Mysore
26
scattered clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಮೈಸೂರು ವಿದ್ಯಾರ್ಥಿನಿ ದುರಂತ ಸಾವು

ಮೈಸೂರು: ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಚೆನ್ನೈ ಎಕ್ಸ್‌ಪ್ರೆಸ್ ರೈಲು ಹತ್ತುವಾಗ ಆಯಾತಪ್ಪಿ ಕೆಳಗೆ ಬಿದ್ದು ಮೈಸೂರಿನ ಪ್ರತಿಭಾವಂತ ವಿದ್ಯಾರ್ಥಿನಿ ಸಾವಿ ಗೀಡಾಗಿರುವ ದುರಂತ ಬುಧವಾರ(ಡಿ.25) ಸಂಜೆ ಸಂಭವಿಸಿದೆ.

ಮೈಸೂರು ಜಿಲ್ಲಾ ವಕೀಲರ ಸಂಘದ ಮಾಜಿ ಕಾರ್ಯದರ್ಶಿಯೂ ಆದ ಹಿರಿಯ ವಕೀಲ ಉಮೇಶ್‌ ಪುತ್ರಿ ಶ್ರೇಯ(19) ಮೃತಪಟ್ಟ ವಿದ್ಯಾರ್ಥಿನಿ ಯಾಗಿದ್ದು, ಈಕೆ ಮೈಸೂರಿನ ಮಾತಾ ಅಮೃತಾನಂದಮಯಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿದ್ದರು. ಕಾಲೇಜಿನ ಸಾಂಸ್ಕೃತಿಕ ತಂಡ ದೊಂದಿಗೆ ಚೆನ್ನೈನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಮೈಸೂರಿ ನಿಂದ ಚೆನ್ನೈ ಎಕ್ಸ್‌ಪ್ರೆಸ್‌ನಲ್ಲಿ ತೆರಳುತ್ತಿದ್ದರು.

ರೈಲು ಬೆಂಗಳೂರು ನಿಲ್ದಾಣ ದಲ್ಲಿ ನಿಂತಿದ್ದ ವೇಳೆ ನೀರಿನ ಬಾಟಲಿ ಖರೀದಿಸಲು ಕೆಳಗಿಳಿದ ಶ್ರೇಯ, ಮತ್ತೆ ರೈಲು ಹತ್ತುವ ವೇಳೆ ಆಯಾ ತಪ್ಪಿ ಪ್ಲಾಟ್ ಫಾರ್ಮನಲ್ಲಿ ಬಿದ್ದಿದ್ದಾರೆ. ಈ ವೇಳೆ ತಲೆಗೆ ತೀವ್ರವಾಗಿ ಪೆಟ್ಟು ಬಿದಿದ್ದ ಶ್ರೇಯಾಳನ್ನು ಗಮನಿಸಿದ ಸಹಪಾಠಿಗಳು ತಕ್ಷಣವೇ ರೈಲಿ ನಿಂದ ಇಳಿದು ಆಕೆಯ ಆರೈಕೆಯಲ್ಲಿ ತೊಡಗಿದ್ದರಾದರೂ ಅಷ್ಟರಲ್ಲಿ ಶ್ರೇಯ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಈ ಸಂಬಂಧ ಬೆಂಗಳೂರು ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ತನಿಖೆ ಮುಂದುವರೆಸಿದ್ದಾರೆ.

Tags:
error: Content is protected !!