ರಾಜ್ಯ

ರೋಹಿಣಿ ಸಿಂಧೂರಿ, ಡಿ.ರೂಪ ಸೇರಿ ಹಲವು ಐಎಎಸ್‌ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು : ರೋಹಿಣಿ ಸಿಂಧೂರಿ, ಡಿ.ರೂಪ ಸೇರಿದಂತೆ ಹಲವು ಐಎಎಸ್‌ ಹಾಗೂ ಐಪಿಎಸ್‌ ಅಧಿಕಾರಿಗಳನ್ನು ವರ್ಗಾಯಿಸಿ ಸರ್ಕಾರ ಆದೇಶ ಹೊರಡಿಸಿದೆ.

ಐಎಎಸ್‌ ಅಧಿಕಾರಿ ಶೆಟ್ಟೆನ್ನವರ್‌ ಎಸ್‌.ಬಿ ಅವರನ್ನು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರಾಗಿ ನೇಮಕ ಮಾಡಲಾಗಿದೆ.

ಕೃಷಿ ಇಲಾಖೆ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಅವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದ ಡಾ.ಎನ್‌.ವಿ ಪ್ರಸಾದ್‌ ಅವರನ್ನು ಬಿಡುಗಡೆಗೊಳಿಸಲಾಗಿದೆ.

ಹುದ್ದೆ ನಿರೀಕ್ಷೆಯಲ್ಲಿದ್ದ ಐಎಎಸ್‌ ಅಧಿಕಾರಿ ಅಕ್ರಂ ಪಾಷ ಅವರನ್ನು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸಲಾಗಿದೆ.

ಇದನ್ನು ಓದಿ:- ಮೈಸೂರು | ಅಂಬೇಡ್ಕರ್‌ ಬ್ಯಾನರ್‌ ತೆರವು : ವಿದ್ಯಾರ್ಥಿಗಳಿಂದ ಮುಂದುವರೆದ ಪ್ರತಿಭಟನೆ

ಇನ್ನೂ ಕರ್ನಾಟಕ ರೇಷ್ಮೆ ಮಾರುಕಟ್ಟೆ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಐಪಿಎಸ್‌ ಅಧಿಕಾರಿ ಡಿ.ರೂಪ ಅವರನ್ನು ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ವರ್ಗಾಯಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

2 hours ago

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

5 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

6 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

7 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

8 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

12 hours ago