ರಾಜ್ಯ

ನೀರಾವರಿ ಇಲಾಖೆಯ 42 ಮಂದಿ ಎಇಇ ವರ್ಗಾವಣೆ

ಮೈಸೂರು : ಜಲಸಂಪನ್ಮೂಲ ಇಲಾಖೆಯ 42 ಮಂದಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್(ಎಇಇ)ಗಳನ್ನು ವರ್ಗಾವಣೆ ಮಾಡಲಾಗಿದೆ.

ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನ ಕಾವೇರಿ ನೀರಾವರಿ ನಿಗಮ ನಿಯಮಿತ ಕಿಬ್ಬನಹಳ್ಳಿ ಉಪವಿಭಾಗದ ಎಇಇ ಟಿ.ಎಸ್.ಹರೀಶ್ ಅವರನ್ನು ಮಂಡ್ಯದ ಬೆಳ್ಳೂರು ಕಾವೇರಿ ನೀರಾವರಿ ನಿಗಮ ನಿಯಮಿತ(ಕಾನೀನಿನಿ) ಹೇಮಾವತಿ ನಾಲಾ ಉಪ ವಿಭಾಗದ ಹುದ್ದೆಗೆ, ಹೇಮಾವತಿ ನಾಲಾ ಉಪವಿಭಾಗದ ಎಇಇ ಎನ್.ಎನ್.ರಾಜೇಗೌಡ ಅವರನ್ನು ಮಂಡ್ಯದ ನಾಗಮಂಗಲ ತಾಲ್ಲೂಕು ಬೆಳ್ಳೂರು ಕ್ರಾಸ್ ಹೇಮಾವತಿ ನಾಲಾ ಉಪವಿಭಾಗದ ಹುದ್ದೆಗೆ, ಹಾಸನ ಜಿಲ್ಲೆ ಸಕಲೇಶಪುರದ ವಿಶ್ವೇಶ್ವರಯ್ಯ ಜಲ ನಿಗಮದ ಎತ್ತಿನಹೊಳೆ ಯೋಜನಾ ಉಪವಿಭಾಗದ ಎಇಇ ಎಚ್.ಎಂ. ಶಶಿಕುಮಾರ್ ಅವರನ್ನು ಹಾಸನದ ಗೊರೂರು ಹೇಮಾವತಿ ಯೋಜನಾ ವಲಯದ ಮುಖ್ಯ ಇಂಜಿನಿಯರ್ ಕಚೇರಿಯ ತಾಂತ್ರಿಕ ಸಹಾಯಕ ಹುದ್ದೆಗೆ ವರ್ಗಾಯಿಸಲಾಗಿದೆ.

ಸ್ಥಳ ನಿರೀಕ್ಷೆಯಲ್ಲಿದ್ದ ಎಇಇ ವೈ.ಸಿ. ನವೀನ್‌ಕುಮಾರ್ ಅವರನ್ನು ಕಾವೇರಿ ನೀರಾವರಿ ನಿಗಮ ನಿಯಮಿತ ವಿಸಿಸಿ ಉಪವಿಭಾಗದ ಹುದ್ದೆಗೆ, ಸ್ಥಳ ನಿರೀಕ್ಷೆಯಲ್ಲಿದ್ದ ಎಇಇ ಕೆ. ಯದುಕೃಷ್ಣ ಅವರನ್ನು ನಾಗಮಂಗಲದ ಕಾನೀನಿನಿ ಎಚ್‌ಎಲ್‌ಬಿಸಿ ಉಪವಿಭಾಗದ ಹುದ್ದೆಗೆ, ಸ್ಥಳ ನಿರೀಕ್ಷೆಯಲ್ಲಿದ್ದ ಡಿ.ಎಚ್. ಅನಿಲ್‌ಕುಮಾರ್ ಅವರನ್ನು ಮೈಸೂರು ಅಧಿಕ್ಷಕ ಇಂಜಿನಿಯರ್ ಕಚೇರಿಯ ನೀರಾವರಿ ತನಿಖಾ ವೃತ್ತದ ತಾಂತ್ರಿಕ ಸಹಾಯಕ ಹುದ್ದೆಗೆ, ಸ್ಥಳ ನಿರೀಕ್ಷೆಯಲ್ಲಿದ್ದ ಕೆ.ಎಸ್.ಮಹೇಶ್ ಅವರನ್ನು ಚಾಮರಾಜನಗರದ ಅಟ್ಟುಗುಳಿಪುರದ ಕಾವೇರಿ ನೀರಾವರಿ ನಿಗಮ ನಿಯಮಿತದ ಸಿಆರ್‌ಆರ್ ಉಪ ವಿಭಾಗದ ಹುದ್ದೆಗೆ ವರ್ಗಾಯಿಸಲಾಗಿದ್ದು, ಇವರು ಸೇರಿದಂತೆ 42 ಮಂದಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ಗಳನ್ನು ವರ್ಗಾವಣೆ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

40 mins ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

49 mins ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

54 mins ago

ಜು.20ಕ್ಕೆ ವಿಧಾನಪರಿಷತ್ ಐದು ಸ್ಥಾನ ತೆರವು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…

1 hour ago

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

10 hours ago