ಉಡುಪಿ: ಮೂರು ರಾಜ್ಯಕ್ಕೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ನಕ್ಸಲ್ ಮುಖಂಡ ವಿಕ್ರಂಗೌಡನನ್ನು ಎನ್ಕೌಂಟರ್ ಮಾಡಲಾಗಿದೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಹೆಬ್ರಿ ಕಬ್ವಿನಾಲೆಯ ಪೀತಬೈಲುವಿನಲ್ಲಿ ಪೊಲೀಸರು ಹಾಗೂ ನಕ್ಸಲರ ನಡುವೆ ಗುಂಡಿನ ಕಾಳಗ ನಡೆದಿದೆ.
ಈ ವೇಳೆ ಮೋಸ್ಟ್ ವಾಂಟೆಡ್ ನಕ್ಸಲ್ ಮುಖಂಡ ವಿಕ್ರಂಗೌಡ ಬಲಿಯಾಗಿದ್ದಾನೆಂದು ಪೊಲೀಸ್ ಮೂಲಗಳು ತಿಳಿಸಿದೆ.
ಕಳೆದ ಕೆಲ ತಿಂಗಳುಗಳಿಂದ ಹೆಬ್ರಿ-ಕಾರ್ಕಳ ಪ್ರದೇಶದಲ್ಲಿ ನಕ್ಸಲರ ಓಡಾಟ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕದ ಎಎನ್ಎಫ್ ಕಾರ್ಯಾಚರಣೆಗೆ ಮುಂದಾಗಿತ್ತು.
ಕಳೆದ ಮಧ್ಯರಾತ್ರಿ 5 ಮಂದಿ ನಕ್ಸಲರ ತಂಡ ಸೀತಂಬೈಲು ಸಮೀಪ ರೇಷನ್ ಸಂಗ್ರಹಕ್ಕೆ ಬಂದಾಗ ಕೂಂಬಿಂಗ್ ಶುರುವಾಗಿದೆ.
ಈ ಕೂಂಬಿಂಗ್ನಲ್ಲಿ ವಿಕ್ರಂಗೌಡ ಇದ್ದ ಎನ್ನಲಾಗಿದ್ದು, ಗುಂಡಿನ ದಾಳಿಯಿಂದ ಈತ ಸಾವನ್ನಪ್ಪಿದ್ದಾನೆ.
ಇನ್ನುಳಿದ ನಕ್ಸಲರಿಗಾಗಿ ತೀವ್ರ ಶೋಧಕಾರ್ಯ ಮುಂದುವರಿದಿದ್ದು, ವಿಕ್ರಮ್ ಗೌಡ ನಕ್ಸಲರ ನೇತ್ರಾವತಿ ದಳದ ನಾಯಕನಾಗಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್ಗಳನ್ನು ಅಳವಡಿಸಲಾಗಿದೆ ಎಂದು…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ಕಾವೇರಿ…
ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…