Mysore
33
clear sky

Social Media

ಶುಕ್ರವಾರ, 06 ಮಾರ್ಚ್ 2026
Light
Dark

ನಾಳೆ 17ನೇ ಐತಿಹಾಸಿಕ ಬಜೆಟ್‌ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ

MUDA case surpeme court verdict : CM Siddaramaiah reacts

ಬೆಂಗಳೂರು: ಹತ್ತು ಹಲವಾರು ನಿರೀಕ್ಷೆಗಳೊಂದಿಗೆ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ 17ನೇ ಐತಿಹಾಸಿಕ ಬಜೆಟ್ ಮಂಡನೆಯ ಮೂಲಕ ದಾಖಲೆ ಬರೆಯಲು ಸಿದ್ದರಾಗಿದ್ದಾರೆ.

ಕಳೆದ ಬಾರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ 4,09,549 ಕೋಟಿ ರೂಪಾಯಿ ಗಾತ್ರ ಹೊಂದಿತ್ತು. ಈ ಬಾರಿ ಬಜೆಟ್ ಗಾತ್ರ ಮತ್ತಷ್ಟು ವಿಸ್ತಾರಗೊಳ್ಳುವ ನಿರೀಕ್ಷೆಯಿದೆ.ಈ ಬಾರಿಯ ಬಜೆಟ್‍ನಲ್ಲೂ ಪಂಚ ಗ್ಯಾರಂಟಿ ಯೋಜನೆಗಳಿಗೆ ಆದ್ಯತೆ ನೀಡುವ ಸಾಧ್ಯತೆ ಹೆಚ್ಚಿದೆ. ಅದರ ಜೊತೆಗೆ, ಅಭಿವೃದ್ಧಿ ಮತ್ತು ಆರ್ಥಿಕ ಶಿಸ್ತಿನ ಸಮತೋಲನ ಸಾಧಿಸುವ ಸವಾಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದಿದೆ.

ಈಗಾಗಲೇ ರಾಜ್ಯದ ಸಾಲ ಹನುಮಂತನ ಬಾಲದಂತೆ ದೊಡ್ಡದಾಗಿ ಬೆಳೆದಿದೆ. ಒಂದೆಡೆ ಆರ್ಥಿಕ ಅಭಿವೃದ್ಧಿ ಹಾಗೂ ಮತ್ತೊಂದೆಡೆ ಗ್ಯಾರಂಟಿಗಳ ನಡುವೆ ಸಮತೋಲಿತ ಬಜೆಟ್ ಮಂಡಿಸಲು ಸಿದ್ದರಾಮಯ್ಯ ಕಸರತ್ತು ನಡೆಸಿದ್ದಾರೆ. ಮದ್ಯ, ಮೋಟಾರು ತೆರಿಗೆ ಸೇರಿದಂತೆ ವಿವಿಧ ಬಾಬ್ತುಗಳ ಮೇಲೆ ತೆರಿಗೆಯ ಹೊರೆಯನ್ನು ನಿರೀಕ್ಷಿಸಲಾಗಿದೆ.

ಸಾಲು ಸಾಲು ಸವಾಲುಗಳನ್ನ ಎದುರಿಸುತ್ತಿರುವ ಸಿಎಂ, ಹಣಕಾಸಿನ ಕೊರತೆಯ ನಡುವೆಯೂ 5 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಲಿದ್ದಾರೆರಾಜ್ಯ ಸರ್ಕಾರ ತೆರಿಗೆ ಸಂಗ್ರಹ ಕಳೆದ ವರ್ಷಕ್ಕಿಂತ ಗಣೀನಿಯವಾಗಿ ಕುಸಿದಿದೆ. ಹೀಗಾಗಿ ಸಿಎಂ ಸಿದ್ದರಾಮುಯ್ಯರಿಗೆ ಸಂಪನ್ಮೂಲ ಕ್ರೂಡೀಕರಣವೇ ದೊಡ್ಡ ಸಮಸ್ಯೆಯಾಗಿದೆ. ಜೊತೆಗೆ ಸಂಪನ್ಮೂಲದ ತೀವ್ರ ಕೊರತೆಯಿಂದಾಗಿ, ಪಂಚ ಗ್ಯಾರಂಟಿ ಯೋಜನೆಗಳ ನಿಯಮಗಳನ್ನು ಬಿಗಿಗೊಳಿಸಲು ಅಥವಾ ಕೆಲವೊಂದಕ್ಕೆ ಕತ್ತರಿ ಹಾಕಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.

