ರಾಜ್ಯ

ಸಿಲಿಕಾನ್‌ ಸಿಟಿಗೆ ಟ್ರಾಫಿಕ್‌ ಹೊರೆ : ಬೆಂಗಳೂರು ವಿಶ್ವದಲ್ಲೇ ಅತಿ ಹೆಚ್ಚು ವಾಹನ ದಟ್ಟಣೆ ಹೊಂದಿರುವ 2ನೇ ನಗರ

ಬೆಂಗಳೂರು : ಸಿಲಿಕಾನ್ ಸಿಟಿ ಎಂಬ ಖ್ಯಾತಿಗೆ ಒಳಗಾಗಿರುವ ರಾಜ್ಯ ರಾಜಧಾನಿ ಬೆಂಗಳೂರು ಇದೀಗ ವಿಶ್ವದಲ್ಲೇ ಅತಿ ಹೆಚ್ಚು ವಾಹನ ದಟ್ಟಣೆ ಹೊಂದಿರುವ ಎರಡನೇ ನಗರ ಎಂಬ ಅಪಖ್ಯಾತಿಗೂ ಪಾತ್ರವಾಗಿದೆ.

ಖಾಸಗಿ ಸಂಸ್ಥೆ ಟಾಮ್ ಟಾಮ್ ಬಿಡುಗಡೆ ಮಾಡಿರುವ ವಿಶ್ವದ ಅತ್ಯಂತ ಹೆಚ್ಚು ವಾಹನ ದಟ್ಟಣೆ ಹೊಂದಿರುವ ನಗರಗಳ ಪೈಕಿ ಐಟಿಬಿಟಿ ಸಿಟಿ ಬೆಂಗಳೂರು ಎರಡನೇ ಸ್ಥಾನ ಪಡೆದುಕೊಂಡಿದೆ.

ವರದಿ ಪ್ರಕಾರ 2025 ರ ವಾರ್ಷಿಕ ಟ್ರಾಫಿಕ್ ಇಂಡೆಕ್ಸ್ ವರದಿ ಆಧರಿಸಿ ಬೆಂಗಳೂರಿಗೆ ವಿಶ್ವದ ನಗರಗಳಲ್ಲಿ 2ನೇ ಸ್ಥಾನ ಬಂದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿಯೂ ಟ್ರಾಫಿಕ್ ಸಮಸ್ಯೆ ಹೆಚ್ಚಳವಾಗಿದ್ದು.‌ ನಿರೀಕ್ಷೆಗೂ ಮೀರಿ ವಾಹನ ನೋಂದಣಿ ಆಗ್ತಿರೋದೇ ಟ್ರಾಫಿಕ್ ಸಮಸ್ಯೆಗೆ ಕಾರಣ ಅನ್ನೋದು ಕಂಡುಬಂದಿದೆ.

ನಗರದಲ್ಲಿ ಮೆಟ್ರೋ ಹಾಗೂ ಬಿಎಂಟಿಸಿ ಬಸ್ ಬಳಕೆ ದ್ವಿಗುಣಗೊಳ್ಳುತ್ತಿರುವುದರ ನಡುವೆಯೂ ಟ್ರಾಫಿಕ್ ಸಮಸ್ಯೆ ಹೆಚ್ಚಾಗುತ್ತಿರುವುದನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ವಿಶ್ವದಲ್ಲೇ ಅತಿ ಹೆಚ್ಚು ಟ್ರಾಫಿಕ್ ಸಮಸ್ಯೆ ಇರುವ ನಗರಗಳಲ್ಲಿ ಮೊದಲ ಸ್ಥಾನ ಮೆಕ್ಸಿಕೋ ಸಿಟಿಗೆ ಬಂದಿದ್ದರೆ, ಎರಡನೇ ಸ್ಥಾನ ಬೆಂಗಳೂರು ಇದೆ, ಮೂರನೇ ಸ್ಥಾನ ಡಬ್ಲಿನ್ (ಐಲೆರ್ಂಡ್) ಇದೆ.

ಭಾರತದ ಇತರ ನಗರಗಳಲ್ಲಿ ಪುಣೆ 5ನೇ ಸ್ಥಾನ, ಮುಂಬೈ 18ನೇ ಸ್ಥಾನ, ನವದೆಹಲಿ 23ನೇ ಸ್ಥಾನ, ಕೋಲ್ಕತ್ತ 29ನೇ ಸ್ಥಾನ ಪಡೆದುಕೊಂಡಿವೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

3 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

5 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

6 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

8 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

14 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

20 hours ago