ಕಾರ್ಪೋರೇಟ್ ಶ್ರೀಮಂತರ ಮನೆಯ ವೈಭವಕ್ಕಿಂತ ದುಡಿದು ಬದುಕುವವರ ಬವಣೆಗೆ ಕ್ಯಾಮರಾ ಹಿಡಿಯಿರಿ: ಕೆವಿಪಿ
ಹಾವೇರಿ : ಮಾಧ್ಯಮಗಳಿಗೆ ರೈತರ ಸಮಸ್ಯೆಗಳಿಗಿಂತ ಎರಡು ಮನೆ ಜಗಳ ಮುಖ್ಯವಾಗಿರುವುದು ದುರಂತ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.
ತಾಲ್ಲೂಕು ಪತ್ರಕರ್ತರ ಸಂಘ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪತ್ರಕರ್ತರ ಸಮ್ಮೇಳನ ಮತ್ತು ಜಿಲ್ಲಾ ಘಟಕ ರಜತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಕಾರ್ಪೋರೇಟ್ ಶ್ರೀಮಂತರ ಮನೆಯ ವೈಭವಕ್ಕಿಂತ ದುಡಿದು ಬದುಕುವವರ ಬವಣೆಗೆ ಕ್ಯಾಮರಾ ಹಿಡಿಯಿರಿ ಎಂದು ಮಾಧ್ಯಮಗಳಿಗೆ ಕರೆ ನೀಡಿದರು.
ಸ್ವಾತಂತ್ರ್ಯ ಪೂರ್ವದಲ್ಲಿ ಮತ್ತು ಸ್ವಾತಂತ್ರ್ಯದ ಹೊಸ್ತಿಲಲ್ಲಿ ದೇಶದ ಅಭಿವೃದ್ಧಿ ಪತ್ರಿಕೋದ್ಯಮದ ಆದ್ಯತೆ ಆಗಿತ್ತು. ಗಾಂಧಿ, ಅಂಬೇಡ್ಕರ್ ಅವರು ಪತ್ರಿಕೆಗಳನ್ನು ನಡೆಸಿ ನಮ್ಮಂಥಾ ದೇಶಕ್ಕೆ ಯಾವ ರೀತಿಯ ಪತ್ರಿಕೋದ್ಯಮ ಬೇಕು ಎನ್ನುವುದಕ್ಕೆ ಮಾದರಿ ರೂಪಿಸಿಕೊಟ್ಟಿದ್ದಾರೆ. ಟಿಆರ್ ಪಿ ರಭಸದಲ್ಲಿ ಈ ಮಾದರಿಗಳು ಕೊಚ್ಚಿಹೋಗಿವೆ ಎಂದು ಬೇಸರ ವ್ಯಕ್ತಪಡಿಸಿದರು.
ತಂತ್ರಜ್ಞಾನದ ವೇಗ ಕೃತಕ ಬುದ್ದಿಮತ್ತೆಯ ಕಾಲದಲ್ಲಿ ಪತ್ರಿಕಾವೃತ್ತಿ ಹೊಸ ಸವಾಲು ಮತ್ತು ಅವಕಾಶಗಳಿಗೆ ತೆರೆದುಕೊಳ್ಳುತ್ತಿದೆ. ಪತ್ರಕರ್ತರು ಅಷ್ಟೇ ವೇಗದಲ್ಲಿ ತಮ್ಮನ್ನು ತಾವು ಉನ್ನತೀಕರಿಸಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು,
ವಿದ್ಯಾರ್ಥಿಗಳಾದವರು ತಂದೆ ತಾಯಿ ಮಾತು ಕೇಳಬೇಕು. ಮನೆಯೇ ಮೊದಲ ಪಾಠಶಾಲೆ ಎನ್ನುವುದು ಎಷ್ಟು ಅರ್ಥಪೂರ್ಣ ಎನ್ನುವುದನ್ನು ನೋಬೆಲ್ ಪುರಸ್ಕೃತ ವಿಜ್ಞಾನಿ ಐನ್ ಸ್ಟೀನ್ ಅವರ ಬದುಕಿನ ಘಟನೆಗಳನ್ನು ಉದಾಹರಿಸಿ ಮಾತನಾಡಿದರು.
ಶಾಸಕರಾದ ಶಿವಣ್ಣ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಸೇರಿದಂತೆ ಪತ್ರಕರ್ತರ ಸಂಘದ ಪದಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಜೀವಮಾನದ ಮೊದಲ ಸಾರ್ವಜನಿಕ ಗಾಯನ ಕಾರ್ಯಕ್ರಮ ಮೈಸೂರಿನಿಂದಲೇ ಆರಂಭವಾಗಿತ್ತು. ಅಚ್ಚರಿಯೆಂದರೆ ಅವರ…