಕಿರುವ ಘಟನೆಗಳೂ ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಇದೀಗ…

3 hours ago