ಬೆಂಗಳೂರು: ರಾಜ್ಯದಲ್ಲಿ ನೂತನವಾಗಿ ರಚನೆಯಾಗಿರುವ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ ವಾಹನ ಸವಾರರಿಗೆ ಸಿಹಿಸುದ್ದಿ ನೀಡಿದೆ. ಈ ಹಿಂದೆ ಜಾರಿಯಲ್ಲಿದ್ದ ಶೇ.50ರಷ್ಟು ಸಂಚಾರ ದಂಡ ರಿಯಾಯಿತಿಯನ್ನು ಪುನಃಸ್ಥಾಪಿಸಲಾಗಿದೆ. ರಾಜ್ಯ ಸರ್ಕಾರವು ಈ ಬಗ್ಗೆ ಮಹತ್ವದ ಘೋಷಣೆ ಮಾಡಿ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದ ನಿರ್ಧಾರದ ಪ್ರಕಾರ, ವಾಹನ ಸವಾರರು ಬಾಕಿ ಉಳಿದಿರುವ ಸಂಚಾರ ದಂಡದ ಮೇಲೆ ಶೇ.50ರಿಯಾಯಿತಿ ಪಡೆದುಕೊಳ್ಳಲು ಮತ್ತೆ ಅವಕಾಶ ದೊರೆತಿದೆ. ಈ ಹಿಂದೆ ಸರ್ಕಾರ ನೀಡಿದ್ದ ಈ ರಿಯಾಯಿತಿಗೆ ವಾಹನ ಸವಾರರಿಂದ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಆ ಯಶಸ್ಸಿನ ಹಿನ್ನೆಲೆಯಲ್ಲಿ ಮತ್ತೊಮೆ ಈ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಸರ್ಕಾರ ಹೇಳಿದೆ.
20 ದಿನಗಳ ಕಾಲಾವಕಾಶ :
ಈ ರಿಯಾಯಿತಿ ಯೋಜನೆಯಡಿ ವಾಹನ ಸವಾರರು ತಮ ಬಾಕಿ ದಂಡವನ್ನು ಶೇ.50 ರಿಯಾಯಿತಿಯೊಂದಿಗೆ ಪಾವತಿಸಲು 20 ದಿನಗಳ ಕಾಲಾವಕಾಶ ನೀಡಲಾಗಿದೆ. ಈ ಅವಧಿಯಲ್ಲಿ ದಂಡ ಪಾವತಿಸಿದರೆ ಅರ್ಧದಷ್ಟು ಮೊತ್ತವನ್ನು ಉಳಿಸಿಕೊಳ್ಳಬಹುದು. ಇದು ವಾಹನ ಸವಾರರಿಗೆ ದೊಡ್ಡ ಆರ್ಥಿಕ ಸಹಾಯವಾಗುವ ನಿರೀಕ್ಷೆ ಇದೆ.
ಸಾರಿಗೆ ಇಲಾಖೆಯ ಮೂಲಗಳ ಪ್ರಕಾರ, ರಾಜ್ಯದಲ್ಲಿ ಲಕ್ಷಾಂತರ ವಾಹನ ಸವಾರರು ವಿವಿಧ ಕಾರಣಗಳಿಂದ ಸಂಚಾರ ನಿಯಮ ಉಲ್ಲಂಘನೆಗೆ ದಂಡ ಬಾಕಿ ಉಳಿಸಿಕೊಂಡಿದ್ದಾರೆ. ಹಿಂದಿನ ರಿಯಾಯಿತಿ ಯೋಜನೆಯಲ್ಲಿ ಸಾವಿರಾರು ಜನರು ಲಾಭ ಪಡೆದಿದ್ದರು. ಈ ಬಾರಿ ಇನ್ನಷ್ಟು ಜನರು ಇದರ ಸದುಪಯೋಗ ಪಡೆಯುವರು ಎಂದು ಅಂದಾಜಿಸಲಾಗಿದೆ.
ಈ ನಿರ್ಧಾರವು ವಿಶೇಷವಾಗಿ ಸಾಮಾನ್ಯ ಮಧ್ಯಮ ವರ್ಗದ ವಾಹನ ಸವಾರರಿಗೆ ನೆರವಾಗಲಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಈ ಯೋಜನೆ ಅನ್ವಯವಾಗುತ್ತದೆ. ದಂಡ ಪಾವತಿಗೆ ಆನ್ಲೈನ್ ಮತ್ತು ಆಫ್ಲೈನ್ ಎರಡೂ ವಿಧಾನಗಳನ್ನು ಬಳಸಬಹುದು. ಪರಿವಹಣೆ ಇಲಾಖೆಯ ವೆಬ್ಸೈಟ್ ಅಥವಾ ಪರಿವಹಣೆ ಕಚೇರಿಗಳ ಮೂಲಕ ದಂಡ ಪಾವತಿಸಬಹುದು.
ಸಾರಿಗೆ ಸಚಿವರು ಈ ಬಗ್ಗೆ ಮಾತನಾಡುತ್ತಾ, ವಾಹನ ಸವಾರರ ಸಮಸ್ಯೆಗಳನ್ನು ಗಮನಿಸಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ರಿಯಾಯಿತಿ ಅವಽಯಲ್ಲಿ ಎಲ್ಲರೂ ದಂಡ ಪಾವತಿಸಿ ತೊಂದರೆಗಳಿಂದ ಮುಕ್ತರಾಗುವಂತೆ ಮನವಿ ಮಾಡಿದ್ದಾರೆ.
ಈ ಘೋಷಣೆಯಿಂದಾಗಿ ರಾಜ್ಯದಲ್ಲಿ ಸಂಚಾರ ದಂಡ ಸಂಬಂಧಿತ ದಾಖಲೆಗಳ ಸಂಖ್ಯೆ ಕಡಿಮೆಯಾಗುವ ಸಾಧ್ಯತೆ ಇದೆ. ಜೊತೆಗೆ ವಾಹನ ಸವಾರರು ನಿಯಮಗಳನ್ನು ಪಾಲಿಸುವತ್ತ ಹೆಚ್ಚು ಗಮನ ಹರಿಸುವರು ಎಂದು ನಿರೀಕ್ಷಿಸಲಾಗಿದೆ. ವಾಹನ ಸವಾರರು ತಮ ವಾಹನ ಸಂಖ್ಯೆ ಅಥವಾ ಆಧಾರ್ ಸಂಖ್ಯೆ ಬಳಸಿ ಆನ್ಲೈನ್ನಲ್ಲಿ ದಂಡ ಪರಿಶೀಲಿಸಿ, ರಿಯಾಯಿತಿ ಸದುಪಯೋಗಪಡಿಸಿಕೊಳ್ಳುವಂತೆ ಸರ್ಕಾರ ಸಲಹೆ ನೀಡಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…