ರಾಜ್ಯ

ನಾಳೆ 17ನೇ ಐತಿಹಾಸಿಕ ಬಜೆಟ್‌ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹತ್ತು ಹಲವಾರು ನಿರೀಕ್ಷೆಗಳೊಂದಿಗೆ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ 17ನೇ ಐತಿಹಾಸಿಕ ಬಜೆಟ್ ಮಂಡನೆಯ ಮೂಲಕ ದಾಖಲೆ ಬರೆಯಲು ಸಿದ್ದರಾಗಿದ್ದಾರೆ.

ಕಳೆದ ಬಾರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ 4,09,549 ಕೋಟಿ ರೂಪಾಯಿ ಗಾತ್ರ ಹೊಂದಿತ್ತು. ಈ ಬಾರಿ ಬಜೆಟ್ ಗಾತ್ರ ಮತ್ತಷ್ಟು ವಿಸ್ತಾರಗೊಳ್ಳುವ ನಿರೀಕ್ಷೆಯಿದೆ.ಈ ಬಾರಿಯ ಬಜೆಟ್‍ನಲ್ಲೂ ಪಂಚ ಗ್ಯಾರಂಟಿ ಯೋಜನೆಗಳಿಗೆ ಆದ್ಯತೆ ನೀಡುವ ಸಾಧ್ಯತೆ ಹೆಚ್ಚಿದೆ. ಅದರ ಜೊತೆಗೆ, ಅಭಿವೃದ್ಧಿ ಮತ್ತು ಆರ್ಥಿಕ ಶಿಸ್ತಿನ ಸಮತೋಲನ ಸಾಧಿಸುವ ಸವಾಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದಿದೆ.

ಈಗಾಗಲೇ ರಾಜ್ಯದ ಸಾಲ ಹನುಮಂತನ ಬಾಲದಂತೆ ದೊಡ್ಡದಾಗಿ ಬೆಳೆದಿದೆ. ಒಂದೆಡೆ ಆರ್ಥಿಕ ಅಭಿವೃದ್ಧಿ ಹಾಗೂ ಮತ್ತೊಂದೆಡೆ ಗ್ಯಾರಂಟಿಗಳ ನಡುವೆ ಸಮತೋಲಿತ ಬಜೆಟ್ ಮಂಡಿಸಲು ಸಿದ್ದರಾಮಯ್ಯ ಕಸರತ್ತು ನಡೆಸಿದ್ದಾರೆ. ಮದ್ಯ, ಮೋಟಾರು ತೆರಿಗೆ ಸೇರಿದಂತೆ ವಿವಿಧ ಬಾಬ್ತುಗಳ ಮೇಲೆ ತೆರಿಗೆಯ ಹೊರೆಯನ್ನು ನಿರೀಕ್ಷಿಸಲಾಗಿದೆ.

ಸಾಲು ಸಾಲು ಸವಾಲುಗಳನ್ನ ಎದುರಿಸುತ್ತಿರುವ ಸಿಎಂ, ಹಣಕಾಸಿನ ಕೊರತೆಯ ನಡುವೆಯೂ 5 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಲಿದ್ದಾರೆರಾಜ್ಯ ಸರ್ಕಾರ ತೆರಿಗೆ ಸಂಗ್ರಹ ಕಳೆದ ವರ್ಷಕ್ಕಿಂತ ಗಣೀನಿಯವಾಗಿ ಕುಸಿದಿದೆ. ಹೀಗಾಗಿ ಸಿಎಂ ಸಿದ್ದರಾಮುಯ್ಯರಿಗೆ ಸಂಪನ್ಮೂಲ ಕ್ರೂಡೀಕರಣವೇ ದೊಡ್ಡ ಸಮಸ್ಯೆಯಾಗಿದೆ. ಜೊತೆಗೆ ಸಂಪನ್ಮೂಲದ ತೀವ್ರ ಕೊರತೆಯಿಂದಾಗಿ, ಪಂಚ ಗ್ಯಾರಂಟಿ ಯೋಜನೆಗಳ ನಿಯಮಗಳನ್ನು ಬಿಗಿಗೊಳಿಸಲು ಅಥವಾ ಕೆಲವೊಂದಕ್ಕೆ ಕತ್ತರಿ ಹಾಕಲು ಸರ್ಕಾರ ಚಿಂತನೆ ನಡೆಸಿದೆ ಎನ್ನಲಾಗಿದೆ.

