ರಾಜ್ಯ

ರೈಲು ಪ್ರಯಾಣ ದರ ಹೆಚ್ಚಳ | ರಾಜ್ಯ ಬಿಜೆಪಿ ನಾಯಕರ ಮೌನವೇಕೆ : ಸಿ.ಎಂ ಪ್ರಶ್ನೆ

ದಾವಣಗೆರೆ : ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರ ಏರಿಕೆ ಮಾಡಿದೆ. ಜನಸಾಮಾನ್ಯರ ಮೇಲೆ ದರ ಏರಿಕೆ ಹೊರೆಯಾಗುತ್ತಿರುವ ಬಗ್ಗೆ ರಾಜ್ಯದ ಬಿಜೆಪಿ ನಾಯಕರು ಪ್ರಶ್ನಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ದಾವಣಗೆರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಕೇಂದ್ರ ಸರ್ಕಾರ ರೈಲು ಪ್ರಯಾಣ ದರ ಏರಿಕೆ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ದರ ಹೆಚ್ಚಳ ಬಗ್ಗೆ ಬಿಜೆಪಿ ನಾಯಕರು ಮೌನ ವಹಿಸಿರುವುದು ಏಕೆ ಎಂದು ಪ್ರಶ್ನಿಸಿದ್ದಾರೆ.

ಇದನ್ನು ಓದಿ: ಹುಬ್ಬಳ್ಳಿಯಲ್ಲಿ ಮರ್ಯಾದೆ ಹತ್ಯೆ | ಕ್ರೂರಿ ತಂದೆಯನ್ನು ಶೂಟ್‌ ಮಾಡಿ ; ಪ್ರಮೋದ್‌ ಮುತಾಲಿಕ್‌ ಆಗ್ರಹ

ಹಿರಿಯೂರು ಬಸ್ ಅಪಘಾತ : ತನಿಖೆ ನಡೆಸಲಾಗುವುದು
ಚಿತ್ರದುರ್ಗದ ಹಿರಿಯೂರು ಬಳಿ ನಡೆದ ಬಸ್ ಮತ್ತು ಟ್ರಕ್ ಅಪಘಾತದ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಈ ಅಪಘಾತದಲ್ಲಿ ಟ್ರಕ್ ಚಾಲನ ತಪ್ಪಿರುವುದಾಗಿ ಮೇಲ್ನೋಟಕ್ಕೆ ಕಂಡು ಬರುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಟ್ರಕ್ ವಿಭಜಕವನ್ನು ದಾಟಿ ಬಸ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 4 ಮಹಿಳೆಯರು ಹಾಗೂ ಒಂದು ಮಗು ಹಾಗೂ ಟ್ರಕ್ ಚಾಲಕ ಸಾವಿಗೀಡಾಗಿದ್ದಾರೆ. ಬಸ್ಸುಗಳು ಎಲ್ಲಾ ಸುರಕ್ಷತೆಯ ಕ್ರಮಗಳನ್ನು ಅನುಸರಿಸುವುದು ಅವಶ್ಯಕ. ಅಪಘಾತದ ಬಗ್ಗೆ ತನಿಖೆ ನಡೆಸಲಾಗುವುದು ಎಂದರು.

ಕಾಂಗ್ರೆಸ್ ನ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಲು ಇಂದು ನವದೆಹಲಿಗೆ ತೆರಳುತ್ತಿರುವುದಾಗಿ ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

2 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

15 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

15 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

15 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

15 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

15 hours ago