ರಾಜ್ಯ

ದೀಪಾವಳಿಗೆ ಟಫ್‌ ರೂಲ್ಸ್‌ : 2 ಗಂಟೆ ಮಾತ್ರ ಪಟಾಕಿ ಸಿಡಿಸಲು ಅವಕಾಶ

ಬೆಂಗಳೂರು : ಬೆಳಕಿನ ಹಬ್ಬ ದೀಪಾವಳಿ ಸಮೀಪಿಸುತ್ತಿದೆ. ಪರಿಸರ ಮತ್ತು ಶಬ್ದಮಾಲಿನ್ಯ ತಡೆಗಟ್ಟುವ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ.

ರಾಜ್ಯದಲ್ಲಿ ದೀಪಾವಳಿ ಹಬ್ಬವನ್ನು ನ.11 ರಿಂದ 15 ರ ವರೆಗೆ ಆಚರಿಸಲಿದ್ದು, ಸುಪ್ರೀಂ ಕೋರ್ಟ್‌ ಆದೇಶವನ್ನು ಯಥಾಸ್ಥಿತಿ ಪಾಲನೆ ಮಾಡಲು ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ ನೀಡಿದೆ.

ಪಟಾಕಿಯನ್ನು ರಾತ್ರಿ 8 ರಿಂದ 10 ಗಂಟೆ ವರೆಗೆ ಮಾತ್ರ ಹೊಡೆಯಲು ಅವಕಾಶ ಇರಲಿದೆ. ಅಧಿಕಾರಿಗಳು ಪರಿಶೀಲನೆ ವೇಳೆ ಹಸಿರು ಪಟಾಕಿ ಹೊರತುಪಡಿಸಿ ಬೇರೆ ಪಟಾಕಿ ಮಾರುತ್ತಿದ್ದರೆ ಇಡೀ ಗೋದಾಮು ವಶಕ್ಕೆ ಪಡೆಯಬೇಕು. ಸಂಬಂಧಿತ ವ್ಯಕ್ತಿಗಳ ಮೇಲೆ ಕ್ರಿಮಿನಲ್‌ ಮೊಕದ್ದಮೆ ಹೂಡಬೇಕು.

ಹಸಿರು ಪಟಾಕಿ ಕ್ಯೂಆರ್‌ ಕೋಡ್‌ ಚಿಹ್ನೆ ಇಲ್ಲದ ಪಟಾಕಿಗಳನ್ನು ವಶಕ್ಕೆ ಪಡೆಯಬೇಕು. ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು. ಇವುಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿಗಳು, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗದಂತೆ ಬಳಸಬೇಕು.

ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳು, ನಿಷೇಧಿತ ಸ್ಥಳಗಳಲ್ಲಿ ಪಟಾಕಿ ಹೊಡೆಯುವಂತಿಲ್ಲ. ಇದನ್ನು ಎಲ್ಲಾ ಸ್ಥಳೀಯ ಸಂಸ್ಥೆಗಳು ಹಾಗೂ ಪೊಲೀಸ್‌ ಇಲಾಖೆಗಳು ಕಡ್ಡಾಯವಾಗಿ ಪಾಲಿಸಬೇಕು.

ನವೆಂಬರ್‌ 5 ರಿಂದ 20 ರ ವರೆಗೆ ನಿರಂತರ ವಾಯುಮಾಲಿನ್ಯ ಪರೀಕ್ಷೆ ಮಾಡಬೇಕು. ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ಮಾಪನದ ಮೂಲಕ ಪರೀಕ್ಷೆ ಮಾಡಬೇಕು. ಹೊರ ರಾಜ್ಯದ ಅನಧಿಕೃತ ಪಟಾಕಿಗಳಿಗೆ ನಿಷೇಧ ವಿಧಿಸಲಾಗಿದೆ. ಆಯಾಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಪೊಲೀಸರ ಮೂಲಕ ನಿಯಮ ಪಾಲನೆಯ ಬಗ್ಗೆ ಕ್ರಮ ವಹಿಸಬೇಕು ಎಂದು ಮಂಡಳಿ ತಿಳಿಸಿದೆ.

lokesh

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

2 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

3 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

4 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

9 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

16 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

16 hours ago