ರಾಜ್ಯ

ರೈತರ ಸಮಸ್ಯೆಗಳಿಗಿಂತ ಎರಡು ಮನೆ ಜಗಳ ಮಾಧ್ಯಮಗಳಿಗೆ ಮುಖ್ಯವಾಗಿರುವುದು ದುರಂತ: ಕೆವಿಪಿ

ಕಾರ್ಪೋರೇಟ್ ಶ್ರೀಮಂತರ ಮನೆಯ ವೈಭವಕ್ಕಿಂತ ದುಡಿದು ಬದುಕುವವರ ಬವಣೆಗೆ ಕ್ಯಾಮರಾ ಹಿಡಿಯಿರಿ: ಕೆವಿಪಿ

ಹಾವೇರಿ : ಮಾಧ್ಯಮಗಳಿಗೆ ರೈತರ ಸಮಸ್ಯೆಗಳಿಗಿಂತ ಎರಡು ಮನೆ ಜಗಳ  ಮುಖ್ಯವಾಗಿರುವುದು ದುರಂತ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.

ತಾಲ್ಲೂಕು ಪತ್ರಕರ್ತರ ಸಂಘ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪತ್ರಕರ್ತರ ಸಮ್ಮೇಳನ ಮತ್ತು ಜಿಲ್ಲಾ ಘಟಕ ರಜತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾರ್ಪೋರೇಟ್ ಶ್ರೀಮಂತರ ಮನೆಯ ವೈಭವಕ್ಕಿಂತ ದುಡಿದು ಬದುಕುವವರ ಬವಣೆಗೆ ಕ್ಯಾಮರಾ ಹಿಡಿಯಿರಿ ಎಂದು ಮಾಧ್ಯಮಗಳಿಗೆ ಕರೆ ನೀಡಿದರು.

ಸ್ವಾತಂತ್ರ್ಯ ಪೂರ್ವದಲ್ಲಿ ಮತ್ತು ಸ್ವಾತಂತ್ರ್ಯದ ಹೊಸ್ತಿಲಲ್ಲಿ ದೇಶದ ಅಭಿವೃದ್ಧಿ ಪತ್ರಿಕೋದ್ಯಮದ ಆದ್ಯತೆ ಆಗಿತ್ತು. ಗಾಂಧಿ, ಅಂಬೇಡ್ಕರ್ ಅವರು ಪತ್ರಿಕೆಗಳನ್ನು ನಡೆಸಿ ನಮ್ಮಂಥಾ ದೇಶಕ್ಕೆ ಯಾವ ರೀತಿಯ ಪತ್ರಿಕೋದ್ಯಮ ಬೇಕು ಎನ್ನುವುದಕ್ಕೆ ಮಾದರಿ ರೂಪಿಸಿಕೊಟ್ಟಿದ್ದಾರೆ. ಟಿಆರ್ ಪಿ ರಭಸದಲ್ಲಿ ಈ ಮಾದರಿಗಳು ಕೊಚ್ಚಿಹೋಗಿವೆ ಎಂದು ಬೇಸರ ವ್ಯಕ್ತಪಡಿಸಿದರು.

ತಂತ್ರಜ್ಞಾನದ ವೇಗ ಕೃತಕ ಬುದ್ದಿಮತ್ತೆಯ ಕಾಲದಲ್ಲಿ ಪತ್ರಿಕಾವೃತ್ತಿ ಹೊಸ ಸವಾಲು ಮತ್ತು ಅವಕಾಶಗಳಿಗೆ ತೆರೆದುಕೊಳ್ಳುತ್ತಿದೆ. ಪತ್ರಕರ್ತರು ಅಷ್ಟೇ ವೇಗದಲ್ಲಿ ತಮ್ಮನ್ನು ತಾವು ಉನ್ನತೀಕರಿಸಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು,

ವಿದ್ಯಾರ್ಥಿಗಳಾದವರು ತಂದೆ ತಾಯಿ ಮಾತು ಕೇಳಬೇಕು. ಮನೆಯೇ ಮೊದಲ ಪಾಠಶಾಲೆ ಎನ್ನುವುದು ಎಷ್ಟು ಅರ್ಥಪೂರ್ಣ ಎನ್ನುವುದನ್ನು ನೋಬೆಲ್ ಪುರಸ್ಕೃತ ವಿಜ್ಞಾನಿ ಐನ್ ಸ್ಟೀನ್ ಅವರ ಬದುಕಿನ ಘಟನೆಗಳನ್ನು ಉದಾಹರಿಸಿ  ಮಾತನಾಡಿದರು.

ಶಾಸಕರಾದ ಶಿವಣ್ಣ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಸೇರಿದಂತೆ ಪತ್ರಕರ್ತರ ಸಂಘದ ಪದಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

6 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

7 hours ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

7 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

8 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

9 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

13 hours ago