ರಾಜ್ಯ

ಚಾರಣಿಗರ ಸುರಕ್ಷತೆಗಾಗಿ ಟ್ರ್ಯಾಕಿಂಗ್ ಆಪ್, ವಿಮೆ : ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ರಾಜ್ಯದ ಗಿರಿಶ್ರೇಣಿಗಳಿಗೆ ಬರುವ ಚಾರಣಿಗರ ಸುರಕ್ಷತೆಯ ದೃಷ್ಟಿಯಿಂದ ದೇಶಕ್ಕೆ ಮಾದರಿಯಾಗುವಂತಹ ಪ್ರಮಾಣಿತ ಮಾನದಂಡ (ಎಸ್.ಓ.ಪಿ.) ರೂಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ತಡಿಯಾಂಡಮೋಲ್ ಚಾರಣದ ವೇಳೆ ಕೇರಳದ ಶರಣ್ಯ ಎಂಬ ಮಹಿಳೆ 3 ದಿನ ಕಾಡಿನಲ್ಲಿ ದಿನ ಕಳೆದ ಹಾಗೂ ಚಂದ್ರದ್ರೋಣ ಪರ್ವತದಲ್ಲಿ ಅಪ್ರಾಪ್ತ ವಯಸ್ಕ ಬಾಲಕಿ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಅವರು, ಈ ಸೂಚನೆ ನೀಡಿದ್ದಾರೆ.

ಅರಣ್ಯ ಇಲಾಖೆ ಈಗಾಗಲೇ ಅಭಿವೃದ್ಧಿಪಡಿಸಿರುವ ಇ-ಗಸ್ತು, ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಬಳಕೆ ಮಾಡುವ ಎಂ.ಸ್ಟ್ರೈಪ್ಸ್ ನಂತಹ ಆಪ್ ರೀತಿಯಲ್ಲೇ ಚಾರಣ ಅವಧಿಯಲ್ಲಿ ತಾತ್ಕಾಲಿಕವಾಗಿ ಚಾರಣಿಗರ ಮೊಬೈಲ್ ನಲ್ಲಿ ಈ ಆಪ್ ಅಳವಡಿಸಿದರೆ, ಯಾರೇ ದಾರಿ ತಪ್ಪಿಸಿಕೊಂಡರೂ ಅವರ ಶೋಧಕಾರ್ಯ ಸುಲಭವಾಗುತ್ತದೆ, ಹೀಗಾಗಿ ಆಪ್ ಅಭಿವೃದ್ಧಿಗೆ ಕ್ರಮವಹಿಸುವಂತೆ ಮತ್ತು ಚಾರಣಿಗರಿಗೆ ಗುಂಪು ವಿಮೆ ಮಾಡಿಸುವಂತೆ ಅರಣ್ಯ ಸಚಿವರು ನಿರ್ದೇಶಿಸಿದ್ದಾರೆ.

ಇದರ ಜೊತೆಗೆ ಚಾರಣಿಗರಿಗೆ ಮಾರ್ಗದರ್ಶನ ಮಾಡುವ ನೇಚರ್ ಗೈಡ್ ಗಳಿಗೆ ಕಡ್ಡಾಯವಾಗಿ ವೈರ್ ಲೆಸ್ ಸೆಟ್ ನೀಡುವಂತೆ ಮತ್ತು ಚಾರಣಿಗರನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವ ಗೈಡ್ ಗಳಿಗೆ ಹೊಣೆಗಾರಿಕೆ ನಿಗದಿ ಮಾಡುವಂತೆಯೂ ಈಶ್ವರ ಖಂಡ್ರೆ ಸೂಚಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

5 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

5 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

5 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

5 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

6 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

6 hours ago