ಆರ್ಥಿಕ ಇಲಾಖೆಯ ಅಧಿಕಾರಿಗಳೊಂದಿಗೆ ಸಿಎಂ ನಡೆಸಿದ ಸಾಲು ಸಾಲು ಸಭೆಗಳಲ್ಲಿ ಈ ಬಗ್ಗೆ ಪ್ರಮುಖ ಚರ್ಚೆಗಳು ನಡೆಸಲಾಗಿದ್ದು, ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರು ಮತ್ತು ನಿಗದಿತ ಮಿತಿಗಿಂತ ಹೆಚ್ಚು ಜಮೀನು ಹೊಂದಿರುವವರ ಬಿಪಿಎಲ್ ಕಾರ್ಡ್‍ಗಳನ್ನು ರದ್ದುಪಡಿಸಿ, ಅರ್ಹರನ್ನು ಗ್ಯಾರಂಟಿಗಳಿಂದ ಹೊರಗಿಡುವ ಪ್ಲಾನ್ ಮಾಡಲಾಗಿದೆ. ಜೊತೆಗೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಇನ್ಮುಂದೆ ಜೀವಂತ ಪ್ರಮಾಣ ಪತ್ರ ಕಡ್ಡಾಯಗೊಳಿಸುವ ಸಾಧ್ಯತೆಯಿದೆ.

ರಾಜ್ಯದ ಆದಾಯದ ಕೊರತೆಯನ್ನು ನೀಗಿಸಲು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಂದ ಹಲವು ಸಲಹೆಗಳನ್ನು ಪಡೆದಿದ್ದಾರೆ. ಅಲ್ಲದೇ ಹಲವು ತೆರಿಗೆಗಳನ್ನ ಹೆಚ್ಚಳ ಮಾಡಲು ಸರ್ಕಾರ ತಯಾರಿ ನಡೆಸುತ್ತಿದ್ದಾರೆ.
5 ಗ್ಯಾರಂಟಿಗಳಿಗೆ ಕಳೆದ ವರ್ಷ 56 ಸಾವಿರ ಕೋಟಿ ರೂ.ಗಳನ್ನು ಬಜೆಟ್‍ನಲ್ಲಿ ಮೀಸಲ್ಪಟ್ಟಿರುವುದಾಗಿ ಘೋಷಿಸಲಾಗಿತ್ತು. ಅದು ಬಹುತೇಕ ಖರ್ಚಾಗಿದೆ. ಆದರೆ ಆ ಅನುದಾನದ ಜೊತೆ ಎಸ್?ಇಪಿ, ಟಿಎಸ್?ಪಿಯಡಿ ನಿಗದಿಯಾಗಿದ್ದ 14 ಸಾವಿರ ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳಲಾಗಿದೆ.56 ಸಾವಿರ ಕೋಟಿಗಳ ನಿಗದಿತ ಅನುದಾನದ ಜೊತೆಗೆ ಹೆಚ್ಚುವರಿಯಾಗಿ 14ಸಾವಿರ ಕೋಟಿ ರೂ. ಬಳಕೆ ಮಾಡಿರುವುದರಿಂದಾಗಿ ಗ್ಯಾರಂಟಿ ಯೋಜನೆಗಳಿಗೆ ಒಟ್ಟು 70ಸಾವಿರ ಕೋಟಿ ರೂ.ಗಳು ಖರ್ಚಾಗಿದೆಯೇ ಎಂಬ ಅನುಮಾನಗಳು ಕಾಡಲಾರಂಭಿಸಿವೆ.

ಗ್ಯಾರಂಟಿ ಯೋಜನೆಗಳಲ್ಲಿ ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಯ ವೆಚ್ಚ ನಿರೀಕ್ಷೆ ಮೀರಿ ಹೆಚ್ಚಾಗುತ್ತಿದೆ. ಹೊಸ ಪಡಿತರ ಚೀಟಿಗಳಿಗೆ ಅವಕಾಶ ನೀಡದೇ ಇರುವುದರಿಂದಾಗಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಸಂಖ್ಯೆ ಸದ್ಯಕ್ಕೆ ತಟಸ್ಥವಾಗಿದೆ. ಒಂದು ವೇಳೆ ಹೊಸ ಪಡಿತರ ಚೀಟಿಗಳನ್ನು ನೀಡಿದರೆ, ಫಲಾನುಭವಿಗಳ ಸಂಖ್ಯೆ ದುಪ್ಪಟ್ಟಾಗುವ ಸಾಧ್ಯತೆ ಇದೆ. ಹೀಗಾಗಿ ಹೊಸ ಪಡಿತರ ಚೀಟಿಗಳನ್ನು ವಿತರಿಸಬಾರದು ಎಂದು ಆಹಾರ ಇಲಾಖೆಯ ಮೇಲೆ ಭಾರಿ ಒತ್ತಡ ಹೇರಲಾಗುತ್ತಿದೆ.

Tags:
error: Content is protected !!