Categories: ರಾಜ್ಯ

ಮೂರು ರಾಜ್ಯಕ್ಕೆ ಬೇಕಾಗಿದ್ದ ಮೋಸ್ಟ್‌ ವಾಂಟೆಡ್‌ ವಿಕ್ರಂ ಗೌಡ ಹತ್ಯೆ

ಉಡುಪಿ: ಮೂರು ರಾಜ್ಯಕ್ಕೆ ಬೇಕಾಗಿದ್ದ ಮೋಸ್ಟ್‌ ವಾಂಟೆಡ್‌ ನಕ್ಸಲ್‌ ಮುಖಂಡ ವಿಕ್ರಂಗೌಡನನ್ನು ಎನ್‌ಕೌಂಟರ್‌ ಮಾಡಲಾಗಿದೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಹೆಬ್ರಿ ಕಬ್ವಿನಾಲೆಯ ಪೀತಬೈಲುವಿನಲ್ಲಿ ಪೊಲೀಸರು ಹಾಗೂ ನಕ್ಸಲರ ನಡುವೆ ಗುಂಡಿನ ಕಾಳಗ ನಡೆದಿದೆ.

ಈ ವೇಳೆ ಮೋಸ್ಟ್‌ ವಾಂಟೆಡ್‌ ನಕ್ಸಲ್‌ ಮುಖಂಡ ವಿಕ್ರಂಗೌಡ ಬಲಿಯಾಗಿದ್ದಾನೆಂದು ಪೊಲೀಸ್‌ ಮೂಲಗಳು ತಿಳಿಸಿದೆ.

ಕಳೆದ ಕೆಲ ತಿಂಗಳುಗಳಿಂದ ಹೆಬ್ರಿ-ಕಾರ್ಕಳ ಪ್ರದೇಶದಲ್ಲಿ ನಕ್ಸಲರ ಓಡಾಟ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕದ ಎಎನ್‌ಎಫ್‌ ಕಾರ್ಯಾಚರಣೆಗೆ ಮುಂದಾಗಿತ್ತು.

ಕಳೆದ ಮಧ್ಯರಾತ್ರಿ 5 ಮಂದಿ ನಕ್ಸಲರ ತಂಡ ಸೀತಂಬೈಲು ಸಮೀಪ ರೇಷನ್‌ ಸಂಗ್ರಹಕ್ಕೆ ಬಂದಾಗ ಕೂಂಬಿಂಗ್‌ ಶುರುವಾಗಿದೆ.

ಈ ಕೂಂಬಿಂಗ್‌ನಲ್ಲಿ ವಿಕ್ರಂಗೌಡ ಇದ್ದ ಎನ್ನಲಾಗಿದ್ದು, ಗುಂಡಿನ ದಾಳಿಯಿಂದ ಈತ ಸಾವನ್ನಪ್ಪಿದ್ದಾನೆ.

ಇನ್ನುಳಿದ ನಕ್ಸಲರಿಗಾಗಿ ತೀವ್ರ ಶೋಧಕಾರ್ಯ ಮುಂದುವರಿದಿದ್ದು, ವಿಕ್ರಮ್‌ ಗೌಡ ನಕ್ಸಲರ ನೇತ್ರಾವತಿ ದಳದ ನಾಯಕನಾಗಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

11 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

19 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

19 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

19 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

19 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

19 hours ago