ರಾಜ್ಯ

ಸಿಲಿಕಾನ್‌ ಸಿಟಿಗೆ ಟ್ರಾಫಿಕ್‌ ಹೊರೆ : ಬೆಂಗಳೂರು ವಿಶ್ವದಲ್ಲೇ ಅತಿ ಹೆಚ್ಚು ವಾಹನ ದಟ್ಟಣೆ ಹೊಂದಿರುವ 2ನೇ ನಗರ

ಬೆಂಗಳೂರು : ಸಿಲಿಕಾನ್ ಸಿಟಿ ಎಂಬ ಖ್ಯಾತಿಗೆ ಒಳಗಾಗಿರುವ ರಾಜ್ಯ ರಾಜಧಾನಿ ಬೆಂಗಳೂರು ಇದೀಗ ವಿಶ್ವದಲ್ಲೇ ಅತಿ ಹೆಚ್ಚು ವಾಹನ ದಟ್ಟಣೆ ಹೊಂದಿರುವ ಎರಡನೇ ನಗರ ಎಂಬ ಅಪಖ್ಯಾತಿಗೂ ಪಾತ್ರವಾಗಿದೆ.

ಖಾಸಗಿ ಸಂಸ್ಥೆ ಟಾಮ್ ಟಾಮ್ ಬಿಡುಗಡೆ ಮಾಡಿರುವ ವಿಶ್ವದ ಅತ್ಯಂತ ಹೆಚ್ಚು ವಾಹನ ದಟ್ಟಣೆ ಹೊಂದಿರುವ ನಗರಗಳ ಪೈಕಿ ಐಟಿಬಿಟಿ ಸಿಟಿ ಬೆಂಗಳೂರು ಎರಡನೇ ಸ್ಥಾನ ಪಡೆದುಕೊಂಡಿದೆ.

ವರದಿ ಪ್ರಕಾರ 2025 ರ ವಾರ್ಷಿಕ ಟ್ರಾಫಿಕ್ ಇಂಡೆಕ್ಸ್ ವರದಿ ಆಧರಿಸಿ ಬೆಂಗಳೂರಿಗೆ ವಿಶ್ವದ ನಗರಗಳಲ್ಲಿ 2ನೇ ಸ್ಥಾನ ಬಂದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿಯೂ ಟ್ರಾಫಿಕ್ ಸಮಸ್ಯೆ ಹೆಚ್ಚಳವಾಗಿದ್ದು.‌ ನಿರೀಕ್ಷೆಗೂ ಮೀರಿ ವಾಹನ ನೋಂದಣಿ ಆಗ್ತಿರೋದೇ ಟ್ರಾಫಿಕ್ ಸಮಸ್ಯೆಗೆ ಕಾರಣ ಅನ್ನೋದು ಕಂಡುಬಂದಿದೆ.

ನಗರದಲ್ಲಿ ಮೆಟ್ರೋ ಹಾಗೂ ಬಿಎಂಟಿಸಿ ಬಸ್ ಬಳಕೆ ದ್ವಿಗುಣಗೊಳ್ಳುತ್ತಿರುವುದರ ನಡುವೆಯೂ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಿರುವುದನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ವಿಶ್ವದಲ್ಲೇ ಅತಿ ಹೆಚ್ಚು ಟ್ರಾಫಿಕ್ ಸಮಸ್ಯೆ ಇರುವ ನಗರಗಳಲ್ಲಿ ಮೊದಲ ಸ್ಥಾನ ಮೆಕ್ಸಿಕೋ ಸಿಟಿಗೆ ಬಂದಿದ್ದರೆ, ಎರಡನೇ ಸ್ಥಾನ ಬೆಂಗಳೂರು ಇದೆ, ಮೂರನೇ ಸ್ಥಾನ ಡಬ್ಲಿನ್ (ಐಲೆರ್ಂಡ್) ಇದೆ.

ಭಾರತದ ಇತರ ನಗರಗಳಲ್ಲಿ ಪುಣೆ 5ನೇ ಸ್ಥಾನ, ಮುಂಬೈ 18ನೇ ಸ್ಥಾನ, ನವದೆಹಲಿ 23ನೇ ಸ್ಥಾನ, ಕೋಲ್ಕತ್ತ 29ನೇ ಸ್ಥಾನ ಪಡೆದುಕೊಂಡಿವೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

3 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

19 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

20 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

21 hours ago