ಕಾರ್ಪೋರೇಟ್ ಶ್ರೀಮಂತರ ಮನೆಯ ವೈಭವಕ್ಕಿಂತ ದುಡಿದು ಬದುಕುವವರ ಬವಣೆಗೆ ಕ್ಯಾಮರಾ ಹಿಡಿಯಿರಿ: ಕೆವಿಪಿ
ಹಾವೇರಿ : ಮಾಧ್ಯಮಗಳಿಗೆ ರೈತರ ಸಮಸ್ಯೆಗಳಿಗಿಂತ ಎರಡು ಮನೆ ಜಗಳ ಮುಖ್ಯವಾಗಿರುವುದು ದುರಂತ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.
ತಾಲ್ಲೂಕು ಪತ್ರಕರ್ತರ ಸಂಘ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪತ್ರಕರ್ತರ ಸಮ್ಮೇಳನ ಮತ್ತು ಜಿಲ್ಲಾ ಘಟಕ ರಜತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಾರ್ಪೋರೇಟ್ ಶ್ರೀಮಂತರ ಮನೆಯ ವೈಭವಕ್ಕಿಂತ ದುಡಿದು ಬದುಕುವವರ ಬವಣೆಗೆ ಕ್ಯಾಮರಾ ಹಿಡಿಯಿರಿ ಎಂದು ಮಾಧ್ಯಮಗಳಿಗೆ ಕರೆ ನೀಡಿದರು.
ಸ್ವಾತಂತ್ರ್ಯ ಪೂರ್ವದಲ್ಲಿ ಮತ್ತು ಸ್ವಾತಂತ್ರ್ಯದ ಹೊಸ್ತಿಲಲ್ಲಿ ದೇಶದ ಅಭಿವೃದ್ಧಿ ಪತ್ರಿಕೋದ್ಯಮದ ಆದ್ಯತೆ ಆಗಿತ್ತು. ಗಾಂಧಿ, ಅಂಬೇಡ್ಕರ್ ಅವರು ಪತ್ರಿಕೆಗಳನ್ನು ನಡೆಸಿ ನಮ್ಮಂಥಾ ದೇಶಕ್ಕೆ ಯಾವ ರೀತಿಯ ಪತ್ರಿಕೋದ್ಯಮ ಬೇಕು ಎನ್ನುವುದಕ್ಕೆ ಮಾದರಿ ರೂಪಿಸಿಕೊಟ್ಟಿದ್ದಾರೆ. ಟಿಆರ್ ಪಿ ರಭಸದಲ್ಲಿ ಈ ಮಾದರಿಗಳು ಕೊಚ್ಚಿಹೋಗಿವೆ ಎಂದು ಬೇಸರ ವ್ಯಕ್ತಪಡಿಸಿದರು.
ತಂತ್ರಜ್ಞಾನದ ವೇಗ ಕೃತಕ ಬುದ್ದಿಮತ್ತೆಯ ಕಾಲದಲ್ಲಿ ಪತ್ರಿಕಾವೃತ್ತಿ ಹೊಸ ಸವಾಲು ಮತ್ತು ಅವಕಾಶಗಳಿಗೆ ತೆರೆದುಕೊಳ್ಳುತ್ತಿದೆ. ಪತ್ರಕರ್ತರು ಅಷ್ಟೇ ವೇಗದಲ್ಲಿ ತಮ್ಮನ್ನು ತಾವು ಉನ್ನತೀಕರಿಸಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು,
ವಿದ್ಯಾರ್ಥಿಗಳಾದವರು ತಂದೆ ತಾಯಿ ಮಾತು ಕೇಳಬೇಕು. ಮನೆಯೇ ಮೊದಲ ಪಾಠಶಾಲೆ ಎನ್ನುವುದು ಎಷ್ಟು ಅರ್ಥಪೂರ್ಣ ಎನ್ನುವುದನ್ನು ನೋಬೆಲ್ ಪುರಸ್ಕೃತ ವಿಜ್ಞಾನಿ ಐನ್ ಸ್ಟೀನ್ ಅವರ ಬದುಕಿನ ಘಟನೆಗಳನ್ನು ಉದಾಹರಿಸಿ ಮಾತನಾಡಿದರು.
ಶಾಸಕರಾದ ಶಿವಣ್ಣ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಸೇರಿದಂತೆ ಪತ್ರಕರ್ತರ ಸಂಘದ ಪದಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಗುವಹಾಟಿ : ಆರಂಭದಲ್ಲಿ ಬೌಲರ್ಗಳ ಅಬ್ಬರ ನಂತರ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್ ಕಿಂಗ್ಸ್…
ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…
ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…
ಟೆಹ್ರಾನ್ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…