ಆರ್ಥಿಕ ಇಲಾಖೆಯ ಅಧಿಕಾರಿಗಳೊಂದಿಗೆ ಸಿಎಂ ನಡೆಸಿದ ಸಾಲು ಸಾಲು ಸಭೆಗಳಲ್ಲಿ ಈ ಬಗ್ಗೆ ಪ್ರಮುಖ ಚರ್ಚೆಗಳು ನಡೆಸಲಾಗಿದ್ದು, ಸರ್ಕಾರಿ ನೌಕರರು, ಆದಾಯ ತೆರಿಗೆ ಪಾವತಿದಾರರು ಮತ್ತು ನಿಗದಿತ ಮಿತಿಗಿಂತ ಹೆಚ್ಚು ಜಮೀನು ಹೊಂದಿರುವವರ ಬಿಪಿಎಲ್ ಕಾರ್ಡ್‍ಗಳನ್ನು ರದ್ದುಪಡಿಸಿ, ಅರ್ಹರನ್ನು ಗ್ಯಾರಂಟಿಗಳಿಂದ ಹೊರಗಿಡುವ ಪ್ಲಾನ್ ಮಾಡಲಾಗಿದೆ. ಜೊತೆಗೆ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಇನ್ಮುಂದೆ ಜೀವಂತ ಪ್ರಮಾಣ ಪತ್ರ ಕಡ್ಡಾಯಗೊಳಿಸುವ ಸಾಧ್ಯತೆಯಿದೆ.

ರಾಜ್ಯದ ಆದಾಯದ ಕೊರತೆಯನ್ನು ನೀಗಿಸಲು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಂದ ಹಲವು ಸಲಹೆಗಳನ್ನು ಪಡೆದಿದ್ದಾರೆ. ಅಲ್ಲದೇ ಹಲವು ತೆರಿಗೆಗಳನ್ನ ಹೆಚ್ಚಳ ಮಾಡಲು ಸರ್ಕಾರ ತಯಾರಿ ನಡೆಸುತ್ತಿದ್ದಾರೆ.
5 ಗ್ಯಾರಂಟಿಗಳಿಗೆ ಕಳೆದ ವರ್ಷ 56 ಸಾವಿರ ಕೋಟಿ ರೂ.ಗಳನ್ನು ಬಜೆಟ್‍ನಲ್ಲಿ ಮೀಸಲ್ಪಟ್ಟಿರುವುದಾಗಿ ಘೋಷಿಸಲಾಗಿತ್ತು. ಅದು ಬಹುತೇಕ ಖರ್ಚಾಗಿದೆ. ಆದರೆ ಆ ಅನುದಾನದ ಜೊತೆ ಎಸ್?ಇಪಿ, ಟಿಎಸ್?ಪಿಯಡಿ ನಿಗದಿಯಾಗಿದ್ದ 14 ಸಾವಿರ ಕೋಟಿ ರೂ.ಗಳನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳಲಾಗಿದೆ.56 ಸಾವಿರ ಕೋಟಿಗಳ ನಿಗದಿತ ಅನುದಾನದ ಜೊತೆಗೆ ಹೆಚ್ಚುವರಿಯಾಗಿ 14ಸಾವಿರ ಕೋಟಿ ರೂ. ಬಳಕೆ ಮಾಡಿರುವುದರಿಂದಾಗಿ ಗ್ಯಾರಂಟಿ ಯೋಜನೆಗಳಿಗೆ ಒಟ್ಟು 70ಸಾವಿರ ಕೋಟಿ ರೂ.ಗಳು ಖರ್ಚಾಗಿದೆಯೇ ಎಂಬ ಅನುಮಾನಗಳು ಕಾಡಲಾರಂಭಿಸಿವೆ.

ಗ್ಯಾರಂಟಿ ಯೋಜನೆಗಳಲ್ಲಿ ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆಯ ವೆಚ್ಚ ನಿರೀಕ್ಷೆ ಮೀರಿ ಹೆಚ್ಚಾಗುತ್ತಿದೆ. ಹೊಸ ಪಡಿತರ ಚೀಟಿಗಳಿಗೆ ಅವಕಾಶ ನೀಡದೇ ಇರುವುದರಿಂದಾಗಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಸಂಖ್ಯೆ ಸದ್ಯಕ್ಕೆ ತಟಸ್ಥವಾಗಿದೆ. ಒಂದು ವೇಳೆ ಹೊಸ ಪಡಿತರ ಚೀಟಿಗಳನ್ನು ನೀಡಿದರೆ, ಫಲಾನುಭವಿಗಳ ಸಂಖ್ಯೆ ದುಪ್ಪಟ್ಟಾಗುವ ಸಾಧ್ಯತೆ ಇದೆ. ಹೀಗಾಗಿ ಹೊಸ ಪಡಿತರ ಚೀಟಿಗಳನ್ನು ವಿತರಿಸಬಾರದು ಎಂದು ಆಹಾರ ಇಲಾಖೆಯ ಮೇಲೆ ಭಾರಿ ಒತ್ತಡ ಹೇರಲಾಗುತ್ತಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

7 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

8 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

9 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

10 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

15 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

15 hours ago