ಬೆಂಗಳೂರು : ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಭಕ್ತರು ಹಾಗೂ ಪ್ರವಾಸಿಗರಿಗೆ ಪ್ರವಾಸಿತಾಣಗಳನ್ನು ಪರಿಚಯಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್ಆರ್ಟಿಸಿ)ದ ವತಿಯಿಂದ ಮೈಸೂರು, ಬೆಂಗಳೂರು ಸೇರಿದಂತೆ ವಿವಿಧ ಸ್ಥಳಗಳಿಂದ ಟೂರ್ ಪ್ಯಾಕೇಜ್ ಕಲ್ಪಿಸಲಾಗಿದೆ.
ವೋಲ್ವೊ, ಅಶ್ವಮೇಧ ಹಾಗೂ ಕರ್ನಾಟಕ ಸಾರಿಗೆಗಳಲ್ಲಿ ಟೂರ್ ಪ್ಯಾಕೇಜ್ ರೂಪಿಸಿದ್ದು, ಅ.೨೨ರವರೆಗೆ ಈ ಸೌಲಭ್ಯವಿರುತ್ತದೆ. ಬೆಂಗಳೂರಿನಿಂದ ವೋಲ್ವೊ ಬಸ್ ಮೂಲಕ ಹಾಸನ ತಲುಪಿ, ಹಾಸನಾಂಬೆ ದೇವಿ, ಸಿದ್ದೇಶ್ವರ ದೇವಾಲಯ, ದೇವಿಗೆರೆ ಕಲ್ಯಾಣಿ, ಕೆಂಚಮನ ಹೊಸಕೋಟೆ ದೇವಾಲಯದ ಸ್ಥಳಗಳನ್ನು ವೀಕ್ಷಿಸಬಹುದಾಗಿದ್ದು, ಒಟ್ಟು ೪೭೦ ಕಿ.ಮೀ. ಪ್ರಯಾಣವಿದ್ದು, ಬಸ್ಸು ಬೆಳಿಗ್ಗೆ ೬ ಗಂಟೆಗೆ ಕೆಂಪೇಗೌಡ ಬಸ್ ನಿಲ್ದಾಣದಿಂದ ಹೊರಡಲಿದೆ.
ವಯಸ್ಕರಿಗೆ (ಹಾಸನಾಂಬೆ ದೇವಿ ೧,೦೦೦ ರೂ. ಟಿಕೆಟ್ ದರ್ಶನ ಸೌಲಭ್ಯ ಸೇರಿದಂತೆ) ೨,೫೦೦ ರೂ., ಮಕ್ಕಳಿಗೆ (೧,೦೦೦ ರೂ. ಟಿಕೆಟ್ನ ದರ್ಶನ ಸೌಲಭ್ಯ ಸೇರಿದಂತೆ) ೨,೨೦೦ ರೂ. ದರ ನಿಗದಿ ಮಾಡಲಾಗಿದೆ.
ಇನ್ನು ಇದೇ ಮಾರ್ಗದಲ್ಲಿ ಹೊರಡುವ ಅಶ್ವಮೇಧ ಬಸ್ನಲ್ಲಿ ವಯಸ್ಕರಿಗೆ ೧,೧೦೦ ರೂ. ಟಿಕೆಟ್, ದೇವಿಯ ದರ್ಶನ ಸೇರಿದಂತೆ ೨,೦೦೦ ರೂ., ಮಕ್ಕಳಿಗೆ ೧,೧೦೦ ರೂ. ಟಿಕೆಟ್ನ ದರ್ಶನ ಸೌಲಭ್ಯ ಸೇರಿದಂತೆ ೧,೯೦೦ ರೂ. ದರ ಇರಲಿದೆ.
ಇದನ್ನೂ ಓದಿ:-ಪಿಎಫ್ಐ ಸಂಘಟನೆ ಬೆಂಬಲಿಸಿ ಪೋಸ್ಟ್ : ಧಾರ್ಮಿಕ ಮುಖಂಡನ ಬಂಧನ
ಸಾರಿಗೆ ಬಸ್ ಮೂಲಕ ಹಾಸನ, ಆಲೂರು ಮಾರ್ಗವಾಗಿ ಹಾಸನಾಂಬೆ ದೇವಾಲಯ, ಸಿದ್ದೇಶ್ವರ ದೇವಾಲಯ, ದೇವಿಗೆರೆ ಕಲ್ಯಾಣಿ, ಕೆಂಚಮನ ಹೊಸಕೋಟೆ ದೇವಾಲಯ ವೀಕ್ಷಿಸಬಹುದಾಗಿದ್ದು, ಒಟ್ಟು ೯೦ ಕಿ.ಮೀ. ಪ್ರಯಾಣ ಇರುತ್ತದೆ.
