ಬೆಂಗಳೂರು: ರಾಜ್ಯದಲ್ಲಿ ನೂತನವಾಗಿ ರಚನೆಯಾಗಿರುವ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ವಾಹನ ಸವಾರರಿಗೆ ಸಿಹಿಸುದ್ದಿ ನೀಡಿದೆ. ಈ ಹಿಂದೆ ಜಾರಿಯಲ್ಲಿದ್ದ ಶೇ.50ರಷ್ಟು ಸಂಚಾರ ದಂಡ ರಿಯಾಯಿತಿಯನ್ನು ಪುನಃಸ್ಥಾಪಿಸಲಾಗಿದೆ. ರಾಜ್ಯ ಸರ್ಕಾರವು ಈ ಬಗ್ಗೆ ಮಹತ್ವದ ಘೋಷಣೆ ಮಾಡಿ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದ ನಿರ್ಧಾರದ ಪ್ರಕಾರ, ವಾಹನ ಸವಾರರು ಬಾಕಿ ಉಳಿದಿರುವ ಸಂಚಾರ ದಂಡದ ಮೇಲೆ ಶೇ.50ರಿಯಾಯಿತಿ ಪಡೆದುಕೊಳ್ಳಲು ಮತ್ತೆ ಅವಕಾಶ ದೊರೆತಿದೆ. ಈ ಹಿಂದೆ ಸರ್ಕಾರ ನೀಡಿದ್ದ ಈ ರಿಯಾಯಿತಿಗೆ ವಾಹನ ಸವಾರರಿಂದ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆ ಯಶಸ್ಸಿನ ಹಿನ್ನೆಲೆಯಲ್ಲಿ ಮತ್ತೊಮೆ ಈ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಸರ್ಕಾರ ಹೇಳಿದೆ.
20 ದಿನಗಳ ಕಾಲಾವಕಾಶ :
ಈ ರಿಯಾಯಿತಿ ಯೋಜನೆಯಡಿ ವಾಹನ ಸವಾರರು ತಮ ಬಾಕಿ ದಂಡವನ್ನು ಶೇ.50 ರಿಯಾಯಿತಿಯೊಂದಿಗೆ ಪಾವತಿಸಲು 20 ದಿನಗಳ ಕಾಲಾವಕಾಶ ನೀಡಲಾಗಿದೆ. ಈ ಅವಧಿಯಲ್ಲಿ ದಂಡ ಪಾವತಿಸಿದರೆ ಅರ್ಧದಷ್ಟು ಮೊತ್ತವನ್ನು ಉಳಿಸಿಕೊಳ್ಳಬಹುದು. ಇದು ವಾಹನ ಸವಾರರಿಗೆ ದೊಡ್ಡ ಆರ್ಥಿಕ ಸಹಾಯವಾಗುವ ನಿರೀಕ್ಷೆ ಇದೆ.
ಸಾರಿಗೆ ಇಲಾಖೆಯ ಮೂಲಗಳ ಪ್ರಕಾರ, ರಾಜ್ಯದಲ್ಲಿ ಲಕ್ಷಾಂತರ ವಾಹನ ಸವಾರರು ವಿವಿಧ ಕಾರಣಗಳಿಂದ ಸಂಚಾರ ನಿಯಮ ಉಲ್ಲಂಘನೆಗೆ ದಂಡ ಬಾಕಿ ಉಳಿಸಿಕೊಂಡಿದ್ದಾರೆ. ಹಿಂದಿನ ರಿಯಾಯಿತಿ ಯೋಜನೆಯಲ್ಲಿ ಸಾವಿರಾರು ಜನರು ಲಾಭ ಪಡೆದಿದ್ದರು. ಈ ಬಾರಿ ಇನ್ನಷ್ಟು ಜನರು ಇದರ ಸದುಪಯೋಗ ಪಡೆಯುವರು ಎಂದು ಅಂದಾಜಿಸಲಾಗಿದೆ.
ಈ ನಿರ್ಧಾರವು ವಿಶೇಷವಾಗಿ ಸಾಮಾನ್ಯ ಮಧ್ಯಮ ವರ್ಗದ ವಾಹನ ಸವಾರರಿಗೆ ನೆರವಾಗಲಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಈ ಯೋಜನೆ ಅನ್ವಯವಾಗುತ್ತದೆ. ದಂಡ ಪಾವತಿಗೆ ಆನ್ಲೈನ್ ಮತ್ತು ಆಫ್ಲೈನ್ ಎರಡೂ ವಿಧಾನಗಳನ್ನು ಬಳಸಬಹುದು. ಪರಿವಹಣೆ ಇಲಾಖೆಯ ವೆಬ್ಸೈಟ್ ಅಥವಾ ಪರಿವಹಣೆ ಕಚೇರಿಗಳ ಮೂಲಕ ದಂಡ ಪಾವತಿಸಬಹುದು.
ಸಾರಿಗೆ ಸಚಿವರು ಈ ಬಗ್ಗೆ ಮಾತನಾಡುತ್ತಾ, ವಾಹನ ಸವಾರರ ಸಮಸ್ಯೆಗಳನ್ನು ಗಮನಿಸಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ರಿಯಾಯಿತಿ ಅವಽಯಲ್ಲಿ ಎಲ್ಲರೂ ದಂಡ ಪಾವತಿಸಿ ತೊಂದರೆಗಳಿಂದ ಮುಕ್ತರಾಗುವಂತೆ ಮನವಿ ಮಾಡಿದ್ದಾರೆ.
ಈ ಘೋಷಣೆಯಿಂದಾಗಿ ರಾಜ್ಯದಲ್ಲಿ ಸಂಚಾರ ದಂಡ ಸಂಬಂಧಿತ ದಾಖಲೆಗಳ ಸಂಖ್ಯೆ ಕಡಿಮೆಯಾಗುವ ಸಾಧ್ಯತೆ ಇದೆ. ಜೊತೆಗೆ ವಾಹನ ಸವಾರರು ನಿಯಮಗಳನ್ನು ಪಾಲಿಸುವತ್ತ ಹೆಚ್ಚು ಗಮನ ಹರಿಸುವರು ಎಂದು ನಿರೀಕ್ಷಿಸಲಾಗಿದೆ. ವಾಹನ ಸವಾರರು ತಮ ವಾಹನ ಸಂಖ್ಯೆ ಅಥವಾ ಆಧಾರ್ ಸಂಖ್ಯೆ ಬಳಸಿ ಆನ್ಲೈನ್ನಲ್ಲಿ ದಂಡ ಪರಿಶೀಲಿಸಿ, ರಿಯಾಯಿತಿ ಸದುಪಯೋಗಪಡಿಸಿಕೊಳ್ಳುವಂತೆ ಸರ್ಕಾರ ಸಲಹೆ ನೀಡಿದೆ.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…