ರಾಜ್ಯ

ನೀರಾವರಿ ಇಲಾಖೆಯ 42 ಮಂದಿ ಎಇಇ ವರ್ಗಾವಣೆ

ಮೈಸೂರು : ಜಲಸಂಪನ್ಮೂಲ ಇಲಾಖೆಯ 42 ಮಂದಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್(ಎಇಇ)ಗಳನ್ನು ವರ್ಗಾವಣೆ ಮಾಡಲಾಗಿದೆ.

ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನ ಕಾವೇರಿ ನೀರಾವರಿ ನಿಗಮ ನಿಯಮಿತ ಕಿಬ್ಬನಹಳ್ಳಿ ಉಪವಿಭಾಗದ ಎಇಇ ಟಿ.ಎಸ್.ಹರೀಶ್ ಅವರನ್ನು ಮಂಡ್ಯದ ಬೆಳ್ಳೂರು ಕಾವೇರಿ ನೀರಾವರಿ ನಿಗಮ ನಿಯಮಿತ(ಕಾನೀನಿನಿ) ಹೇಮಾವತಿ ನಾಲಾ ಉಪ ವಿಭಾಗದ ಹುದ್ದೆಗೆ, ಹೇಮಾವತಿ ನಾಲಾ ಉಪವಿಭಾಗದ ಎಇಇ ಎನ್.ಎನ್.ರಾಜೇಗೌಡ ಅವರನ್ನು ಮಂಡ್ಯದ ನಾಗಮಂಗಲ ತಾಲ್ಲೂಕು ಬೆಳ್ಳೂರು ಕ್ರಾಸ್ ಹೇಮಾವತಿ ನಾಲಾ ಉಪವಿಭಾಗದ ಹುದ್ದೆಗೆ, ಹಾಸನ ಜಿಲ್ಲೆ ಸಕಲೇಶಪುರದ ವಿಶ್ವೇಶ್ವರಯ್ಯ ಜಲ ನಿಗಮದ ಎತ್ತಿನಹೊಳೆ ಯೋಜನಾ ಉಪವಿಭಾಗದ ಎಇಇ ಎಚ್.ಎಂ. ಶಶಿಕುಮಾರ್ ಅವರನ್ನು ಹಾಸನದ ಗೊರೂರು ಹೇಮಾವತಿ ಯೋಜನಾ ವಲಯದ ಮುಖ್ಯ ಇಂಜಿನಿಯರ್ ಕಚೇರಿಯ ತಾಂತ್ರಿಕ ಸಹಾಯಕ ಹುದ್ದೆಗೆ ವರ್ಗಾಯಿಸಲಾಗಿದೆ.

ಸ್ಥಳ ನಿರೀಕ್ಷೆಯಲ್ಲಿದ್ದ ಎಇಇ ವೈ.ಸಿ. ನವೀನ್‌ಕುಮಾರ್ ಅವರನ್ನು ಕಾವೇರಿ ನೀರಾವರಿ ನಿಗಮ ನಿಯಮಿತ ವಿಸಿಸಿ ಉಪವಿಭಾಗದ ಹುದ್ದೆಗೆ, ಸ್ಥಳ ನಿರೀಕ್ಷೆಯಲ್ಲಿದ್ದ ಎಇಇ ಕೆ. ಯದುಕೃಷ್ಣ ಅವರನ್ನು ನಾಗಮಂಗಲದ ಕಾನೀನಿನಿ ಎಚ್‌ಎಲ್‌ಬಿಸಿ ಉಪವಿಭಾಗದ ಹುದ್ದೆಗೆ, ಸ್ಥಳ ನಿರೀಕ್ಷೆಯಲ್ಲಿದ್ದ ಡಿ.ಎಚ್. ಅನಿಲ್‌ಕುಮಾರ್ ಅವರನ್ನು ಮೈಸೂರು ಅಧಿಕ್ಷಕ ಇಂಜಿನಿಯರ್ ಕಚೇರಿಯ ನೀರಾವರಿ ತನಿಖಾ ವೃತ್ತದ ತಾಂತ್ರಿಕ ಸಹಾಯಕ ಹುದ್ದೆಗೆ, ಸ್ಥಳ ನಿರೀಕ್ಷೆಯಲ್ಲಿದ್ದ ಕೆ.ಎಸ್.ಮಹೇಶ್ ಅವರನ್ನು ಚಾಮರಾಜನಗರದ ಅಟ್ಟುಗುಳಿಪುರದ ಕಾವೇರಿ ನೀರಾವರಿ ನಿಗಮ ನಿಯಮಿತದ ಸಿಆರ್‌ಆರ್ ಉಪ ವಿಭಾಗದ ಹುದ್ದೆಗೆ ವರ್ಗಾಯಿಸಲಾಗಿದ್ದು, ಇವರು ಸೇರಿದಂತೆ 42 ಮಂದಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ಗಳನ್ನು ವರ್ಗಾವಣೆ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

2030ರ ವೇಳೆಗೆ 2 ಮಿಲಿಯನ್‌ ಉದ್ಯೋಗ ಸೃಷ್ಟಿ, ಅಭಿವೃದ್ಧಿ ಪರ ಆಯವ್ಯಯ : ಸಂಸದ ಯದುವೀರ್‌

ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ…

5 hours ago

ಜನರನ್ನು ದಿಕ್ಕು ತಪ್ಪಿಸುತ್ತಿರುವ ಎನ್‌ಸಿಬಿ : ಎಂ.ಲಕ್ಷ್ಮಣ್‌ ಆರೋಪ

ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್‌ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ.…

5 hours ago

ಬಡತನ ಪ್ರಮಾಣ ಗಣನೀಯ ಇಳಿಕೆ: ನಿರ್ಮಲಾ

ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ…

5 hours ago

ಕೇಂದ್ರ ಬಜೆಟ್‌ | 17.2 ಲಕ್ಷ ಕೋಟಿ ರೂ. ಸಾಲ

ಹೊಸದಿಲ್ಲಿ : ಕೇಂದ್ರ ಸರ್ಕಾರ 2026-27 ನೇ ಸಾಲಿಗೆ 17.2 ಲಕ್ಷ ಕೋಟಿ ರೂ. ಸಾಲ ಪಡೆಯಲಿದೆ ಎಂದು ಹಣಕಾಸು…

5 hours ago

ಕೇಂದ್ರ ಬಜೆಟ್‌ | ಯಾವುದು ಅಗ್ಗ, ಯಾವುದು ದುಬಾರಿ ?

ಹೊಸದಿಲ್ಲಿ : ಹಲವು ಉತ್ಪನ್ನಗಳ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಆಯವ್ಯಯದಲ್ಲಿ…

6 hours ago

ಕರ್ನಾಟಕ ವಿರೋಧಿ ಬಜೆಟ್‌ : ಎಚ್‌ಸಿಎಂ ವ್ಯಂಗ್ಯ

ಬೆಂಗಳೂರು : ಹಣಕಾಸು ತಜ್ಞೆ ಅಲ್ಲದ ಕೇಂದ್ರದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸುತ್ತಿರುವ ೯ನೇ ಕಳಪೆ ಬಜೆಟ್ ಇದಾಗಿದೆ.…

6 hours ago