ಮೈಸೂರು : ಜಲಸಂಪನ್ಮೂಲ ಇಲಾಖೆಯ 42 ಮಂದಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್(ಎಇಇ)ಗಳನ್ನು ವರ್ಗಾವಣೆ ಮಾಡಲಾಗಿದೆ.
ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನ ಕಾವೇರಿ ನೀರಾವರಿ ನಿಗಮ ನಿಯಮಿತ ಕಿಬ್ಬನಹಳ್ಳಿ ಉಪವಿಭಾಗದ ಎಇಇ ಟಿ.ಎಸ್.ಹರೀಶ್ ಅವರನ್ನು ಮಂಡ್ಯದ ಬೆಳ್ಳೂರು ಕಾವೇರಿ ನೀರಾವರಿ ನಿಗಮ ನಿಯಮಿತ(ಕಾನೀನಿನಿ) ಹೇಮಾವತಿ ನಾಲಾ ಉಪ ವಿಭಾಗದ ಹುದ್ದೆಗೆ, ಹೇಮಾವತಿ ನಾಲಾ ಉಪವಿಭಾಗದ ಎಇಇ ಎನ್.ಎನ್.ರಾಜೇಗೌಡ ಅವರನ್ನು ಮಂಡ್ಯದ ನಾಗಮಂಗಲ ತಾಲ್ಲೂಕು ಬೆಳ್ಳೂರು ಕ್ರಾಸ್ ಹೇಮಾವತಿ ನಾಲಾ ಉಪವಿಭಾಗದ ಹುದ್ದೆಗೆ, ಹಾಸನ ಜಿಲ್ಲೆ ಸಕಲೇಶಪುರದ ವಿಶ್ವೇಶ್ವರಯ್ಯ ಜಲ ನಿಗಮದ ಎತ್ತಿನಹೊಳೆ ಯೋಜನಾ ಉಪವಿಭಾಗದ ಎಇಇ ಎಚ್.ಎಂ. ಶಶಿಕುಮಾರ್ ಅವರನ್ನು ಹಾಸನದ ಗೊರೂರು ಹೇಮಾವತಿ ಯೋಜನಾ ವಲಯದ ಮುಖ್ಯ ಇಂಜಿನಿಯರ್ ಕಚೇರಿಯ ತಾಂತ್ರಿಕ ಸಹಾಯಕ ಹುದ್ದೆಗೆ ವರ್ಗಾಯಿಸಲಾಗಿದೆ.
ಸ್ಥಳ ನಿರೀಕ್ಷೆಯಲ್ಲಿದ್ದ ಎಇಇ ವೈ.ಸಿ. ನವೀನ್ಕುಮಾರ್ ಅವರನ್ನು ಕಾವೇರಿ ನೀರಾವರಿ ನಿಗಮ ನಿಯಮಿತ ವಿಸಿಸಿ ಉಪವಿಭಾಗದ ಹುದ್ದೆಗೆ, ಸ್ಥಳ ನಿರೀಕ್ಷೆಯಲ್ಲಿದ್ದ ಎಇಇ ಕೆ. ಯದುಕೃಷ್ಣ ಅವರನ್ನು ನಾಗಮಂಗಲದ ಕಾನೀನಿನಿ ಎಚ್ಎಲ್ಬಿಸಿ ಉಪವಿಭಾಗದ ಹುದ್ದೆಗೆ, ಸ್ಥಳ ನಿರೀಕ್ಷೆಯಲ್ಲಿದ್ದ ಡಿ.ಎಚ್. ಅನಿಲ್ಕುಮಾರ್ ಅವರನ್ನು ಮೈಸೂರು ಅಧಿಕ್ಷಕ ಇಂಜಿನಿಯರ್ ಕಚೇರಿಯ ನೀರಾವರಿ ತನಿಖಾ ವೃತ್ತದ ತಾಂತ್ರಿಕ ಸಹಾಯಕ ಹುದ್ದೆಗೆ, ಸ್ಥಳ ನಿರೀಕ್ಷೆಯಲ್ಲಿದ್ದ ಕೆ.ಎಸ್.ಮಹೇಶ್ ಅವರನ್ನು ಚಾಮರಾಜನಗರದ ಅಟ್ಟುಗುಳಿಪುರದ ಕಾವೇರಿ ನೀರಾವರಿ ನಿಗಮ ನಿಯಮಿತದ ಸಿಆರ್ಆರ್ ಉಪ ವಿಭಾಗದ ಹುದ್ದೆಗೆ ವರ್ಗಾಯಿಸಲಾಗಿದ್ದು, ಇವರು ಸೇರಿದಂತೆ 42 ಮಂದಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ಗಳನ್ನು ವರ್ಗಾವಣೆ ಮಾಡಲಾಗಿದೆ.
ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…
ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…
ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ಗೆ ಸುಪ್ರೀಂ ಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…
ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…