ಮೈಸೂರು : ಜಲಸಂಪನ್ಮೂಲ ಇಲಾಖೆಯ 42 ಮಂದಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್(ಎಇಇ)ಗಳನ್ನು ವರ್ಗಾವಣೆ ಮಾಡಲಾಗಿದೆ.
ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನ ಕಾವೇರಿ ನೀರಾವರಿ ನಿಗಮ ನಿಯಮಿತ ಕಿಬ್ಬನಹಳ್ಳಿ ಉಪವಿಭಾಗದ ಎಇಇ ಟಿ.ಎಸ್.ಹರೀಶ್ ಅವರನ್ನು ಮಂಡ್ಯದ ಬೆಳ್ಳೂರು ಕಾವೇರಿ ನೀರಾವರಿ ನಿಗಮ ನಿಯಮಿತ(ಕಾನೀನಿನಿ) ಹೇಮಾವತಿ ನಾಲಾ ಉಪ ವಿಭಾಗದ ಹುದ್ದೆಗೆ, ಹೇಮಾವತಿ ನಾಲಾ ಉಪವಿಭಾಗದ ಎಇಇ ಎನ್.ಎನ್.ರಾಜೇಗೌಡ ಅವರನ್ನು ಮಂಡ್ಯದ ನಾಗಮಂಗಲ ತಾಲ್ಲೂಕು ಬೆಳ್ಳೂರು ಕ್ರಾಸ್ ಹೇಮಾವತಿ ನಾಲಾ ಉಪವಿಭಾಗದ ಹುದ್ದೆಗೆ, ಹಾಸನ ಜಿಲ್ಲೆ ಸಕಲೇಶಪುರದ ವಿಶ್ವೇಶ್ವರಯ್ಯ ಜಲ ನಿಗಮದ ಎತ್ತಿನಹೊಳೆ ಯೋಜನಾ ಉಪವಿಭಾಗದ ಎಇಇ ಎಚ್.ಎಂ. ಶಶಿಕುಮಾರ್ ಅವರನ್ನು ಹಾಸನದ ಗೊರೂರು ಹೇಮಾವತಿ ಯೋಜನಾ ವಲಯದ ಮುಖ್ಯ ಇಂಜಿನಿಯರ್ ಕಚೇರಿಯ ತಾಂತ್ರಿಕ ಸಹಾಯಕ ಹುದ್ದೆಗೆ ವರ್ಗಾಯಿಸಲಾಗಿದೆ.
ಸ್ಥಳ ನಿರೀಕ್ಷೆಯಲ್ಲಿದ್ದ ಎಇಇ ವೈ.ಸಿ. ನವೀನ್ಕುಮಾರ್ ಅವರನ್ನು ಕಾವೇರಿ ನೀರಾವರಿ ನಿಗಮ ನಿಯಮಿತ ವಿಸಿಸಿ ಉಪವಿಭಾಗದ ಹುದ್ದೆಗೆ, ಸ್ಥಳ ನಿರೀಕ್ಷೆಯಲ್ಲಿದ್ದ ಎಇಇ ಕೆ. ಯದುಕೃಷ್ಣ ಅವರನ್ನು ನಾಗಮಂಗಲದ ಕಾನೀನಿನಿ ಎಚ್ಎಲ್ಬಿಸಿ ಉಪವಿಭಾಗದ ಹುದ್ದೆಗೆ, ಸ್ಥಳ ನಿರೀಕ್ಷೆಯಲ್ಲಿದ್ದ ಡಿ.ಎಚ್. ಅನಿಲ್ಕುಮಾರ್ ಅವರನ್ನು ಮೈಸೂರು ಅಧಿಕ್ಷಕ ಇಂಜಿನಿಯರ್ ಕಚೇರಿಯ ನೀರಾವರಿ ತನಿಖಾ ವೃತ್ತದ ತಾಂತ್ರಿಕ ಸಹಾಯಕ ಹುದ್ದೆಗೆ, ಸ್ಥಳ ನಿರೀಕ್ಷೆಯಲ್ಲಿದ್ದ ಕೆ.ಎಸ್.ಮಹೇಶ್ ಅವರನ್ನು ಚಾಮರಾಜನಗರದ ಅಟ್ಟುಗುಳಿಪುರದ ಕಾವೇರಿ ನೀರಾವರಿ ನಿಗಮ ನಿಯಮಿತದ ಸಿಆರ್ಆರ್ ಉಪ ವಿಭಾಗದ ಹುದ್ದೆಗೆ ವರ್ಗಾಯಿಸಲಾಗಿದ್ದು, ಇವರು ಸೇರಿದಂತೆ 42 ಮಂದಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ಗಳನ್ನು ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…