ಬೆಂಗಳೂರು : ರಾಜ್ಯದ ಗಿರಿಶ್ರೇಣಿಗಳಿಗೆ ಬರುವ ಚಾರಣಿಗರ ಸುರಕ್ಷತೆಯ ದೃಷ್ಟಿಯಿಂದ ದೇಶಕ್ಕೆ ಮಾದರಿಯಾಗುವಂತಹ ಪ್ರಮಾಣಿತ ಮಾನದಂಡ (ಎಸ್.ಓ.ಪಿ.) ರೂಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.
ತಡಿಯಾಂಡಮೋಲ್ ಚಾರಣದ ವೇಳೆ ಕೇರಳದ ಶರಣ್ಯ ಎಂಬ ಮಹಿಳೆ 3 ದಿನ ಕಾಡಿನಲ್ಲಿ ದಿನ ಕಳೆದ ಹಾಗೂ ಚಂದ್ರದ್ರೋಣ ಪರ್ವತದಲ್ಲಿ ಅಪ್ರಾಪ್ತ ವಯಸ್ಕ ಬಾಲಕಿ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಅವರು, ಈ ಸೂಚನೆ ನೀಡಿದ್ದಾರೆ.
ಅರಣ್ಯ ಇಲಾಖೆ ಈಗಾಗಲೇ ಅಭಿವೃದ್ಧಿಪಡಿಸಿರುವ ಇ-ಗಸ್ತು, ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಬಳಕೆ ಮಾಡುವ ಎಂ.ಸ್ಟ್ರೈಪ್ಸ್ ನಂತಹ ಆಪ್ ರೀತಿಯಲ್ಲೇ ಚಾರಣ ಅವಧಿಯಲ್ಲಿ ತಾತ್ಕಾಲಿಕವಾಗಿ ಚಾರಣಿಗರ ಮೊಬೈಲ್ ನಲ್ಲಿ ಈ ಆಪ್ ಅಳವಡಿಸಿದರೆ, ಯಾರೇ ದಾರಿ ತಪ್ಪಿಸಿಕೊಂಡರೂ ಅವರ ಶೋಧಕಾರ್ಯ ಸುಲಭವಾಗುತ್ತದೆ, ಹೀಗಾಗಿ ಆಪ್ ಅಭಿವೃದ್ಧಿಗೆ ಕ್ರಮವಹಿಸುವಂತೆ ಮತ್ತು ಚಾರಣಿಗರಿಗೆ ಗುಂಪು ವಿಮೆ ಮಾಡಿಸುವಂತೆ ಅರಣ್ಯ ಸಚಿವರು ನಿರ್ದೇಶಿಸಿದ್ದಾರೆ.
ಇದರ ಜೊತೆಗೆ ಚಾರಣಿಗರಿಗೆ ಮಾರ್ಗದರ್ಶನ ಮಾಡುವ ನೇಚರ್ ಗೈಡ್ ಗಳಿಗೆ ಕಡ್ಡಾಯವಾಗಿ ವೈರ್ ಲೆಸ್ ಸೆಟ್ ನೀಡುವಂತೆ ಮತ್ತು ಚಾರಣಿಗರನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವ ಗೈಡ್ ಗಳಿಗೆ ಹೊಣೆಗಾರಿಕೆ ನಿಗದಿ ಮಾಡುವಂತೆಯೂ ಈಶ್ವರ ಖಂಡ್ರೆ ಸೂಚಿಸಿದ್ದಾರೆ.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…