ಉಡುಪಿ: ಮೂರು ರಾಜ್ಯಕ್ಕೆ ಬೇಕಾಗಿದ್ದ ಮೋಸ್ಟ್ ವಾಂಟೆಡ್ ನಕ್ಸಲ್ ಮುಖಂಡ ವಿಕ್ರಂಗೌಡನನ್ನು ಎನ್ಕೌಂಟರ್ ಮಾಡಲಾಗಿದೆ.
ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಹೆಬ್ರಿ ಕಬ್ವಿನಾಲೆಯ ಪೀತಬೈಲುವಿನಲ್ಲಿ ಪೊಲೀಸರು ಹಾಗೂ ನಕ್ಸಲರ ನಡುವೆ ಗುಂಡಿನ ಕಾಳಗ ನಡೆದಿದೆ.
ಈ ವೇಳೆ ಮೋಸ್ಟ್ ವಾಂಟೆಡ್ ನಕ್ಸಲ್ ಮುಖಂಡ ವಿಕ್ರಂಗೌಡ ಬಲಿಯಾಗಿದ್ದಾನೆಂದು ಪೊಲೀಸ್ ಮೂಲಗಳು ತಿಳಿಸಿದೆ.
ಕಳೆದ ಕೆಲ ತಿಂಗಳುಗಳಿಂದ ಹೆಬ್ರಿ-ಕಾರ್ಕಳ ಪ್ರದೇಶದಲ್ಲಿ ನಕ್ಸಲರ ಓಡಾಟ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕದ ಎಎನ್ಎಫ್ ಕಾರ್ಯಾಚರಣೆಗೆ ಮುಂದಾಗಿತ್ತು.
ಕಳೆದ ಮಧ್ಯರಾತ್ರಿ 5 ಮಂದಿ ನಕ್ಸಲರ ತಂಡ ಸೀತಂಬೈಲು ಸಮೀಪ ರೇಷನ್ ಸಂಗ್ರಹಕ್ಕೆ ಬಂದಾಗ ಕೂಂಬಿಂಗ್ ಶುರುವಾಗಿದೆ.
ಈ ಕೂಂಬಿಂಗ್ನಲ್ಲಿ ವಿಕ್ರಂಗೌಡ ಇದ್ದ ಎನ್ನಲಾಗಿದ್ದು, ಗುಂಡಿನ ದಾಳಿಯಿಂದ ಈತ ಸಾವನ್ನಪ್ಪಿದ್ದಾನೆ.
ಇನ್ನುಳಿದ ನಕ್ಸಲರಿಗಾಗಿ ತೀವ್ರ ಶೋಧಕಾರ್ಯ ಮುಂದುವರಿದಿದ್ದು, ವಿಕ್ರಮ್ ಗೌಡ ನಕ್ಸಲರ ನೇತ್ರಾವತಿ ದಳದ ನಾಯಕನಾಗಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ.
ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್ ವಾಂಗ್ಚುಕ್ ಮೊದಲ ಪ್ರತಿಕ್ರಿಯೆ…
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…
ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…
ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…