ರಾಜ್ಯ

ದೀಪಾವಳಿಗೆ ಟಫ್‌ ರೂಲ್ಸ್‌ : 2 ಗಂಟೆ ಮಾತ್ರ ಪಟಾಕಿ ಸಿಡಿಸಲು ಅವಕಾಶ

ಬೆಂಗಳೂರು : ಬೆಳಕಿನ ಹಬ್ಬ ದೀಪಾವಳಿ ಸಮೀಪಿಸುತ್ತಿದೆ. ಪರಿಸರ ಮತ್ತು ಶಬ್ದಮಾಲಿನ್ಯ ತಡೆಗಟ್ಟುವ ಹಿನ್ನೆಲೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ.

ರಾಜ್ಯದಲ್ಲಿ ದೀಪಾವಳಿ ಹಬ್ಬವನ್ನು ನ.11 ರಿಂದ 15 ರ ವರೆಗೆ ಆಚರಿಸಲಿದ್ದು, ಸುಪ್ರೀಂ ಕೋರ್ಟ್‌ ಆದೇಶವನ್ನು ಯಥಾಸ್ಥಿತಿ ಪಾಲನೆ ಮಾಡಲು ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ ನೀಡಿದೆ.

ಪಟಾಕಿಯನ್ನು ರಾತ್ರಿ 8 ರಿಂದ 10 ಗಂಟೆ ವರೆಗೆ ಮಾತ್ರ ಹೊಡೆಯಲು ಅವಕಾಶ ಇರಲಿದೆ. ಅಧಿಕಾರಿಗಳು ಪರಿಶೀಲನೆ ವೇಳೆ ಹಸಿರು ಪಟಾಕಿ ಹೊರತುಪಡಿಸಿ ಬೇರೆ ಪಟಾಕಿ ಮಾರುತ್ತಿದ್ದರೆ ಇಡೀ ಗೋದಾಮು ವಶಕ್ಕೆ ಪಡೆಯಬೇಕು. ಸಂಬಂಧಿತ ವ್ಯಕ್ತಿಗಳ ಮೇಲೆ ಕ್ರಿಮಿನಲ್‌ ಮೊಕದ್ದಮೆ ಹೂಡಬೇಕು.

ಹಸಿರು ಪಟಾಕಿ ಕ್ಯೂಆರ್‌ ಕೋಡ್‌ ಚಿಹ್ನೆ ಇಲ್ಲದ ಪಟಾಕಿಗಳನ್ನು ವಶಕ್ಕೆ ಪಡೆಯಬೇಕು. ಹಬ್ಬದ ಸಂದರ್ಭದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು. ಇವುಗಳನ್ನು ಬಳಸುವಾಗ ಯಾವುದೇ ಪ್ರಾಣಿ, ಪಕ್ಷಿಗಳು, ಮಕ್ಕಳು ಹಾಗೂ ವೃದ್ಧರಿಗೆ ತೊಂದರೆಯಾಗದಂತೆ ಬಳಸಬೇಕು.

ಆಸ್ಪತ್ರೆ, ಶಿಕ್ಷಣ ಸಂಸ್ಥೆಗಳು, ನಿಷೇಧಿತ ಸ್ಥಳಗಳಲ್ಲಿ ಪಟಾಕಿ ಹೊಡೆಯುವಂತಿಲ್ಲ. ಇದನ್ನು ಎಲ್ಲಾ ಸ್ಥಳೀಯ ಸಂಸ್ಥೆಗಳು ಹಾಗೂ ಪೊಲೀಸ್‌ ಇಲಾಖೆಗಳು ಕಡ್ಡಾಯವಾಗಿ ಪಾಲಿಸಬೇಕು.

ನವೆಂಬರ್‌ 5 ರಿಂದ 20 ರ ವರೆಗೆ ನಿರಂತರ ವಾಯುಮಾಲಿನ್ಯ ಪರೀಕ್ಷೆ ಮಾಡಬೇಕು. ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ಮಾಪನದ ಮೂಲಕ ಪರೀಕ್ಷೆ ಮಾಡಬೇಕು. ಹೊರ ರಾಜ್ಯದ ಅನಧಿಕೃತ ಪಟಾಕಿಗಳಿಗೆ ನಿಷೇಧ ವಿಧಿಸಲಾಗಿದೆ. ಆಯಾಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಪೊಲೀಸರ ಮೂಲಕ ನಿಯಮ ಪಾಲನೆಯ ಬಗ್ಗೆ ಕ್ರಮ ವಹಿಸಬೇಕು ಎಂದು ಮಂಡಳಿ ತಿಳಿಸಿದೆ.

lokesh

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

10 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

10 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

11 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

13 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

16 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

16 hours ago