ಕಾರ್ಪೋರೇಟ್ ಶ್ರೀಮಂತರ ಮನೆಯ ವೈಭವಕ್ಕಿಂತ ದುಡಿದು ಬದುಕುವವರ ಬವಣೆಗೆ ಕ್ಯಾಮರಾ ಹಿಡಿಯಿರಿ: ಕೆವಿಪಿ
ಹಾವೇರಿ : ಮಾಧ್ಯಮಗಳಿಗೆ ರೈತರ ಸಮಸ್ಯೆಗಳಿಗಿಂತ ಎರಡು ಮನೆ ಜಗಳ ಮುಖ್ಯವಾಗಿರುವುದು ದುರಂತ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.
ತಾಲ್ಲೂಕು ಪತ್ರಕರ್ತರ ಸಂಘ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪತ್ರಕರ್ತರ ಸಮ್ಮೇಳನ ಮತ್ತು ಜಿಲ್ಲಾ ಘಟಕ ರಜತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಾರ್ಪೋರೇಟ್ ಶ್ರೀಮಂತರ ಮನೆಯ ವೈಭವಕ್ಕಿಂತ ದುಡಿದು ಬದುಕುವವರ ಬವಣೆಗೆ ಕ್ಯಾಮರಾ ಹಿಡಿಯಿರಿ ಎಂದು ಮಾಧ್ಯಮಗಳಿಗೆ ಕರೆ ನೀಡಿದರು.
ಸ್ವಾತಂತ್ರ್ಯ ಪೂರ್ವದಲ್ಲಿ ಮತ್ತು ಸ್ವಾತಂತ್ರ್ಯದ ಹೊಸ್ತಿಲಲ್ಲಿ ದೇಶದ ಅಭಿವೃದ್ಧಿ ಪತ್ರಿಕೋದ್ಯಮದ ಆದ್ಯತೆ ಆಗಿತ್ತು. ಗಾಂಧಿ, ಅಂಬೇಡ್ಕರ್ ಅವರು ಪತ್ರಿಕೆಗಳನ್ನು ನಡೆಸಿ ನಮ್ಮಂಥಾ ದೇಶಕ್ಕೆ ಯಾವ ರೀತಿಯ ಪತ್ರಿಕೋದ್ಯಮ ಬೇಕು ಎನ್ನುವುದಕ್ಕೆ ಮಾದರಿ ರೂಪಿಸಿಕೊಟ್ಟಿದ್ದಾರೆ. ಟಿಆರ್ ಪಿ ರಭಸದಲ್ಲಿ ಈ ಮಾದರಿಗಳು ಕೊಚ್ಚಿಹೋಗಿವೆ ಎಂದು ಬೇಸರ ವ್ಯಕ್ತಪಡಿಸಿದರು.
ತಂತ್ರಜ್ಞಾನದ ವೇಗ ಕೃತಕ ಬುದ್ದಿಮತ್ತೆಯ ಕಾಲದಲ್ಲಿ ಪತ್ರಿಕಾವೃತ್ತಿ ಹೊಸ ಸವಾಲು ಮತ್ತು ಅವಕಾಶಗಳಿಗೆ ತೆರೆದುಕೊಳ್ಳುತ್ತಿದೆ. ಪತ್ರಕರ್ತರು ಅಷ್ಟೇ ವೇಗದಲ್ಲಿ ತಮ್ಮನ್ನು ತಾವು ಉನ್ನತೀಕರಿಸಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು,
ವಿದ್ಯಾರ್ಥಿಗಳಾದವರು ತಂದೆ ತಾಯಿ ಮಾತು ಕೇಳಬೇಕು. ಮನೆಯೇ ಮೊದಲ ಪಾಠಶಾಲೆ ಎನ್ನುವುದು ಎಷ್ಟು ಅರ್ಥಪೂರ್ಣ ಎನ್ನುವುದನ್ನು ನೋಬೆಲ್ ಪುರಸ್ಕೃತ ವಿಜ್ಞಾನಿ ಐನ್ ಸ್ಟೀನ್ ಅವರ ಬದುಕಿನ ಘಟನೆಗಳನ್ನು ಉದಾಹರಿಸಿ ಮಾತನಾಡಿದರು.
ಶಾಸಕರಾದ ಶಿವಣ್ಣ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಸೇರಿದಂತೆ ಪತ್ರಕರ್ತರ ಸಂಘದ ಪದಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…
ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…
ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್ನಲ್ಲಿ…
ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಅಧಿಸೂಚನೆ ಪ್ರಕಟಿಸಿದೆ.…
ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…
ಮೈಸೂರು : ವಿ.ವಿ ಮೊಹಲ್ಲಾ ಉಪವಿಭಾಗ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಸುವ ಕೆಲಸದ ನಿಮಿತ್ತ ಫೆ.6 ಮತ್ತು 7 ರಂದು…