ಮೈಸೂರು: ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಚೆನ್ನೈ ಎಕ್ಸ್ಪ್ರೆಸ್ ರೈಲು ಹತ್ತುವಾಗ ಆಯಾತಪ್ಪಿ ಕೆಳಗೆ ಬಿದ್ದು ಮೈಸೂರಿನ ಪ್ರತಿಭಾವಂತ ವಿದ್ಯಾರ್ಥಿನಿ ಸಾವಿ ಗೀಡಾಗಿರುವ ದುರಂತ ಬುಧವಾರ(ಡಿ.25) ಸಂಜೆ ಸಂಭವಿಸಿದೆ.
ಮೈಸೂರು ಜಿಲ್ಲಾ ವಕೀಲರ ಸಂಘದ ಮಾಜಿ ಕಾರ್ಯದರ್ಶಿಯೂ ಆದ ಹಿರಿಯ ವಕೀಲ ಉಮೇಶ್ ಪುತ್ರಿ ಶ್ರೇಯ(19) ಮೃತಪಟ್ಟ ವಿದ್ಯಾರ್ಥಿನಿ ಯಾಗಿದ್ದು, ಈಕೆ ಮೈಸೂರಿನ ಮಾತಾ ಅಮೃತಾನಂದಮಯಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿದ್ದರು. ಕಾಲೇಜಿನ ಸಾಂಸ್ಕೃತಿಕ ತಂಡ ದೊಂದಿಗೆ ಚೆನ್ನೈನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಮೈಸೂರಿ ನಿಂದ ಚೆನ್ನೈ ಎಕ್ಸ್ಪ್ರೆಸ್ನಲ್ಲಿ ತೆರಳುತ್ತಿದ್ದರು.
ರೈಲು ಬೆಂಗಳೂರು ನಿಲ್ದಾಣ ದಲ್ಲಿ ನಿಂತಿದ್ದ ವೇಳೆ ನೀರಿನ ಬಾಟಲಿ ಖರೀದಿಸಲು ಕೆಳಗಿಳಿದ ಶ್ರೇಯ, ಮತ್ತೆ ರೈಲು ಹತ್ತುವ ವೇಳೆ ಆಯಾ ತಪ್ಪಿ ಪ್ಲಾಟ್ ಫಾರ್ಮನಲ್ಲಿ ಬಿದ್ದಿದ್ದಾರೆ. ಈ ವೇಳೆ ತಲೆಗೆ ತೀವ್ರವಾಗಿ ಪೆಟ್ಟು ಬಿದಿದ್ದ ಶ್ರೇಯಾಳನ್ನು ಗಮನಿಸಿದ ಸಹಪಾಠಿಗಳು ತಕ್ಷಣವೇ ರೈಲಿ ನಿಂದ ಇಳಿದು ಆಕೆಯ ಆರೈಕೆಯಲ್ಲಿ ತೊಡಗಿದ್ದರಾದರೂ ಅಷ್ಟರಲ್ಲಿ ಶ್ರೇಯ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಈ ಸಂಬಂಧ ಬೆಂಗಳೂರು ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ತನಿಖೆ ಮುಂದುವರೆಸಿದ್ದಾರೆ.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…