ಹಾಸನ ನಗರ ಬಸ್ ನಿಲ್ದಾಣದಿಂದ ಬೆಳಿಗ್ಗೆ ೮ ಗಂಟೆಗೆ ಬಸ್ ಹೊರಡಲಿದ್ದು, ಹಾಸನಾಂಬೆ ದೇವಿಯ ೧,೦೦೦ ರೂ. ಟಿಕೆಟ್ ದರ್ಶನ ಸೌಲಭ್ಯ ಸೇರಿದಂತೆ ೧,೪೦೦ ರೂ., ಮಕ್ಕಳಿಗೆ ೧,೩೦೦ ರೂ. ಟಿಕೆಟ್ ದರ ಇರಲಿದೆ.
ಜಿಲ್ಲೆಯ ಪ್ರವಾಸಿ ತಾಣಗಳಾದ ಬೇಲೂರು ಚನ್ನಕೇಶದೇವಾಲಯ, ಯಗಚ ಜಲಾಶಯ, ಪುಷ್ಪಗಿರಿ, ಹೊಯ್ಸಳೇಶ್ವರ ದೇವಾಲಯ, ಶ್ರವಣಬೆಳಗೊಳ, ವಿಂದ್ಯಾಗಿರಿ ಬೆಟ್ಟ, ಚಂದಗಿರಿಬೆಟ್ಟ, ಮಾಲೆಕಲ್ಲು ತಿರುಪತಿ, ಜೇನುಕಲ್ಲು ಸಿದ್ದೇಶ್ವರ, ಹೇಮಾವತಿ ಜಲಾಶಯ, ಗೊರೂರು ಜಲಾಶಯ ಸೇರಿದಂತೆ ಮತ್ತಿತರ ಪ್ರವಾಸಿ ತಾಣಗಳಿಗೆ ಬಸ್ ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದು ಕೆಎಸ್ಆರ್ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
ಹೆಚ್ಚಿನ ಮಾಹಿತಿಗೆ ಮೊ.ಸಂ. ೭೭೬೦೯ ೯೦೫೧೮/ ೭೭೬೦೯ ೯೦೫೧೯/ ೭೭೬೦೯ ೯೦೫೨೩ ಸಂಪರ್ಕಿಸಬಹುದು. ಜೊತೆಗೆ ಸಂಸ್ಥೆಯ ವೆಬ್ಸೈಟ್ನಲ್ಲಿ ಮಾಹಿತಿ ಲಭ್ಯವಿದೆ.
ಕೆ.ಆರ್.ನಗರ: ಜನಗಣತಿ ಮಾಡುವ ವೇಳೆ ಸರ್ಕಾರಿ ಶಾಲೆಯ ಶಿಕ್ಷಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಪಟ್ಟಣದ ಕುವೆಂಪು ಬಡಾವಣೆಯಲ್ಲಿ ನಡೆದಿದೆ. ಮೃತಪಟ್ಟ…
ಪಂಚ.. ತಂತ್ರ ! ಚುನಾವಣೆಯಲ್ಲಿ ಗೆದ್ದವರಿಗೆ ಸಿಎಂ ಚಿಂತೆ, ಸೋತವರಿಗೆ ಇವಿಎಂನದೇ ಚಿಂತೆ ! -ಮ.ಗು.ಬಸವಣ್ಣ, ಜೆಎಸ್ಎಸ್ ಬಡಾವಣೆ, ಮೈಸೂರು
ಮೈಸೂರಿನ ಕುವೆಂಪುನಗರದ ‘ಎಂ’ ಬ್ಲಾಕ್ನ ನೃಪತುಂಗ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನದ ಪಕ್ಕದಲ್ಲಿ ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಹೊಸ…
ತಮಿಳುನಾಡು ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ೨೩೪ ಕ್ಷೇತ್ರಗಳ ಪೈಕಿ ೧೦೮ ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅತಿ ದೊಡ್ಡ…
ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಪಶ್ಚಿಮ ಬಂಗಾಳ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಒಟ್ಟು ೨೯೪ ಸ್ಥಾನಗಳ ಪೈಕಿ…
ಲಕ್ಷಾಂತರ ಜನರಿಗೆ ಮೈಂಡ್ ಸೆಟ್ ಕೋಚ್ ಆಗಿ ಮಾರ್ಗದರ್ಶ ಗುಜರಾತಿನ ಅಹ್ಮದ್ನಗರದ ೩೮ ವರ್ಷ ಪ್ರಾಯದ ಜೈಕಿಶನ್ ಶರ್ಮಾ ಒಬ್ಬ…