ರಾಜ್ಯ

ಕೌನ್ಸಿಲಿಂಗ್‌ ಮೂಲಕ 1300 ನೌಕರರ ವರ್ಗಾವಣೆ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು 2024 – 25ನೇ ಸಾಲಿನ ಆಯವ್ಯಯ ಘೋಷಣೆಯಂತೆ ರಾಜ್ಯದಲ್ಲಿ ಮೊದಲ ಬಾರಿಗೆ ರಾಜ್ಯದ 31 ಜಿಲ್ಲೆಗಳಲ್ಲಿ ಗ್ರಾಮ ಪಂಚಾಯತಿಗಳ ಕಾರ್ಯದರ್ಶಿ ಗ್ರೇಡ್ – 1 ಮತ್ತು ಗ್ರೇಡ್ -2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆ ಪ್ರಕ್ರಿಯೆಯನ್ನು ಆನ್‌ಲೈನ್‌ ಕೌನ್ಸಿಲಿಂಗ್‌ ಮೂಲಕ ಕೈಗೊಂಡು ಯಶಸ್ವಿಯಾಗಿ ಪೂರ್ಣಗೊಳಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ವರ್ಗಾವಣೆ ಪ್ರಕ್ರಿಯೆಯಲ್ಲಿ 31 ಜಿಲ್ಲೆಗಳಲ್ಲಿ ಒಟ್ಟು 2697 ನೌಕರರಿಂದ ವರ್ಗಾವಣೆಗಾಗಿ ಅರ್ಜಿಗಳು ಸ್ವೀಕೃತವಾಗಿದ್ದವು. ಇವುಗಳಲ್ಲಿ ನೌಕರರು ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಿ ಅರ್ಹತೆ ಹೊಂದಿದ 1300 ನೌಕರರಿಗೆ ಆನ್ ಲೈನ್ ಮೂಲಕ ಕೌನ್ಸೆಲಿಂಗ್‌ ನಡೆಸಿದ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಡಿಜಿಟಲ್‌ ಸಹಿ ಮಾಡಿದ ವರ್ಗಾವಣೆ ಆದೇಶಗಳನ್ನು ಹೊರಡಿಸಿ ಸ್ಥಳದಲ್ಲೇ ನೌಕರರಿಗೆ ನೀಡಿರುತ್ತಾರೆ ಎಂದೂ ಸಚಿವರು ಮಾಹಿತಿ ನೀಡಿದ್ದಾರೆ.

ಮೊದಲ ಸುತ್ತು ಹಾಗೂ ದ್ವಿತೀಯ ಸುತ್ತಿನಲ್ಲಿ ವಿಶೇಷ ಪ್ರಕರಣಗಳಾದ ಗಂಭೀರ ಅನಾರೋಗ್ಯ, (Serious Ailments), ವಿಶೇಷ ಚೇತನರು ಹಾಗೂ ಪತಿ-ಪತ್ನಿ ಪ್ರಕರಣಗಳ ವರ್ಗಾವಣೆ ಕೌನ್ಸೆಲಿಂಗ್‌ನ್ನು ಜುಲೈ 25ರಂದು ನಡೆಸಿ 161 ನೌಕರರಿಗೆ ಹಾಗೂ ಎರಡನೆಯ ಹಂತದಲ್ಲಿ ಸಾಮಾನ್ಯ ಕೋರಿಕೆ ಪ್ರಕರಣಗಳ 619 ನೌಕರರಿಗೆ ಜುಲೈ 28ರಂದು ಹಾಗೂ ಕೊನೆಯ ಹಂತದಲ್ಲಿ ಕಡ್ಡಾಯ ವರ್ಗಾವಣೆ ಕೌನ್ಸೆಲಿಂಗ್‌ನ್ನು ಜುಲೈ 29 ಮತ್ತು 30ರಂದು ಕೈಗೊಂಡು 520 ನೌಕರರಿಗೆ ಡಿಜಿಟಲ್‌ ಸಹಿ ಮಾಡಿದ ವರ್ಗಾವಣೆ ಆದೇಶಗಳನ್ನು ನೀಡಲಾಯಿತು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು ಮೊದಲ ಬಾರಿಗೆ ವರ್ಗಾವಣೆ ಪ್ರಕ್ರಿಯೆಯನ್ನು ಆನ್‌ ಲೈನ್‌ ಕೌನ್ಸಿಲಿಂಗ್‌ ಮೂಲಕ ಯಶಸ್ವಿಯಾಗಿ ನಡೆಸಿ ಆಡಳಿತದಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳುವ ಜೊತೆಗೆ ದಕ್ಷತೆ ಹೆಚ್ಚಿಸುವ ನಿಟ್ಟಿನಲ್ಲಿ ಹೆಜ್ಜೆ ಇರಿಸಿದೆ ಎಂದು ಗ್ರಾಮೀಣಾಭಿವೃದ್ಧಿ ಮತು ಪಂಚಾಯತ್‌ ರಾಜ್‌ ಸಚಿವರು ತಿಳಿಸಿದ್ದಾರೆ.

ಅಂತರಜಿಲ್ಲೆ ವರ್ಗಾವಣೆಗೆ ಅರ್ಹರಿದ್ದ 7 ನೌಕರರ ಪೈಕಿ ಐವರು ನೌಕರರಿಗೆ ವರ್ಗಾವಣೆ ಆದೇಶ ನೀಡುವ ಮೂಲಕ ಪಂಚಾಯತ್‌ ರಾಜ್‌ ಇಲಾಖೆಯ ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್ ಜುಲೈ 22ರಂದು ಆನ್‌ ಲೈನ್‌ ಕೌನ್ಸಿಲಿಂಗ್‌ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡಿದ್ದರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

5 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

5 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

5 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

5 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

5 hours ago